ಜೀವದ ಹಂಗು ತೊರೆದು ಸೇನೆ ಸೇರಿ

ಸನ್ಮಾನ ಸಮಾರಂಭದಲ್ಲಿ ನಿವೃತ್ತ ಸೈನಿಕ ಮೋನೇಶಪ್ಪ ಮೈಸೂರ ಸಲಹೆ

Team Udayavani, Aug 7, 2022, 4:53 PM IST

19

ಹಂಸಭಾವಿ: ಯುವಕರು ಸೇನೆ ಸೇರಬೇಕಾದರೆ ಜೀವದ ಹಂಗು ತೊರೆದು, ದೇಶ ಸೇವೆ ಮಾಡುವ ಗುರಿ ಇಟ್ಟುಕೊಂಡು ಸೇರಬೇಕೆಂದು ನಿವೃತ್ತ ಸೈನಿಕ ಮೋನೇಶಪ್ಪ ಮೈಸೂರ ಹೇಳಿದರು.

ಸಮೀಪದ ಬೆಟಕೇರೂರ ಗ್ರಾಮದಲ್ಲಿ ಗ್ರಾಮದ ಮೋನೇಶಪ್ಪ ಮೈಸೂರ, ಬಸವರಾಜ ಮೈಸೂರ ಮತ್ತು ಭರಮಪ್ಪ ಇಂಗಳಗೊಂದಿ ನಿವೃತ್ತ ಸೈನಿಕರಿಗೆ ಗ್ರಾಮಸ್ಥರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸೈನ್ಯದಲ್ಲಿದ್ದಾಗ ಎದುರಿಸಿದ ಕಹಿ ಅನುಭವಗಳನ್ನು ಹಂಚಿಕೊಂಡರು.

ಹಿರೇಕೆರೂರಿನಲ್ಲಿ ಸೈನಿಕರ ಭವನ ನಿರ್ಮಿಸಿ ಕೊಡಿ. ತಾಲೂಕಿನ ಯುವ ಜನತೆಗೆ ಸೈನ್ಯಕ್ಕೆ ಸೇರಲು ತರಬೇತಿ ನೀಡುವ ಕೆಲಸವನ್ನು ನಾನು ಮತ್ತು ತಾಲೂಕಿನ ನಿವೃತ್ತ ಸೈನಿಕರು ಸೇರಿ ಮಾಡುತ್ತೇವೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರಿಗೆ ಮನವಿ ಮಾಡಿದರು.

ನಿವೃತ್ತ ಸೈನಿಕರನ್ನು ಸನ್ಮಾನಿಸಿ ಮಾತನಾಡಿದ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ನಮ್ಮ ನಾಡಿಗಾಗಿ, ದೇಶಕ್ಕಾಗಿ ಸೇವೆ ಮಾಡಿದವರನ್ನು ಸ್ಮರಿಸುವುದು ಮತ್ತು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಬೆಟಕೇರೂರ ಗ್ರಾಮದ ತ್ರಿಮೂರ್ತಿ ಸೈನಿಕರಾದ ಮೋನೇಶಪ್ಪ ಮೈಸೂರ, ಬಸವರಾಜ ಮೈಸೂರ ಮತ್ತು ಭರಮಪ್ಪ ಇಂಗಳಗೊಂದಿ ಅವರನ್ನು ಗ್ರಾಮಸ್ಥರು ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು.

ಅವರ ಬೇಡಿಕೆಯನ್ನು ಈಡೇರಿಸಲು ಕಟ್ಟಡಕ್ಕೆ ಜಾಗ ಬೇಕಾಗುತ್ತದೆ. ನಿಮ್ಮ ಸಂಘದ ವತಿಯಿಂದ ಹಿರೇಕೆರೂರ ಪಟ್ಟಣ ಪಂಚಾಯಿತಿಗೆ ಅರ್ಜಿ ಕೊಟ್ಟರೆ ಅವರ ಸಂಘಕ್ಕೆ ಜಾಗೆ ಮಂಜೂರ ಮಾಡಿಸುವ ಕೆಲಸ ಮಾಡುತ್ತೇನೆ ಮತ್ತು ಸೈನಿಕರ ಭವನ ಕಟ್ಟಿಸಲು ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.

ನಿವೃತ್ತ ಸೈನಿಕರನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಶಾಸಕ ಬಿ.ಎಚ್‌.ಬನ್ನಿಕೋಡ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು ಸೈನ್ಯಕ್ಕೆ ಸೇರಿ, ದೇಶದ 130 ಕೋಟಿ ಜನತೆಯನ್ನು ರಕ್ಷಣೆ ಮಾಡಿ ಗ್ರಾಮಕ್ಕೆ ಮರಳಿದ ಈ ನಿವೃತ್ತರ ಸೇವೆ ಅವಿಸ್ಮರಣೀಯ ಎಂದು ಹೇಳಿದರು.

ತಾಲೂಕು ಆಡಳಿತದ ಪರವಾಗಿ ಉಪತಹಶೀಲ್ದಾರ್‌ ರಾಜಶೇಖರ ಎಲಿ, ಕೌರವ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪ್ರತಾಪ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮದ ವಿವಿಧ ಸಂಘಸಂಸ್ಥೆಗಳ ಪದಾಧಿ ಕಾರಿಗಳು ನಿವೃತ್ತ ಸೈನಿಕರನ್ನು ಸನ್ಮಾನಿಸಿದರು.

ಅಲ್ಲದೇ, ತಾಲೂಕಿನ ಹಾಗೂ ಬೇರೆ ತಾಲೂಕಿನ ಸುಮಾರು 10 ಜನ ಸೈನಿಕರನ್ನು ಸಂಘಟಕರು ಸನ್ಮಾನಿಸಿದರು. ಗ್ರಾಮದ ಹಿರಿಯರಾದ ಶಿವಮೂರ್ತೆಪ್ಪ ಮತ್ತೀಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾ ಧಿಕಾರಿಗಳು ಉಪಸ್ಥಿತರಿದ್ದರು. ಶಾಂತನಗೌಡ ಹೊಂಡದ ಹಾಗೂ ಶಿವಯೋಗಿ ದ್ಯಾವಣ್ಣನವರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.