ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಪಣ ತೊಡಿ: ಸ್ವಾಮೀಜಿ

ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ, ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ

Team Udayavani, Aug 27, 2022, 6:14 PM IST

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಪಣ ತೊಡಿ: ಸ್ವಾಮೀಜಿ

ಹಾವೇರಿ: ಹಾವೇರಿ ನೂತನ ಜಿಲ್ಲೆಯಾಗಿ ರಚನೆಗೊಂಡು 25 ವರ್ಷಗಳ ಅವಧಿಯಲ್ಲಿ ಹಲವಾರು ರಂಗಗಳಲ್ಲಿ ಮುನ್ನಡೆ ಸಾಧಿಸಿದೆ. ಭವಿಷ್ಯದ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ವರೂ ಪಣತೊಡಬೇಕಾಗಿದೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಸ್ಥಳೀಯ ಹೊಸಮಠದ ಬಸವೇಶ್ವರ ಬಿಇಡಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ “ಹಾವೇರಿ ಜಿಲ್ಲೆಗೆ ರಜತ ಸಂಭ್ರಮ-ಭವಿಷ್ಯದಲ್ಲಿ ನಮ್ಮ ಕನಸಿನ ಹಾವೇರಿ’ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನೂತನವಾಗಿ ಜಿಲ್ಲೆ ಅಸ್ತಿತ್ವಕ್ಕೆ ಬಂದಾಗ ನಿರೀಕ್ಷೆಗಳು ಬಹಳಷ್ಟಿದ್ದವು. ಅಭಿವೃದ್ಧಿ ಪ್ರಕ್ರಿಯೆ ಎಂಬುದು ಉತ್ತಮ ಬದುಕಿಗೆ ಹಾಗೂ ಜನರ ಕಾರ್ಯನಿರ್ವಹಣೆಗೆ ಇರುವ ಭೌತಿಕ ಸೌಕರ್ಯಗಳನ್ನು ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಲು ಹೊಸ ಕೌಶಲ್ಯಗಳನ್ನು ಪಡೆಯುವುದು ಹಾಗೂ ಅಳವಡಿಸಿಕೊಳ್ಳುವುದಕ್ಕಾಗಿ ವರಮಾನದ ಹೆಚ್ಚಳವನ್ನು ಒಳಗೊಳ್ಳುತ್ತದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಒದಗಿಸಲಾದ ವಿವಿಧ ಮೂಲಭೂತ ಕನಿಷ್ಟ ಅವಶ್ಯಕತೆಗಳು ಹಾಗೂ ಇತರ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳುಹಾಗೂ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪದರ್ಶಿಸಬೇಕು.

ಜಿಲ್ಲೆಯ ಅಭಿವೃದ್ಧಿಯಲ್ಲಿ ಜಿಲ್ಲೆಯ ಜನತೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಹಾವೇರಿ ಜಿಲ್ಲೆಯ ಇತಿಹಾಸದ ಬಗ್ಗೆ ಮಾತನಾಡಿದ ಉಪನ್ಯಾಸಕ ಪ್ರಮೋದ ನಲವಾಗಲ, ಹಾವೇರಿ ಜಿಲ್ಲೆಗೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯಿದೆ. ಶಿಲಾಶಾಸನಗಳು, ಪುರಾತನ ದೇವಾಲಯಗಳು ಜಿಲ್ಲೆಯ ಹಿರಿಮೆಯನ್ನು ಸಾರಿ, ಸಾರಿ ಹೇಳುತ್ತವೆ.

ಇಂದಿನ ಯುವಜನಾಂಗ ಇತಿಹಾಸ ಅರಿತು ಮುನ್ನಡೆಯಬೇಕಿದೆ ಎಂದರು. ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ನೂತನವಾಗಿ ಅಸ್ತಿತಕ್ಕೆ ಬಂದ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆ ಅತ್ಯಂತ ಸಮರ್ಪಕ ಜಿಲ್ಲೆಯಾಗಿದೆ. ಸಾಹಿತ್ಯಿಕವಾಗಿ ಹಾವೇರಿ ಜಿಲ್ಲೆ ಶ್ರೀಮಂತವಾಗಿದೆ. ವರಕವಿ ಸರ್ವಜ್ಞ, ದಾಸಶ್ರೇಷ್ಠರಾದ ಕನಕದಾಸರು, ನಾಡಿಗೆ ಭಾವೈಕ್ಯತೆ ಸಾರಿದ ಶರೀಫರು, ಗುರುಗೋವಿಂದ ಭಟ್ಟರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ.ಗೋಕಾಕ ಅವರಂತ ಅನೇಕ ಮಹನೀಯರನ್ನು
ನಾಡಿಗೆ ನೀಡಿದ ಹೆಮ್ಮೆ ಹಾವೇರಿ ಜಿಲ್ಲೆಗೆ ಇದೆ.

