Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ನಾಳೆ ನಾಗಮಂಗಲಕ್ಕೆ ಹೋಗುತ್ತೇನೆ, ತಡೆಯಿರಿ ನೋಡೋಣ!
Team Udayavani, Sep 12, 2024, 12:44 PM IST
ಹಾವೇರಿ: ನಾಗಮಂಗಲದಲ್ಲಿ ಮುಸ್ಲಿಂ ಕಿಡಿಗೇಡಿಗಳಿಂದ ಗಲಭೆಯಾಗಿದೆ. ಗಣೇಶನ ಮೆರವಣಿಗೆಯಲ್ಲಿ ಕಲ್ಲು, ಚಪ್ಪಲಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಮಸೀದಿ ಗಲಾಟೆ ಮಾಡುವ ಕೇಂದ್ರವೇ? ಮಸೀದಿ ಮುಂದೆ ಗಣೇಶನ ಮೆರವಣಿಗೆ ಹೋಗಬಾರದಾ? ಪೂರ್ವಯೋಜಿತ ಗಲಭೆ ಇದು, ಪೊಲೀಸರಿಗೆ ಇದು ಗೊತ್ತಾಗಲಿಲ್ವಾ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ, ತಡೆಯಿರಿ ನೋಡೋಣ! ಮುಸ್ಲಿಮರ ಜೊತೆ ಯಾವುದೇ ವ್ಯವಹಾರ ಮಾಡಬೇಡಿ, ಮುಸ್ಲಿಂರನ್ನು ಬಹಿಷ್ಕಾರ ಹಾಕಿ. ವಕ್ಪ್ ಬೋರ್ಡ್ ರದ್ದು ಮಾಡಬೇಕು, ಇವರಿಗಷ್ಟೇ ಯಾಕೆ ಬೋರ್ಡ್? ಮಸೀದಿ ಮೇಲೆ ಮೈಕ್ ನಿಲ್ಲಿಸಿ, ರಾಜ್ಯದಲ್ಲಿ ನಾನೇ ಡಿಜೆ ನಿಲ್ಲಿಸುತ್ತೇನೆ ಎಂದು ಕಿಡಿಕಾರಿದರು.
ಎಚ್ಚರಿಕೆ ಕೊಡುತ್ತಿದ್ದೇನೆ, ಇಂತಹ ಗಲಭೆಗಳಿಗೆ ನಾವು ಉತ್ತರ ಕೊಡಬೇಕಾಗುತ್ತದೆ. ಪೊಲೀಸ್ ಇಲಾಖೆ ಕತ್ತೆ ಕಾಯುತ್ತಿದೆಯಾ ಎಂದರು.
ಬಿಜೆಪಿಯವರಿಗೆ ಅಧಿಕಾರ ಮುಖ್ಯ, ಮಸೀದಿ ಮೇಲಿನ ಮೈಕ್ ಕಿತ್ತಾಕೊ ತಾಕತ್ತಿಲ್ಲ. ಮೈಕ್ ಕಿತ್ತಾಕಿ ಎಂದು ಹೋರಾಟ ಮಾಡಿದರೆ, ಬೊಮ್ಮಾಯಿ ನಮ್ಮನ್ನು ಅರೆಸ್ಟ್ ಮಾಡಿಸಿದ್ದರು ಎಂದರು.
ರಟ್ಟಿಹಳ್ಳಿಯ ಗಣೇಶ ವಿಸರ್ಜನೆಯಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿಲ್ಲ. ರಟ್ಟಿಹಳ್ಳಿಗೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹಾಕಿದ್ದಾರೆ. ರಟ್ಟಿಹಳ್ಳಿ ಪಾಕಿಸ್ತಾನ ಅಲ್ಲ, ಭಾರತದ ಒಂದು ಭಾಗ. ಗಲಭೆ ಮಾಡುವವರನ್ನು ಕಂಟ್ರೋಲ್ ಮಾಡಿ. ನಾನು ಗಲಭೆ ಮಾಡುವವನಲ್ಲ, ಸುಮ್ಮನೆ ಯಾಕೆ ಕೇಸ್ ಹಾಕುತ್ತಿದ್ದೀರಿ ಎಂದು ಮುತಾಲಿಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.