ಚರ್ಮದಾನಕ್ಕೆ ಗೊಂದಿ ಕುಟುಂಬ ವಾಗ್ಧಾನ

•ನೇತ್ರದಾನ, ರಕ್ತದಾನ, ದೇಹದಾನಗಳಂಥ ವಿವಿಧ ಸಾಮಾಜಿಕ ಸೇವೆಗೆ ಪೇದೆ ಕರಬಸಪ್ಪ ಬದುಕು ಮೀಸಲು

Team Udayavani, Jul 28, 2019, 4:28 PM IST

hv-tdy-3

ಅಕ್ಕಿಆಲೂರು: ಮರಣಾನಂತರ ಚರ್ಮದಾನ ಒಪ್ಪಿಗೆ ಪತ್ರವನ್ನು ಶಿವಬಸವ ಶ್ರೀಗಳಿಗೆ ಹಸ್ತಾಂತರಿಸಿದ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ ಕುಟುಂಬ.

ಅಕ್ಕಿಆಲೂರು: ವರ್ಷವಿಡಿ ನೇತ್ರದಾನ, ರಕ್ತದಾನ, ದೇಹದಾನ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯಲ್ಲಿ ತೊಡಗಿಕೊಂಡು ತಮ್ಮ ಜೀವಮಾನವನ್ನೇ ಸಮಾಜ ಸೇವೆಗಾಗಿ ಅಣಿಯಾಗಿಸಿಟ್ಟಿರುವ ಪಟ್ಟಣದ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, ಇದೀಗ ತಮ್ಮ ಕುಟುಂಬದೊಂದಿಗೆ ತಮ್ಮ ಮರಣಾನಂತರ ಚರ್ಮದಾನಕ್ಕೆ ವಾಗ್ಧಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪಟ್ಟಣದ ಕುಮಾರ ನಗರದ ನಿವಾಸಿಯಾಗಿರುವ ಕರಬಸಪ್ಪ, ಪ್ರಸ್ತುತ ಆಡೂರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 30 ವರ್ಷ ವಯಸ್ಸಿನ ಕರಬಸಪ್ಪ ಗೊಂದಿ, ತಮ್ಮ ವಿಶಿಷ್ಟ ಸಮಾಜಮುಖೀ ಕಾರ್ಯಗಳ ಮೂಲಕ ಗಿನ್ನಿಸ್‌ ದಾಖಲೆಗೆ ಸೇರ್ಪಡೆಯಾಗಿ ಗೌರವ ಡಾಕ್ಟರೇಟ್ ಪಡೆದಿರುವುದು ಹೆಮ್ಮೆಯ ಸಂಗತಿ. 7 ವರ್ಷಗಳಿಂದ ನೇತ್ರದಾನ ಮತ್ತು ರಕ್ತದಾನ ಮಾಡಿಸುವುದರ ಮೂಲಕ ಈ ಭಾಗದ ಜನಸಾಮಾನ್ಯರಲ್ಲಿ ಅಚ್ಛಳಿಯದೇ ಉಳಿದಿದ್ದಾರೆ. ಯಾರೆ ನಿಧನವಾದರು ಸಹ ಅವರ ಮನೆಗೆ ಹೋಗಿ ಕಣ್ಣು ಮಣ್ಣಾಗದೆ, ಮತ್ತೂಬ್ಬರ ಜೀವನಕ್ಕೆ ಬೆಳಕಾಗಲಿ ಎಂದು ಮನವೊಲಿಸಿ ಕಣ್ಣು ಪಡೆದು, ನೇತ್ರ ಚಿಕಿತ್ಸೆ ಸಂಸ್ಥೆಗೆ ನೀಡುತ್ತಾರೆ.ಈ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮರಣಾನಂತರ ನೇತ್ರ, ದೇಹದಾನ ಒಪ್ಪಿಗೆಗೆ ಸಹಿ ಹಾಕಿದ್ದ ಪೇದೆ ಕರಬಸಪ್ಪ ಅವರ ಕುಟುಂಬ ಈಗ ಚರ್ಮದಾನ ಒಪ್ಪಿಗೆ ನೀಡಿದೆ. ಕರಬಸಪ್ಪ ಅವರ ಎಲ್ಲ ಸಾಮಾಜಿಕ ಕಳಕಳಿಯನ್ನು ಬೆಂಬಲಿಸುವ ತಂದೆ ಮನೋಹರ ಗೊಂದಿ ಅವರ 60ನೇ ವರ್ಷದ ಜನ್ಮದಿನದ ಸಂಭ್ರಮದ ನೆನಪಿಗೆ ಕರಬಸಪ್ಪ ಅವರ ಪತ್ನಿ ವಿನುತಾ, ತಾಯಿ ಕುಸುಮಾ, ತಂದೆ ಮನೋಹರ ಮತ್ತು ದೊಡ್ಡಪ್ಪ ಬಾಬಣ್ಣ ಗೊಂದಿ ಮರಣಾನಂತರ ಚರ್ಮದಾನಕ್ಕೆ ವಾಗ್ಧಾನ ಮಾಡಿದ್ದಾರೆ.

ಚರ್ಮದಾನ ಕುರಿತು ಅಧಿಕೃತ ದಾಖಲೆಗಳಿಗೆ ಸಹಿ ಮಾಡಿ ಸ್ಥಳೀಯ ವಿರಕ್ತಮಠದ ಶಿವಬಸವ ಶ್ರೀಗಳಿಗೆ ಹಸ್ತಾಂತರಿಸಿದ್ದಾರೆ. ಶಿವಬಸವ ಶ್ರೀಗಳಿಂದ ಚರ್ಮದಾನದ ದಾಖಲೆಗಳು ಬೆಳಗಾವಿಯ ಕೆಎಲ್ಇಎಸ್‌ ಚರ್ಮ ಬ್ಯಾಂಕ್‌ಗೆ ತಲುಪಲಿವೆ. ಇಡೀ ಕುಟುಂಬ ಚರ್ಮದಾನ ಮಾಡಿರುವುದು ಜಿಲ್ಲಾದ್ಯಾಂತ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.