ಸರ್ಕಾರ ಅನೇಕ ಟ್ರಸ್ಟ್‌ಗಳನ್ನು, ಪ್ರಾಧಿಕಾರಗಳನ್ನು ಹಾವೇರಿ ಜಿಲ್ಲೆಯಲ್ಲಿ ರಚಿಸಿದೆ. ಹಾವೇರಿ ಜಿಲ್ಲೆ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಆದರೆ ಸಾಂಸ್ಕೃತಿಕ ರಾಜಕಾರಣದ ಕೊರತೆಯಿಂದಾಗಿ ಅನೇಕ ಅವಘಡಗಳಾಗುತ್ತಿವೆ. ಜಿಲ್ಲೆಯ ಮಹನೀಯರ ಹೆಸರಿನಲ್ಲಿರುವ ಟ್ರಸ್ಟ್‌ಗಳಿಗೆ ಸರ್ಕಾರ ಜಿಲ್ಲೆಯವರನ್ನು ನೇಮಿಸದೇ ಬೇರೆ ಜಿಲ್ಲೆಯವರನ್ನು ನೇಮಕ ಮಾಡಿದೆ.

ಅಂತವರಿಂದ ಹೇಗೆ ಕೆಲಸ ನಿರ್ವಹಿಸಲು ಸಾಧ್ಯ ಎನ್ನುವ ಸಾಮಾನ್ಯ ತಿಳಿವಳಿಕೆ ಅಧಿಕಾರದಲ್ಲಿರುವವರಿಗೆ ಇರಬೇಕಾಗುತ್ತದೆ ಎಂದರು. ಪತ್ರಕರ್ತ ಮಾಲತೇಶ ಅಂಗೂರ, ಹಾವೇರಿ ಜಿಲ್ಲೆ ರಚನೆಗೆ ನಡೆದ ಹೋರಾಟ ಹಾಗೂ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಉಪನ್ಯಾಸಕ ಶ್ರೀಧರ ಅಗಸಿಬಾಗಿಲ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಪ್ರಾವಾಸೋಧ್ಯಮಕ್ಕೆ ಸಾಕಷ್ಟು ಅವಕಾಶಗಳಿವೆ. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ, ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ ಎಂದರು.

ಜಿಲ್ಲೆಯ ಆರ್ಥಿಕಾಭಿವೃದ್ಧಿಯ ಕುರಿತು ಎಚ್‌.ಎಸ್‌. ಕಬ್ಬಿಣಕಂತಿಮಠ ಮಾತನಾಡಿ, ಜಿಲ್ಲೆ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಾದರೆ ಜಿಲ್ಲೆಯ ಜನರ ತಲಾ ಆದಾಯ ಹೆಚ್ಚಳವಾಗಬೇಕು. ಹಾವೇರಿ ಜಿಲ್ಲೆ ಕೃಷಿ ಆಧಾರಿತ ಜಿಲ್ಲೆಯಾಗಿದೆ. ವೈಜ್ಞಾನಿಕವಾಗಿ ಕೃಷಿ ಉತ್ಪನ್ನಗಳನ್ನು ಬೆಳೆಯುವ ನಿಟ್ಟಿನಲ್ಲಿ ನೂತನ ಕೃಷಿ ಪದ್ಧತಿ ರೂಪಿಸಬೇಕಿದೆ. ಕೃಷಿ ಉತ್ಪನ್ನಗಳಿಗೆ ಪೂರಕವಾಗಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಅಂದಾಗ ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಯಾಗುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗಗಳು ಲಭ್ಯವಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ಎಸ್‌ಪಿ ಶಿವಕುಮಾರ ತಾವರಗಿ, ಬಸವರಾಜ ಹೆಡಿಗ್ಗೊಂಡ,
ಎನ್‌.ಎನ್‌.ಗಾಳೆಮ್ಮನವರ, ಮುರುಗೆಪ್ಪ ಕಡೆಕೊಪ್ಪ, ಪರಮೇಶ್ವರಪ್ಪ ಮೇಗಳಮನಿ ಇತರರಿದ್ದರು. ಬಿಇಡಿ ಕಾಲೇಜು ಪ್ರಾಚಾರ್ಯ ಮಂಜುನಾಥ ವಡ್ಡರ ಸ್ವಾಗತಿಸಿ, ಪ್ರೀಯಾ ರೊಡ್ಡಣ್ಣನವರ ನಿರೂಪಿಸಿ, ವಂದಿಸಿದರು.

ಹೋರಾಟದಿಂದ ಅಸ್ತಿತ್ವಕ್ಕೆ ಬಂದಿರುವ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಚಿಂತನೆಗಳು ನಡೆಯಬೇಕು. ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಆರಂಭಗೊಂಡಿದೆ. ಮೆಡಿಕಲ್‌ ಕಾಲೇಜು ಆರಂಭಿಕ ಹಂತದಲ್ಲಿದೆ. ಯುವಜನತೆಗೆ ಶಿಕ್ಷಣ ನೀಡಿದರೆ ಸಾಲದು, ಉದ್ಯೋಗ ನೀಡುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹಾವೇರಿ-ರಾಣಿಬೆನ್ನೂರಗಳಲ್ಲಿ ಮೇಜ್‌ ಪಾರ್ಕ್‌ ಸ್ಥಾಪನೆಯಾಗಬೇಕಿದೆ. ಕೃಷಿ ಹಾಗೂ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ಸಿಗಬೇಕಿದೆ.
ಸಂಜೀವಕುಮಾರ ನೀರಲಗಿ, ನಗರಸಭೆ ಅಧ್ಯಕ್ಷರು

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.