ಹಾವೇರಿ ನುಡಿಜಾತ್ರೆ ಸದ್ಯಕ್ಕಿಲ್ಲ?

­ಮೇ 20ರಿಂದ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಯಾಗಿತ್ತು

Team Udayavani, Apr 18, 2022, 10:05 AM IST

6

ಹಾವೇರಿ: ಹಾವೇರಿಯಲ್ಲಿ 86ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಹಲವು ಬಾರಿ ಮುಹೂರ್ತ ನಿಗದಿ ಮಾಡಿದ್ದರೂ ಇನ್ನೂ ಕಾಲ ಕೂಡಿ ಬಂದಂತೆ ಕಾಣುತ್ತಿಲ್ಲ. ಮೇ 20ರಿಂದ ಮೂರು ದಿನಗಳ ಕಾಲ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದರೂ ಇದುವರೆಗೆ ಸರ್ಕಾರದಿಂದ ಅಧಿಕೃತ ಘೋಷಣೆಯಾಗಿಲ್ಲ. ಹೀಗಾಗಿ ಮೇ ತಿಂಗಳಲ್ಲಿ ನುಡಿ ಜಾತ್ರೆ ನಡೆಯುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

ಈಗಾಗಲೇ ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಸದ್ಯ ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಂದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಸಲು ಕಳೆದ ಮಾರ್ಚ್‌ ತಿಂಗಳಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಅಧ್ಯಕ್ಷ‌ತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೇ 20, 21 ಮತ್ತು 22ರಂದು ಸಮ್ಮೇಳನ ನಡೆಸುವ ಬಗ್ಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿತ್ತು.

ಈ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ದಿಷ್ಟ ದಿನಾಂಕ ಘೋಷಿಸುವುದಾಗಿ ಅವರು ತಿಳಿಸಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಅವರೊಂದಿಗೆ ಮಹೇಶ ಜೋಶಿ ಅವರು ಸಿಎಂ ಭೇಟಿಯಾಗಿ ಚರ್ಚಿಸಿದ್ದರು. ಆದರೆ ಇದುವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟ ಸೂಚನೆ ನೀಡದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಕೋವಿಡ್‌ ಮೊದಲ ಅಲೆ ಮುಗಿದ ಬಳಿಕ ಕಳೆದ ವರ್ಷ ಫೆ.26ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಎರಡನೇ ಅಲೆ ಶುರುವಾಗಿದ್ದರಿಂದ ನುಡಿಜಾತ್ರೆಯ ತಯಾರಿ ಬಂದ್‌ ಮಾಡಲಾಗಿತ್ತು. ಈಗ ಎರಡನೇ ಬಾರಿ ಸಮ್ಮೇಳನ ದಿನಾಂಕ ಮುಂದೂಡಲ್ಪಟ್ಟರೂ ಅಚ್ಚರಿಯಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಸಿದ್ಧತೆಗೆ ಬೇಕು ಸಮಯಾವಕಾಶ: ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನಕ್ಕೆ ಕನಿಷ್ಟ ಮೂರು ತಿಂಗಳ ಮುಂಚಿತವಾಗಿಯೇ ಸಿದ್ಧತಾ ಕಾರ್ಯ ಆರಂಭಿಸಬೇಕಾಗುತ್ತದೆ. ಇಲ್ಲಿಯ ಜಿಎಚ್‌ ಕಾಲೇಜು ಪಕ್ಕದ ಖಾಲಿ ಜಾಗದಲ್ಲಿ ಸಮ್ಮೇಳನ ನಡೆಸಲು ಸ್ಥಳ ಗುರುತಿಸಲಾಗಿದೆ. ಆದರೆ ಅಲ್ಲಿ ಗಿಡ ಗಂಟಿ ಬೆಳೆದಿದ್ದು, ಎತ್ತರ ತಗ್ಗುಗಳಿಂದ ಕೂಡಿದೆ. ಅಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡು ಜಾಗ ಸಮತಟ್ಟು ಮಾಡಬೇಕಿದೆ.

ಈ ಸಲ ಸಮ್ಮೇಳನ ನಡೆಸಲು ಅನುದಾನಕ್ಕೆ ಕಾಯುವ ಪ್ರಮೇಯವಿಲ್ಲ. ಬಜೆಟ್‌ನಲ್ಲೇ 20 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆದರೆ ವೇದಿಕೆ ನಿರ್ಮಾಣ ಸೇರಿದಂತೆ ಅಗತ್ಯ ಸಿದ್ಧತೆಗೆ ಸಮಯಾವಕಾಶ ಬೇಕಾಗಲಿದೆ. ಈ ಸಲ ಸಮಾನಾಂತರ ವೇದಿಕೆಗಳನ್ನು ಮಾಡದೇ ಮುಖ್ಯ ವೇದಿಕೆಯಲ್ಲೇ ಎಲ್ಲ ಕಾರ್ಯಕ್ರಮ, ಗೋಷ್ಠಿ ನಡೆಸುವ ಬಗ್ಗೆ ಆಸಕ್ತಿ ತೋರಲಾಗಿದೆ. ಡಿಜಿಟಲ್‌ ಟಚ್‌ ಕೊಡುವ ಬಗ್ಗೆಯೂ ಕಸಾಪ ರಾಜ್ಯಾಧ್ಯಕ್ಷ‌ರು ಹೇಳಿದ್ದಾರೆ.  ಮೇ ತಿಂಗಳಲ್ಲಿ ನಡೆದರೆ ಬಿಸಿಲು, ಸೆಕೆ ಪ್ರಮಾಣ ಹೆಚ್ಚಿರುವುದರಿಂದ ಎಸಿ ಅಳವಡಿಸುವ ಬಗ್ಗೆಯೂ ಮಾತನಾಡಿದ್ದರು. ಇವೆಲ್ಲ ತಯಾರಿ ಆಗಬೇಕೆಂದರೆ ಹೆಚ್ಚಿನ ಸಮಯ ಬೇಕಾಗಲಿದೆ.

