ಗೋಮಾಳ ಜಾಗ ಆಶ್ರಯ ಮನೆಗೆ ಬಳಸಬೇಡಿ

ಗೋಮಾಳಕ್ಕೆ ಕೈ ಹಾಕಿದಲ್ಲಿ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ

Team Udayavani, Aug 3, 2022, 1:32 PM IST

ಗೋಮಾಳ ಜಾಗ ಆಶ್ರಯ ಮನೆಗೆ ಬಳಸಬೇಡಿ

ಬ್ಯಾಡಗಿ: ಪಟ್ಟಣ ಹೊರವಲಯದಲ್ಲಿ ಜಾನುವಾರುಗಳಿಗೆ ಮೀಸಲಿಟ್ಟ ಗೋಮಾಳ ಜಾಗವನ್ನು ಆಶ್ರಯ ಯೋಜನೆಗೆ ಬಳಸದಂತೆ ಆಗ್ರಹಿಸಿ, ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಕಾರ್ಯಕರ್ತರು ನಂತರ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಗಂಗಣ್ಣ ಎಲಿ, ಬ್ಯಾಡಗಿ ಪಟ್ಟಣ ದಾದ್ಯಂತ ಇರುವ ಜಾನುವಾರು ಸಂಖ್ಯೆಗೆ ಅನುಗುಣವಾಗಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ಗುಡ್ಡದ ಅಕ್ಕಪಕ್ಕದಲ್ಲಿ ಉಳಿದಿರುವ ಗೋಮಾಳ ಜಾಗೆ ಉಳಿದಿದೆ. ಆದರೆ, ಬಡವ ರಿಗೆ ನಿವೇಶನ ನೀಡುವ ಹೆಸರಲ್ಲಿ ಗೋಮಾಳ ಜಾಗೆ ಕಬಳಿಸುವ ಹುನ್ನಾರ ನಡೆದಿದೆ.ಇಂತಹ ಪ್ರಯತ್ನಕ್ಕೆ ಮುಂದಾದವರ ವಿರುದ್ಧ ರೈತ ಸಂಘ ಪ್ರತಿಭಟನೆ ನಡೆಸಲು ಮುಂದಾಗಲಿದೆ ಎಂದು ಎಚ್ಚರಿಸಿದರು.

ಆಶ್ರಯ ಯೋಜನೆಗಾಗಿ ಜಾನುವಾರು ಗಳಿಗೆ ಮೀಸಲಿಟ್ಟ ಜಾಗೆಯಲ್ಲಿನ 9.31 ಎಕರೆ ಜಾಗೆಯ ಎಲ್ಲಾ ಕಡತಗಳನ್ನು ಅನುಮೋದನೆಗಾಗಿ ತಾಲೂಕು ಆಡಳಿತ, ಸರ್ಕಾರಕ್ಕೆ ಕಳುಹಿಸಿಕೊಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ. ಬಡವರಿಗೆ ನಿವೇಶನ ನೀಡಲು ಸರ್ಕಾರ ಇಚ್ಛಿಸಿದಲ್ಲಿ ಮಲ್ಲೂರ ರಸ್ತೆಯಲ್ಲಿ ಈಗಾಗಲೇ ಖರೀದಿ ಮಾಡಿದಂತೆ, ಬೇರೆಡೆಗೆ ಜಾಗ ಖರೀದಿ ಮಾಡಿ ನಿವೇಶನ ಹಂಚಿಕೆ ಮಾಡಲಿ.ಅಷ್ಟಕ್ಕೂ ಸರ್ಕಾರವೇನು ಬಡತನದಲ್ಲಿಲ್ಲ.

ಅದರ ಬದಲು ಗೋಮಾಳಕ್ಕೆ ಕೈ ಹಾಕಿದಲ್ಲಿ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದರು. ಬಸವರಾಜ ಸಂಕಣ್ಣನವರ ಮಾತನಾಡಿ, ಗೋಮಾಳ ಜಾಗೆ ಇತರೆ ಕಾರ್ಯಗಳಿಗೆ ದುರ್ಬಳಕೆ ಮಾಡಿಕೊಳ್ಳದಂತೆ ಈಗಾಗಲೇ ಹಲವು ಬಾರಿ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದೆ. ಆದರೆ, ನಮ್ಮ ಮನವಿಗೆ ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಯಾವುದೇ ಸ್ಪಂದನೆ ನೀಡಿಲ್ಲ. ಒಂದು ವೇಳೆ ಗೋಮಾಳ ಜಮೀನನ್ನು ಆಶ್ರಯ ಯೋಜನೆಗಾಗಿ ಬಳಕೆ ಮಾಡಿದಲ್ಲಿ ಪಟ್ಟಣದ ಎಲ್ಲಾ ಜಾನುವಾರುಗಳನ್ನು ತಾಲೂಕು ಕಚೇರಿಗ ನುಗ್ಗಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ಚಿಕ್ಕಪ್ಪ ಛತ್ರದ, ಪ್ರಶಾಂತ್‌ ಹಾಲನಗೌಡ್ರ, ರೈತ ಸಂಘದ ಸದಸ್ಯರು ಇದ್ದರು.

ಆಶ್ರಯ ನಿವೇಶನಕ್ಕೆ ಜಮೀನು ಮಂಜೂರಾತಿಗಾಗಿ ತಾಲೂಕು ಆಡಳಿತ ಕಳಿಸಿರುವ ಎಲ್ಲಾ ಕಡತಗಳನ್ನು ಮುಂದಿನ ಆ.8 ರೊಳಗೆ ವಾಪಸ್‌ ಪಡೆಯದಿದ್ದರೆ, ಆ.15ರ ಸ್ವಾತಂತ್ರ್ಯೋತ್ಸವದಂದು ತಾಲೂಕು ಆಡಳಿತದ ವಿರುದ್ಧ ಕಪ್ಪು ಪಟ್ಟಿ ಧರಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು.
ಗಂಗಣ್ಣ ಎಲಿ, ರೈತ ಮುಖಂಡ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.