ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ


Team Udayavani, Jul 8, 2024, 4:00 PM IST

ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ

ಉದಯವಾಣಿ ಸಮಾಚಾರ
ಹಾವೇರಿ: ಪ್ರಸ್ತುತ ವಿಕೃತ ಮನಸ್ಸುಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಚಿತ್ತ ಚಂಚಲ  ತಡೆಯಲು ಧಾರ್ಮಿಕ, ಅಧ್ಯಾತ್ಮ, ಶೈಕ್ಷಣಿಕ ಮತ್ತು ವೈಚಾರಿಕ ಸಂಗತಿಗಳನ್ನು ಪ್ರತಿನಿಧಿಸಿರುವ “ಮನವಾಣಿಗಳು ಕೃತಿ’ ಪ್ರತಿ ಮನುಷ್ಯನ ಜೀವವಾಣಿಯಾಗಿವೆ ಎಂದು ಬಸವಕಲ್ಯಾಣದ ಗುಣತೀರ್ಥ ವಾಡಿಯ ಮಹಾಮನೆ ಮಹಾಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ಗೆಳೆಯರ ಬಳಗದ ಶ್ರೀಮತಿ ಮಣಿಬಾಯಿ ಲೋಡಾಯಾ ಸಭಾಂಗಣದಲ್ಲಿ ರವಿವಾರ ಚಿನ್ಮಯ ಪ್ರಕಾಶನ ಉಳೇನೂರು ಹಾಗೂ ಸಾಹಿತಿ ಕಲಾವಿದರ ಬಳಗದ ಆಶ್ರಯದಲ್ಲಿ ಜರುಗಿದ ಮನವಾಣಿಗಳು ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕವಿ ಸೋಮನಾಥ ಡಿ. ಅವರು ತಮ್ಮ ಸಿದ್ಧಾಂತ, ಅನುಭವ ಮತ್ತು ಕೃತಜ್ಞತಾಪೂರ್ವಕ ಬಗೆಗಿನ ಭಾವನೆಗಳಿಗೆ ಕೃತಿ ರೂಪದಲ್ಲಿ ನ್ಯಾಯ ಕೊಡುವ ಕೆಲಸ ಮಾಡಿದ್ದಾರೆ. ಮನಸ್ಸಿನಲ್ಲಿನ ಭಾವನೆಗಳಿಗೆ ಜ್ಞಾನದ ಒಡಲಿನ ರೂಪ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೃತಿ ಪ್ರತಿಯೊಬ್ಬರ ಮನಸ್ಸು ಏರಿಳಿತಗಳಿಗೆ ಜಾರಿ ಹೋಗುವುದನ್ನು ತಡೆಯುವಲ್ಲಿ ಯಶಸ್ವಿ ಆಗುವುದರಲ್ಲಿ ಸಂದೇಹವಿಲ್ಲ ಎಂದರು.

ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ಬುದ್ಧ, ಬಸವ ಹಾಗೂ ಡಾ| ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬದುಕಿನ
ಮಾರ್ಗದರ್ಶಿಯಾಗಿಸುವ ಮನವಾಣಿಗಳು ಕೃತಿ ವಾಸ್ತವಿಕ ಸ್ಥಿತಿಗತಿಗಳನ್ನು ಪರಿಚಯಿಸುತ್ತದೆ. ತಮ್ಮ ಮನಸ್ಸಿನ ಭಾವನೆಗಳ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅವರ ಆಶಯಗಳು ಸಮಕಾಲೀನ ಸಮಾಜಕ್ಕೆ ಅತ್ಯಗತ್ಯವಾಗಿವೆ ಎಂದರು.

ಪ್ರಾಚಾರ್ಯ ಡಾ| ಅಶೋಕಕುಮಾರ ಮಿಟ್ಟಿ ಮಾತನಾಡಿ, ಮನುಷ್ಯನ ಹುಚ್ಚು ಆಶಯಗಳಿಗೆ ಮನಸ್ಸು ಕಾರಣ. ಸದ್ವಿಚಾರ ಮತ್ತು ಸುವಿಚಾರ ಮೂಲಕ ಬದುಕು ರೂಪಿಸಿಕೊಳ್ಳಲು ಮೌಲಿಕ ವಿಚಾರಗಳ ಹೊತ್ತಿಗೆ ಆಗಿರುವ ಮನವಾಣಿಗಳು ಸಹಕಾರಿ ಎಂದರು.

