ಹಾವೇರಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಜಾಕ್ಕೆ ಒತ್ತಾಯ
Team Udayavani, Aug 1, 2024, 6:08 PM IST
■ ಉದಯವಾಣಿ ಸಮಾಚಾರ
ಹಾವೇರಿ: ಅಹಿಂದ ಹೆಸರಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಸ್ಟಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಮಾಡಿದ್ದು, ಕೂಡಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಎಸ್ಟಿ ಘಟಕದ ಅಧ್ಯಕ್ಷ ಮಂಜುನಾಥ ಕನ್ನಾಯ್ಕನವರ ನೇತೃತ್ವದಲ್ಲಿ
ಬುಧವಾರ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣವನ್ನು ಸಿಬಿಐಗೆ ಒಪ್ಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಖಾತೆ ತಮ್ಮ ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಎಸ್ಟಿ ನಿಗಮಕ್ಕೆ ಹಣ ಮಂಜೂರು ಮಾಡಿದ್ದಾರೆ.
ಸಚಿವ ಸ್ಥಾನದಲ್ಲಿದ್ದ ನಾಗೇಂದ್ರ, ನಿಗಮದ ಅಧ್ಯಕ್ಷ ಬಸವಗೌಡ ದದ್ದಲ್ ಇವರಷ್ಟೇ ರಾಜೀನಾಮೆ ನೀಡಿದರೆ ಸಾಲದು, ಹಗರಣದ ರುವಾರಿಗಳಾದ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಹಗರಣದಲ್ಲಿ ಮುಳಗಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕೆಂದು ಒತ್ತಾಯಿಸಿದರು.
ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಕನ್ನಾಯ್ಕನವರ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ಕೊಡುವುದಾಗಿ ಹೇಳಿ ಆಡಳಿತಕ್ಕೆ ಬಂದು ಒಂದು ವರ್ಷ ಕಳೆಯುತ್ತಿದ್ದಂತೆ ಎಸ್ಟಿ ನಿಗಮದಲ್ಲಿ 187 ಕೋಟಿ ರೂ., ಹಣ ಲೂಟಿ ಮಾಡಿದೆ. ಇದನ್ನು ರಾಜ್ಯದ ಅಹಿಂದ ಜನತೆ ಎಂದು ಕ್ಷಮಿಸುವುದಿಲ್ಲ.
ಇದಲ್ಲದೇ ಅನೇಕ ಜನಾಂಗದ ನಿಗಮಗಳಲ್ಲೂ ಹಗರಣಗಳಾಗಿದೆ. ಇಂತಹ ಸರ್ಕಾರ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ. ಭ್ರಷ್ಟಾಚಾರ ಮಾಡಿರುವವರೂ ಯಾರೇ ಆಗಿರಲಿ ಅವರಿಗೆ ತಕ್ಷ ಶಿಕ್ಷೆಯಾಗಬೇಕು. ಎಸ್ಟಿ ಜನಾಂಗದ ಹಣವನ್ನು ರಿಕವರಿ ಮಾಡಿ ರಾಜ್ಯದ ಎಸ್ಟಿ ಜನಾಂಗ ಕಲ್ಯಾಣ ನಿಧಿಯನ್ನು ಆ ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸಿದ್ಧಬಸಪ್ಪ ಯಾದವ್, ಅಲ್ತಾಪ್ ನದಾಫ್, ರಾಮನಗೌಡ್ರ ಪಾಟೀಲ, ಸತೀಶ ಮಾಳದಕರ, ಈರಣ್ಣ
ನವಲಗುಂದ, ರಮೇಶ ಮಾಕನೂರ, ಮೋಹಮ್ ಬಿನ್ಹಾಳ, ರೀಠಾ ನಾಯ್ಕರ್, ಎಂ.ಎಸ್. ಹಣಗಿ, ಲಲಿತಾ ಉಜ್ಜನಗೌಡ್ರ, ಭರಮಣ್ಣಕೊಳಚಿ, ಬಿ.ಸಿ. ಗುದ್ದಿಶೆಟ್ಟರ, ಸಿದ್ಧಣ್ಣ ಗುಡಿಮುಂದ್ಲರ್, ಅಮೀರಜಾನ್ ಬೇಪಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
ಗಣೇಶೋತ್ಸವ ಹಿಂದೂ ಧರ್ಮದ ಜಾಗೃತಿಯ ಸಂಕೇತ-ಸ್ವಾಮಿ ಪ್ರಕಾಶಾನಂದಜಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.