ದಿನಕ್ಕೊಂದು ಭ್ರಷ್ಟಾಚಾರ ಬೆಳಕಿಗೆ: ಕಾಂಗ್ರೆಸ್ ವಿರುದ್ಧ ಪಿ. ರಾಜೀವ್
Team Udayavani, Sep 10, 2024, 2:20 PM IST
ಹಾವೇರಿ: ರಾಜ್ಯದಲ್ಲಿ ದಿನಕ್ಕೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬರುತ್ತಿದೆ. ಭ್ರಷ್ಟಾಚಾರದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿರುವುದು ರಾಜ್ಯದ ದುರದೃಷ್ಟಕರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ. ರಾಜೀವ್ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಎರಡು ಬಾರಿ ರಾಜಸ್ವ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಎರಡು, ಮೂರು ವರ್ಷ ಹೀಗೆಯೇ ಮುಂದುವರಿದರೆ ಸಾಲದ ಸುಳಿಯಲ್ಲಿ ರಾಜ್ಯ ಸಿಲುಕಿಕೊಳ್ಳುತ್ತದೆ. ಸಿದ್ದರಾಮಯ್ಯ ಹಿಂದಿನ ಬಜೆಟ್ಗಳಲ್ಲಿ ರಾಜಸ್ವ ಕೊರತೆ ಇಲ್ಲದ ಬಜೆಟ್ ಕೊಟ್ಟಿದ್ದೇನೆ ಎಂದು ಗರ್ವದಿಂದ ಹೇಳುತ್ತಿದ್ದರು.
ಆದರೆ ಕಳೆದ ಬಾರಿ 12,500 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಈ ಬಾರಿ 25,000 ಕೋಟಿ ರೂ. ಆಗಿದೆ. ಸರ್ಕಾರದ 1.5 ಲಕ್ಷ ಕೋಟಿ ಸಾಲದಲ್ಲಿ ರಾಜಸ್ವ ಕೊರತೆಗೇ ಭಾಗಶಃ ಹಣ ವ್ಯಯಿಸಲಾಗುತ್ತದೆ. ದೇಶದಲ್ಲೇ ಸುಭದ್ರವಾಗಿದ್ದ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವ ಆತಂಕ ಎದುರಾಗಿದೆ ಎಂದರು. ಕೆಐಡಿಬಿಯಲ್ಲಿ ಒಂದು ನಿವೇಶನಕ್ಕೆ 50 ಲಕ್ಷ
ಲಂಚ ಕೊಡಬೇಕಿದೆ. ಈ ಕುರಿತು ಬಿಜೆಪಿ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಎಲ್ಲ ಆಸ್ಪತ್ರೆಗಳಿಗೆ ಪ್ಯಾರಾಸಿಟಮಲ್ ಔಷಧ ಸರಬರಾಜು ಮಾಡಲಾಗುತ್ತಿಲ್ಲ. ಬಿತ್ತನೆ ಬೀಜ, ಪೆಟ್ರೋಲ್
ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ರಾಜ್ಯದ ಹಾಲು ಉತ್ಪಾದಕರಿಗೆ ಸರ್ಕಾರ 1,450 ಕೋಟಿ ರೂ. ಸಹಾಯಧನ ಬಾಕಿ ಉಳಿಸಿಕೊಂಡಿದೆ. ರೈತರ ಹಣ ಬಾಕಿ ಉಳಿಸಿಕೊಂಡ ಹೊಣೆಗೇಡಿ ಸರ್ಕಾರ ಇದು. ಸಾರಿಗೆ ನಿಗಮದ ನೌಕರರಿಗೆ 1,200 ಕೋಟಿಗೂ ಅಧಿಕ ಗ್ರ್ಯಾಚುಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ಮಾಜಿ ಶಾಸಕ ಶಿವರಾಜ ಸಜ್ಜನರ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಡಾ| ಶೋಭಾ ನಿಸ್ಸೀಮಗೌಡ್ರ, ಡಾ| ಬಸವರಾಜ ಕೇಲಗಾರ, ಭೋಜರಾಜ ಕರೂದಿ, ಮಂಜುನಾಥ ಓಲೇಕಾರ ಇತರರು ಇದ್ದರು.
ಶಿಗ್ಗಾವಿಗೆ ಅರ್ಹ ಅಭ್ಯರ್ಥಿ ಆಯ್ಕೆ ಶಿಗ್ಗಾವಿ ಉಪ ಚುನಾವಣೆ ಸಿದ್ಧತೆ ಕುರಿತು ರಾಜ್ಯ ಪ್ರಭಾರಿ ನೇತೃತ್ವದಲ್ಲಿ ಶೀಘ್ರದಲ್ಲೇ ಸಭೆ ನಡೆಯಲಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿ ಸಿದೆ. ಭರತ ಬೊಮ್ಮಾಯಿ ಸೇರಿದಂತೆ ಹಲವರು
ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕುಟುಂಬ ರಾಜಕಾರಣವನ್ನು ಬಿಜೆಪಿ ಯಾವತ್ತೂ ವಿರೋ ಧಿಸಿದೆ. ಸಮೀಕ್ಷೆ ಮಾಡಿದ ಬಳಿಕ ಹೈಕಮಾಂಡ್ ಅರ್ಹರನ್ನು ಆಯ್ಕೆ ಮಾಡುತ್ತದೆ ಎಂದು ಪಿ. ರಾಜೀವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.