ಪಶು ಆಸ್ಪತ್ರೆಗೆ ಸಿಬ್ಬಂದಿ ನೇಮಿಸಲು ಒತ್ತಾಯ

ಸರಕಾರಕ್ಕೆ ರೈತ ಸಂಘ-ಹಸಿರು ಸೇನೆ ಕಾರ್ಯಕರ್ತರ ಮನವಿ

Team Udayavani, May 25, 2022, 3:45 PM IST

17

ಬ್ಯಾಡಗಿ: ತಾಲೂಕಿನ ಪಶು ಆಸ್ಪತ್ರೆಗಳಿಗೆ ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ಸರಕಾರವನ್ನು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಹಶೀಲ್ದಾರ್‌ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಶಶಿಧರಸ್ವಾಮಿ ಛತ್ರದಮಠ, ತಾಲೂಕಿನ ಕದರಮಂಡಲಗಿ, ಮಾಸಣಗಿ, ಗುಂಡೇನಹಳ್ಳಿ ಸೇರಿದಂತೆ ಬಹುತೇಕ ಪಶು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ. ಸರ್ಕಾರದ ಬೇಜವಾಬ್ದಾರಿ ವರ್ತನೆಯಿಂದಾಗಿ ರೈತರು ಪರದಾಡಬೇಕಾಗಿದೆ ಎಂದು ಆರೋಪಿಸಿದರು.

ಸಿಬ್ಬಂದಿ ಕೊಡಿ ಇಲ್ಲವೇ ಆಸ್ಪತ್ರೆ ಮುಚ್ಚಿ: ರೈತ ಪರ ಸರ್ಕಾರ ಎಂದು ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರ, ರಾಜ್ಯದ ಬಹುತೇಕ ಕೃಷಿಕ ಸಮುದಾಯ ಎಲ್ಲ ರೀತಿಯಿಂದಲೂ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಗೊಬ್ಬರ ಕೇಳಿದವರ ಮೇಲೆ ಗುಂಡು ಹಾರಿಸಿದ ನಿಮಗೆ ರೈತರ ನೋವು ಅರ್ಥವಾಗುವುದಾದರೂ ಹೇಗೆ? ಕೂಡಲೇ ಸರ್ಕಾರ ಪಶು ವೈದ್ಯ ಸೇವಾ ಇಲಾಖೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ಇಲ್ಲದಿದ್ದರೆ ಅವುಗಳನ್ನು ಮುಚ್ಚುವ ಮೂಲಕ ಇರುವಂತಹ ಅಲ್ಪಸ್ವಲ್ಪ ಸಿಬ್ಬಂದಿಯನ್ನು ಬೇರೆ ಇಲಾಖೆಗೆ ಎರವಲು ವರ್ಗಾವಣೆ ಮಾಡುವಂತೆ ಸಲಹೆ ನೀಡಿದರು.

ಹೈನುಗಾರಿಕೆ ಜೀವಾಳ: ಜಿಲ್ಲೆಯಲ್ಲಿ ಹೈನುಗಾರಿಕೆ ಜೀವಾಳವಾಗಿದೆ. ಜಿಲ್ಲೆಯಲ್ಲಿ ಪಶುಪಾಲನಾ ಇಲಾಖೆ ಸಿಬ್ಬಂದಿ ಕೊರತೆಯಿಂದಾಗಿ ಜಾನುವಾರುಗಳು ರೋಗಗ್ರಸ್ತವಾಗುತ್ತಿವೆ. ನಿಮ್ಮ ಉದ್ದೇಶವಾದರೂ ಏನು? ರೈತನ ಮಕ್ಕಳು ಎಂದು ಹೇಳಿಕೊಳ್ಳುವ ಶಾಸಕರು ಸಹ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಸಿಬ್ಬಂದಿಯನ್ನು ನಿಯೋಜಿಸಿದ ಬಳಿಕವೇ ರೈತರ ಬಗ್ಗೆ ಮಾತನಾಡಲಿ. ಶೀಘ್ರದಲ್ಲಿ ವೈದ್ಯರ ಕೊರತೆ ಸರಿಪಡಿಸದಿದ್ದಲ್ಲಿ ಸಂಘಟನೆ ವತಿಯಿಂದ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಜಾನುವಾರು ಜೀವಕ್ಕೆ ತೊಂದರೆ: ಕದರಮಂಡಲಗಿ ಗ್ರಾಪಂ ಉಪಾಧ್ಯಕ್ಷ ಭೀಮಪ್ಪ ನಾಯ್ಕರ ಮಾತನಾಡಿ, ತಾಲೂಕಿನ ಬಹುಪಾಲು ಪಶು ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಜಾನುವಾರುಗಳಿಗೆ ಚಿಕಿತ್ಸೆಗಾಗಿ ನಾಲ್ಕೈದು ಕಿಮೀ ದೂರದ ಪಶು ಆಸ್ಪತ್ರೆಗಳಿಗೆ ಹೋಗಬೇಕಾಗಿದೆ. ಸಿಬ್ಬಂದಿ ಹಾಗೂ ಮೂಲ ಸೌಲಭ್ಯದ ಕೊರತೆಯಿಂದ ಜಾನುವಾರುಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದ ರೋಗಪೀಡಿತ ಮತ್ತು ಅಪಘಾತಕ್ಕೊಳಗಾದ ಜಾನುವಾರುಗಳು ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿವೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ವಿಶ್ವನಾಥ ಹಿರೇಮಠ, ಮುನ್ನೀರ ಹಲಗೇರಿ, ಮಲ್ಲೇಶ್‌ ಎರೇಶೀಮಿ, ಯಲ್ಲಪ್ಪ ಅಜ್ಜಮ್ಮನವರ, ಯಲ್ಲಪ್ಪ ಓಲೇಕಾರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.