ಹಾವೇರಿ: ಯುವ ಸಮೂಹ ಎಚ್ಚರಿಸುವ ವಿಚಾರ ಸಂಕಿರಣ ಅಗತ್ಯ


Team Udayavani, Feb 9, 2024, 6:12 PM IST

ಹಾವೇರಿ: ಯುವ ಸಮೂಹ ಎಚ್ಚರಿಸುವ ವಿಚಾರ ಸಂಕಿರಣ ಅಗತ್ಯ

ಉದಯವಾಣಿ ಸಮಾಚಾರ
ಹಾವೇರಿ: ಇಲ್ಲಿಯ ಪಪೂ ಕಾಲೇಜುಗಳ ನೌಕರರ ಭವನದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿ ಮತ್ತು ಜಿಲ್ಲಾ ಕಸಾಪ ಆಯೋಜಿಸಿದ್ದ ಸಮಕಾಲೀನ ಸಾಹಿತ್ಯದಲ್ಲಿ ಜೀವಪರ ನಿಲುವುಗಳು ಎಂಬ ವಿಚಾರ ಸಂಕಿರಣ ನಡೆಯಿತು.

ಸಮಾರೋಪ ನುಡಿಗಳನ್ನಾಡಿದ ಹಿರಿಯ ಲೇಖಕ ಮೀರಾಸಾಬಿಹಳ್ಳಿ ಶಿವಣ್ಣ, ಪ್ರತಿರೋಧಕ ದನಿಗಳು ದಮನವಾಗುತ್ತಿರುವಾಗ ಹೊಸ ಜನಾಂಗವನ್ನು ಎಚ್ಚರಿಸುವ ಇಂತಹ ವಿಚಾರ ಸಂಕಿರಣಗಳು ಆಗಾಗ ನಡೆಯಬೇಕು ಎಂದರು.

ಮೊದಲ ಗೋಷ್ಠಿಯ ವರ್ಣ, ವರ್ಗಗಳ ಮೀರುವ ಬಗೆ ಎಂಬ ವಿಷಯ ಕುರಿತು ವಿಚಾರ ಮಂಡಿಸಿದ ಕವಿ ವಿಜಯಕಾಂತ ಪಾಟೀಲ, ಸಂವಿಧಾನವೇ ನಮ್ಮ ಧರ್ಮ ಗ್ರಂಥ ಎಂದು ಒಪ್ಪಿಕೊಂಡರೆ ವರ್ಣ ವರ್ಗಗಳ ತಾರತಮ್ಯ ಸುಲಭವಾಗಿ ಮೀರಬಹುದು. ಅತಿಯಾದ ಮೌನ ಮತ್ತು ಮಾತು ಲೇಖಕರಿಗೆ ಬೇಡ. ಈ  ಸಮಾಜದಲ್ಲಿ ಇನ್ನೂ ಅಂತಃಕರಣಗಳ ಸೆಲೆಗಳು
ಬತ್ತಿಲ್ಲ. ಅವುಗಳನ್ನು ಹುಡುಕ ಬೇಕಷ್ಟೆ ಎಂದರು.

ಶಿವಮೊಗ್ಗ ಸೈಹ್ಯಾದ್ರಿ ಕಾಲೇಜಿನ ಡಾ| ಶೋಭಾ ಮರವಂತೆ ಮಾತನಾಡಿ, ಧರ್ಮ ಮತ್ತು ಅಧಿಕಾರದ ಮಾತುಗಳು ಬಂದಾಗ ನಾನು ಹೆಣ್ಣಾಗಿ ಹೆದರುತ್ತೇನೆ. ಗರ್ಭದಲ್ಲಿಯೇ ಕಟ್ಟಲ್ಪಟ್ಟ ಹೆಣ್ಣಿನ ಅವಮಾನ ಮತ್ತು ಅನುಮಾನಗಳು ಸದಾ ಚಾಲ್ತಿಯಲ್ಲಿರುತ್ತವೆ. ದೇವರಿಲ್ಲದ ಜಗತ್ತಿನಲ್ಲಿ ಪಾಪಿಗಳಿಲ್ಲ ಎಂಬ ಮಾತು ನನ್ನನ್ನು ಕಾಡಿದೆ ಎಂದರು.

ಅಕ್ಷತಾ ಕೆ.ಸಿ., ಜ್ಞಾನದ ಮಾತನಾಡಿದರು. ಗೋಷ್ಠಿಯನ್ನು ಶಿವಾನಂದ ಕ್ಯಾಲಕೊಂಡ ನಡೆಸಿದರು. ಎರಡನೆಯ ಗೋಷ್ಠಿಯಲ್ಲಿ
ಜಾಗತೀಕರಣದ ಸಾಮಾಜಿಕ ಪರಿಣಾಮಗಳ ವಿಷಯ ಕುರಿತು ಆನಂದ ಕುಂಚೂರ, ಸಾಫ್ಟವೇರ್‌ ಜಗತ್ತಿನಲ್ಲೂ ಭಾಷೆ, ಜಾತಿ, ಪ್ರಾದೇಶಿಕ ತಾರತಮ್ಯಗಳ ಮೇಲಾಟಗಳಿವೆ. ಜಾಗತೀಕರಣ ನಮ್ಮಂತಹ ಟೆಕ್ಕಿಗಳಿಗೆ ಅನ್ನ ನೀಡಿದರೂ ಸಣ್ಣತನಗಳನ್ನು ಮೀರಲಾಗುತ್ತಿಲ್ಲ. ಭ್ರಮಾತ್ಮಕವಾದ ಜೀವಪರತೆ ಬೇಡ ಎಂದರು.

ಪರಿಸರ ಕುರಿತಾದ ಸಂಗತಿಗಳು ಎಂಬ ವಿಷಯ ಕುರಿತು ಡಾ| ಮಲ್ಲಿಕಾರ್ಜುನಗೌಡ ತೂಲಹಳ್ಳಿ ಮಾತನಾಡಿದರು. ಗೋಷ್ಠಿಗೆ ಸ್ಪಂದನೆ ನೀಡಿದ ಕವಿ ರಂಜಾನ್‌ ಕಿಲ್ಲೇದಾರ, ಕಾವ್ಯ ಮುಖೇನ ಮಾತ್ರ ಜೀವಪರ ಚಿಂತನೆಗಳನ್ನು ನೀಡಬಹುದು ಎಂದರು.

ಗೋಷ್ಠಿಯನ್ನು ಪ್ರಥ್ವಿರಾಜ ಬೆಟಗೇರಿ ನಡೆಸಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಕವಿ ಸತೀಶ ಕುಲಕರ್ಣಿ ವಹಿಸಿದ್ದರು. ಪ್ರಾಚಾರ್ಯ ಮಂಜುನಾಥ ವಡ್ಡರ, ಈರಣ್ಣ ಬೆಳವಡಿ, ಗಂಗಯ್ಯ ಕುಲಕರ್ಣಿ, ಲಿಂಗಯ್ಯ ಹಿರೇಮಠ, ವೀರೇಶ, ಬೇಬಿ ಲಮಾಣಿ ಇದ್ದರು. ಅಕಾಡೆಮಿಯ ಸದಸ್ಯ ಚೆನ್ನಪ್ಪ ಅಂಗಡಿ ವಂದಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.