ಹಾವೇರಿ: ಹೊಸ ಯೋಜನೆ ಕೊಟ್ಟಿಲ್ಲ ರಾಜ್ಯ ಸರ್ಕಾರ-ಬಿ.ವೈ. ವಿಜಯೇಂದ್ರ

ರೈತರ ಬೆಳೆ ಉಳಿಸಲು ಏಳು ತಾಸು ಕರೆಂಟ್‌ ಕೊಡುತ್ತಿಲ್ಲ

Team Udayavani, Feb 2, 2024, 3:20 PM IST

ಹಾವೇರಿ: ಹೊಸ ಯೋಜನೆ ಕೊಟ್ಟಿಲ್ಲ ರಾಜ್ಯ ಸರ್ಕಾರ-ಬಿ.ವೈ. ವಿಜಯೇಂದ್ರ

ಉದಯವಾಣಿ ಸಮಾಚಾರ
ಹಾವೇರಿ: ಬಡವರು ಬಡವರಾಗಿಯೇ ಇರಲು ಕಾಂಗ್ರೆಸ್‌ ಕಾರಣ. ಎಲ್ಲಿ ಬಡತನ ಇರುತ್ತದೆಯೋ ಅಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ
ಬರಲು ಸಾಧ್ಯ ಅಂತ ಕಾಂಗ್ರೆಸ್ಸಿನವರು ಬಲವಾಗಿ ನಂಬಿದ್ದಾರೆ. ರಾಜ್ಯದಲ್ಲಿ ಅವರದೇ ಸರ್ಕಾರವಿದ್ದರೂ ಕಾಂಗ್ರೆಸ್‌ ಶಾಸಕರಿಂದ
ಅವರ ಕ್ಷೇತ್ರಗಳಿಗೆ ಅನುದಾನ ತಂದ ಒಂದು ಉದಾಹರಣೆ ಇದ್ದರೆ ತೋರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದರು.

ನಗರದಲ್ಲಿ ಗುರುವಾರ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎಂಟು ತಿಂಗಳಾಗಿದ್ದರೂ ಒಂದೇ ಒಂದು ಹೊಸ ಯೋಜನೆ ಕೊಟ್ಟಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲದಿದ್ದರೆ ಗ್ಯಾರಂಟಿ ಬಂದ್‌ ಮಾಡುತ್ತೇವೆ ಎಂದು ಮಾಗಡಿ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ
ಹೇಳಿದ್ದಾರೆ. ಆ ದುಸ್ಸಾಹಸಕ್ಕೆ ಕೈ ಹಾಕಿದರೆ ನಿಮ್ಮ ಕಿವಿ ಹಿಂಡಬೇಕಾಗುತ್ತದೆ. ಸಿಎಂ ತಮ್ಮ ಮನಸ್ಸಿನ ಮಾತನ್ನು ಮಾಗಡಿ ಶಾಸಕರ ಬಾಯಿಂದ ಹೇಳಿಸಿದ್ದಾರೆ ಎಂದು ಆರೋಪಿಸಿದರು.

ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ ನಮಗೆ ಅನಿರೀಕ್ಷಿತ ಸೋಲಾಯಿತು. ಏಳೆಂಟು ತಿಂಗಳಿಂದ ಕಾರ್ಯಕರ್ತರ ಉತ್ಸಾಹ ಕುಗ್ಗಿತ್ತು. ಆದರೆ ಪಂಚ ರಾಜ್ಯಗಳ ಫಲಿತಾಂಶ ಇಡೀ ದೇಶದಲ್ಲಿ ಬಿಜೆಪಿ ಅಲೆ ಇರೋದನ್ನು ಸಾಬೀತುಪಡಿಸಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠ. ಕಾಂಗ್ರೆಸ್‌ನವರು ಒಂದು ಸುಳ್ಳು ನೂರು ಬಾರಿ ಹೇಳಿ ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಗ್ಯಾರಂಟಿ ಕೊಟ್ಟು ಮೋಸ ಮಾಡಲು ಹೋಗಿದ್ದರು. ಆದರೆ ಪ್ರಜ್ಞಾವಂತ ಮತದಾರರು ದೇಶದ ಹಿತರಕ್ಷಣೆ ದೃಷ್ಟಿಯಿಂದ ಮೋದಿಯವರೇ ಗ್ಯಾರಂಟಿ ಅಂತ ತೀರ್ಪು ಕೊಟ್ಟರು ಎಂದು ಹೇಳಿದರು.

ಮಹಿಳೆಯರಿಗೆ ಉಚಿತ ಬಸ್‌ ಅಂತ ಹೇಳುತ್ತಾರೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್‌ಗಳೇ ಸಿಗುತ್ತಿಲ್ಲ. ಶೇ.50ರಷ್ಟು ಬಸ್‌ ರೂಟ್‌ ಕಟ್‌ ಮಾಡಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ ಬೆಳೆ ಉಳಿಸಲು ಏಳು ತಾಸು ಕರೆಂಟ್‌ ಕೊಡುತ್ತಿಲ್ಲ.ರೈತರ ಬೆಳೆ ಸಂಪೂರ್ಣ ನಾಶವಾಗಿದೆ.

ಯಡಿಯೂರಪ್ಪನವರು “ಕಿಸಾನ್‌ ಸಮ್ಮಾನ್‌’ ಯೋಜನೆಯಡಿ ರೈತರಿಗೆ ನೀಡುತ್ತಿದ್ದ ನಾಲ್ಕು ಸಾವಿರ ರೂ. ಕೊಡುವುದನ್ನೂ ಬಂದ್‌ ಮಾಡಿದ್ದಾರೆ. ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕನಿಕರ ಬರುತ್ತಿಲ್ಲ. ಆದರೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಶಾಸಕ ಅರವಿಂದ ಬೆಲ್ಲದ, ರಾಜ್ಯ ಉಪಾಧ್ಯಕ್ಷ ಡಾ|ಬಸವರಾಜ ಕೇಲಗಾರ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಪಿ.ರಾಜೀವ, ಕಳಕಪ್ಪ ಬಂಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣವರ, ಪಾಲಾಕ್ಷಗೌಡ ಪಾಟೀಲ, ಶೋಭಾ ನಿಸ್ಸೀಮಗೌಡ್ರ ಇತರರು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.