ಅನ್ನದಾತನ ನಿದ್ದೆ ಕೆಡಿಸಿದ ಸೈನಿಕ!

•ಮಳೆ ಅನಿಶ್ಚಿತತೆ ನಡುವೆ ರೈತನಿಗೆ ಮತ್ತೂಂದು ಪೆಟ್ಟು •ಮೂರ್‍ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಾದ ಕಾಟ

Team Udayavani, Jul 13, 2019, 10:59 AM IST

hv-tdy-2..

ಬ್ಯಾಡಗಿ: ಕೃಷಿ ಇಲಾಖೆ ಅಧಿಕಾರಿಗಳ ತಂಡ ಗುಂಡೇನಹಳ್ಳಿ ಹೊಲವೊಂದರಲ್ಲಿ ಸೈನಿಕ ಹುಳು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ.

ಬ್ಯಾಡಗಿ: ತಾಲೂಕಿನ ವಿವಿಧೆಡೆ ಗೋವಿನಜೋಳಕ್ಕೆ ಸೈನಿಕಹುಳು (ಫಾಲ್ ಆರ್ಮಿ ವರ್ಮ) ಲಗ್ಗೆಯಿಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದ್ದು, ಈ ಕೀಟಬಾಧೆ ಇಡೀ ತಾಲೂಕಿಗೆ ವ್ಯಾಪಿಸುವ ಭೀತಿ ಎದುರಾಗಿದೆ.

ನಿಯಂತ್ರಣವಾಗದಿದ್ದರೆ ದೊಡ್ಡ ಪೆಟ್ಟು: ಈ ಕೀಟಬಾಧೆ ಕಳೆದ ವರ್ಷ ಮೋಟೆಬೆನ್ನೂರ ಭಾಗದಲ್ಲಿ ಕಂಡು ಬಂದಿದ್ದು, ಪ್ರಸಕ್ತ ವರ್ಷವೂ ಅದೇ ಭಾಗದಿಂದ ಆರಂಭವಾಗಿರುವುದು ಆತಂಕ ಹೆಚ್ಚಾಗಲು ಕಾರಣವಾಗಿದೆ. ಮಳೆ ಅನಿಶ್ಚಿತತೆ ನಡುವೆಯೇ ತಾಲೂಕಿನಲ್ಲಿ ಸುಮಾರು 21 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನಜೋಳ ಬಿತ್ತನೆ ಯಾಗಿದ್ದು, ಕೀಟಬಾಧೆ ನಿಯಂತ್ರಣಕ್ಕೆ ಬಾರದಿದ್ದಲ್ಲಿ ರೈತ ಸಮೂಹಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಮೂರ್‍ನಾಲ್ಕು ಜಿಲ್ಲೆಗಳಲ್ಲಿ ಪ್ರತ್ಯಕ್ಷ: ಸೈನಿಕ ಹುಳುಗಳ ಸಂಖ್ಯೆ ಇದೀಗ ಹೆಚ್ಚಾಗಿದ್ದು, ಕೇವಲ ಹಾವೇರಿಯಷ್ಟೇ ಅಲ್ಲ ಧಾರವಾಡ, ದಾವಣಗೆರೆ ಜಿಲ್ಲೆಗಳಿಗೂ ವ್ಯಾಪಿಸಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಈ ಕೀಟ ಕೇವಲ ಬೆಳೆಯನ್ನಷ್ಟೇ ಅಲ್ಲ; ಅದರ ಜೊತೆಗೆ ದಂಟನ್ನೂ ಬಿಡದಂತೆ ತಿಂದು ನಾಶಪಡಿಸುತ್ತದೆ. ಹೀಗಾಗಿ ಈ ಮೊದಲು ಲದ್ದಿ ಹುಳು ಎಂದು ಕರೆಯಲಾಗುತ್ತಿದ್ದ ಇದನ್ನು ಈಚೆಗೆ ಸೈನಿಕ ಹುಳು ಎಂದು ಕರೆಯಲಾಗುತ್ತಿದೆ.

ನಿಯಂತ್ರಣಕ್ಕೆ ತರಲು ಎಡವಟ್ಟು: ಕಷ್ಟಪಟ್ಟು ಹುಳುಬಾಧೆ ನಿಯಂತ್ರಣಕ್ಕೆ ತರಬಹುದಾಗಿದ್ದರೂ, ತಾಲೂಕಿನಾದ್ಯಂತ ನಿರಂತರ ಬೀಳುತ್ತಿರುವ ಮಳೆಯಿಂದ ಭೂಮಿಯೊಳಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವುಗಳನ್ನು ಪತ್ತೆ ಹಚ್ಚುವ ಅಥವಾ ನಾಶಪಡಿಸುವ ಕಾರ್ಯಕ್ಕೆ ಹಿನ್ನಡೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರಸಕ್ತ ವರ್ಷ ಇಲ್ಲಿವರೆಗೂ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿಲ್ಲ. ಇಲ್ಲದಿದ್ದರೆ ಸೈನಿಕಹುಳುಗಳು ಮಳೆ ನೀರಿನಲ್ಲಿ ಹರಿದು ಹೋಗುತ್ತಿದ್ದವು ಎಂಬ ಮಾತು ಕೂಡ ರೈತರಿಂದ ಕೇಳಿ ಬರುತ್ತಿದೆ.

ಕೃಷಿ ತಜ್ಞರ ತಂಡ ಭೇಟಿ-ಪರಿಶೀಲನೆ: ಸಹಾಯಕ ಕೃಷಿ ನಿರ್ದೇಶಕ ಅಮೃತೇಶ ಹಾಗೂ ಜಿ.ಎಸ್‌. ಸ್ಪೂರ್ತಿ ಹಾಗೂ ಕೃಷಿ ಅಧಿಕಾರಿ ಮಂಜುನಾಥ ನೇತೃತ್ವದ ಕೃಷಿ ಅಧಿಕಾರಿಗಳ ತಂಡ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿತು. ಸೈನಿಕ ಹುಳು ಬೂದು ಮತ್ತು ಕಂದು ಬಣ್ಣದ್ದಾಗಿದ್ದು, 17 ರಿಂದ 21 ದಿನ ಜೀವಂತವಾಗಿರಲಿದೆ. ಹೆಣ್ಣು ಜಾತಿಯ ಕೀಟ ಪ್ರತಿ ಬಾರಿ ಸುಮಾರು 1500 ರಿಂದ 2000 ಸಾವಿರ ಮೊಟ್ಟೆಗಳನ್ನು ಗುಂಪಾಗಿ ಇಡಲಿದೆ. ಎರಡ್ಮೂರು ದಿನಗಳಲ್ಲಿ ಮೊಟ್ಟೆಯಿಂದ ಹೊರಬರುವ ಮರಿ ಕಪ್ಪು ಬಣ್ಣದ ತಲೆ ಹೊಂದಿದ್ದು, ಕ್ರಮೇಣ ಕಂದು ಬಣ್ಣಕ್ಕೆ ತಿರುಗುತ್ತದೆ. ಮೊದಲು ಎಲೆ ತಿನ್ನುವ ಹುಳುಗಳು ನಂತರ ಸುಳಿಯಲ್ಲಿ ಸಣ್ಣ ರಂಧ್ರ ಮಾಡಿಕೊಂಡು ಕಾಂಡ ಕೊರೆಯಲು ಪ್ರಾರಂಭಿಸುತ್ತವೆ ಎಂದು ಪರಿಶೀಲನಾ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.