ಶಿಕ್ಷಕಿ ಜಯಲಕ್ಷ್ಮೀ ಆರ್‌. ಕೃತಿ ಪರಿಚಯ ಮಾಡಿದರು. ಕವಿ ಎ.ಎನ್‌. ರಮೇಶ ಗುಬ್ಬಿ, ಸಾಹಿತಿ ಡಾ| ಸವಿತಾ ಸಿರಗೋಜಿ, ತಹಶೀಲ್ದಾರ್‌ ಮಹೇಶ ಗಸ್ತೆ, ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಅಶೋಕ ಗಡ್ಡಿಗೌಡರ ಮಾತನಾಡಿದರು. ಸಾಹಿತಿ ಕಲಾವಿದರ ಬಳಗದ ವಿ.ಪಿ. ದ್ಯಾಮಣ್ಣವರ, ಶೇಖಣ್ಣ ಕಳ್ಳಿಮನಿ, ಲೀಲಾವತಿ ಪಾಟೀಲ, ಸವಿತಾ ಹಿರೇಮಠ, ಮಧುಮತಿ ಚಿಕ್ಕೇಗೌಡ್ರ, ಈರಣ್ಣ ಬೆಳವಡಿ, ರೇಣುಕಾ ಗುಡಿಮನಿ, ಶಶಿಕಲಾ ಅಕ್ಕಿ, ಭಾಗ್ಯ ಎಂ.ಕೆ., ನೇತ್ರಾವತಿ ಅಂಗಡಿ, ಹನುಮಂತಸಿಂಗ್‌ ರಜಪೂತ್‌, ರಾಜಾಭಕ್ಷು ಹಾಗೂ ಚಿನ್ಮಯ ಪ್ರಕಾಶನದ ಯಮನಪ್ಪ , ಅಂಜನಪ್ಪ ಉಳೇನೂರು, ವಚನಶ್ರೀ ಉಳೇನೂರು, ಕಾಮ್ರೇಡ್‌ ರಾಮಾಂಜನೆಪ್ಪ ಇದ್ದರು. ಸಾಹಿತಿ ಸತೀಶ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಎಸ್‌.ಎಂ. ಬಡಿಗೇರ ಹಾಗೂ ಪೃಥ್ವಿರಾಜ್‌ ಬೆಟಗೇರಿ ನಿರೂಪಿಸಿದರು. ನಾಗರಾಜ ಹುಡೇದ ಸ್ವಾಗತಿಸಿದರು. ಚಂದ್ರಶೇಖರ ಮಾಳಗಿ ವಂದಿಸಿದರು.

ಸಾಹಿತ್ಯಕ ವಲಯದಲ್ಲಿ ಗಮನ ಸೆಳೆದಿರುವ ಮನವಾಣಿಗಳು ಕೃತಿ ಜನವಾಣಿಗಳಾಗಿವೆ. ತಮ್ಮ ಮನಸ್ಸಿನ ಭಾವನೆಗಳಿಗೆ ಅಕ್ಷರ ರೂಪ ನೀಡಿರುವ ಕವಿ ಸೋಮನಾಥ ಡಿ ತಮ್ಮ ಸಾಹಿತ್ಯ ಪ್ರೇಮ ಮುಂದುವರಿಸಲಿ. ಹಾವೇರಿ ನೆಲದಲ್ಲಿ ಚೊಚ್ಚಲ ಕೃತಿ ಬಿಡುಗಡೆ ಆಗುತ್ತಿರುವುದು ಖುಷಿ ವಿಚಾರ.

*ಸತೀಶ ಕುಲಕರ್ಣಿ, ಸಾಹಿತಿ

ಟಾಪ್ ನ್ಯೂಸ್

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haveri

ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.