ಸ್ಪಷ್ಟ ನಿರ್ಧಾರ ಘೋಷಿಸಲಿ: ಸಮ್ಮೇಳನ ನಡೆಯುವ ದಿನಾಂಕಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನವನ್ನು ಶಿಸ್ತುಬದ್ಧವಾಗಿ ಮಾಡದಿದ್ದರೆ ಹಾವೇರಿ ಜಿಲ್ಲೆಗೆ ಮತ್ತೂಮ್ಮೆ ಕೆಟ್ಟ ಹೆಸರು ತಪ್ಪಿದ್ದಲ್ಲ. ಸಮ್ಮೇಳನದ ಆಮಂತ್ರಣ ಪತ್ರಿಕೆ, ಸ್ಮರಣ ಸಂಚಿಕೆ, ವೇದಿಕೆ ನಿರ್ಮಾಣ, ಅತಿಥಿಗಳಿಗೆ ಊಟ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಸಿದ್ಧತೆ ನಡೆಸಬೇಕಿದೆ. ಸಮ್ಮೇಳನವನ್ನು ಈಗ ನಿಗದಿಪಡಿಸಿದ ತಾತ್ಕಾಲಿಕ ದಿನಾಂಕದಲ್ಲೇ ನಡೆಸುವುದಾದರೆ ಅಥವಾ ಮುಂದೂಡುವ ಬಗ್ಗೆಯಾದರೂ ಸರ್ಕಾರ ಸ್ಪಷ್ಟ ನಿರ್ಧಾರ ಘೋಷಿಸಬೇಕು. ಆ ಮೂಲಕ ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆಯಬೇಕಿದೆ.

ತರಾತುರಿಯಲ್ಲಿ ಸಮ್ಮೇಳನ ಬೇಡ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದೆ. ಸಮ್ಮೇಳನ ನಡೆಯುವ ಸ್ಥಳ ಕಪ್ಪು ಮಣ್ಣಿನಿಂದ ಕೂಡಿರುವುದರಿಂದ ಒಮ್ಮೆ ಮಳೆಯಾದರೆ ಹಲವು ದಿನ ತೇವಾಂಶ ಇರುತ್ತದೆ. ವೇದಿಕೆ ಇತ್ಯಾದಿ ತಯಾರಿ ಆದ ಮೇಲೆ ಗಾಳಿ, ಮಳೆಯಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಸಮ್ಮೇಳನ ಆಯೋಜನೆಗೆ ತಾತ್ಕಾಲಿಕ ನಿಗದಿ ಮಾಡಿರುವ ದಿನಾಂಕಕ್ಕೆ ಕೇವಲ ಇನ್ನು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದು, ಇಷ್ಟು ಕಡಿಮೆ ಅವ ಧಿಯಲ್ಲಿ ಸಮ್ಮೇಳನ ನಡೆಸುವುದು ಕಷ್ಟ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ತರಾತುರಿಯಲ್ಲಿ ಸಮ್ಮೇಳನ ನಡೆಸುವುದಕ್ಕಿಂತ ಮಳೆಗಾಲ ಬಳಿಕ ನವೆಂಬರ್‌, ಡಿಸೆಂಬರ್‌ ವೇಳೆಗೆ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿವೆ. ಆದ್ದರಿಂದ ಸರ್ಕಾರ ಹಾಗೂ ಕಸಾಪ ಪದಾಧಿಕಾರಿಗಳು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಸಮ್ಮೇಳನದ ದಿನಾಂಕ ನಿಗದಿ ಕುರಿತು ಉಸ್ತುವಾರಿ ಸಚಿವರು ಹಾಗೂ ಕಸಾಪ ರಾಜ್ಯಾಧ್ಯಕ್ಷ‌ರು ಒಮ್ಮೆ ಸಿಎಂ ಅವರನ್ನು ಭೇಟಿಯಾಗಿದ್ದಾರೆ. ಆದರೆ ಸಿಎಂ ಯಾವುದೇ ಅಭಿಪ್ರಾಯ ತಿಳಿಸಿಲ್ಲ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದ್ದು, ಸಮ್ಮೇಳನ ಆಯೋಜಿಸಿದರೆ ತೊಂದರೆ ಎದುರಾಗಬಹುದು ಎಂಬ ಬಗ್ಗೆ ಆತಂಕವಿದೆ. ನವಂಬರ್‌, ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸುವುದು ಸೂಕ್ತವಾಗಿದ್ದು, ಮುಖ್ಯಮಂತ್ರಿಗಳು ಕೈಗೊಳ್ಳುವ ತೀರ್ಮಾನದ ಮೇಲೆ ಎಲ್ಲವೂ ನಿಂತಿದೆ.   -ಲಿಂಗಯ್ಯ ಹಿರೇಮಠ,ಕಸಾಪ ಜಿಲ್ಲಾಧ್ಯಕ್ಷ‌          ­

ವೀರೇಶ ಮಡ್ಲೂರ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.