ಶಾಸಕರ ಹೆಸರಲ್ಲಿ ನಕಲಿ ಪಾಸ್ ಸೃಷ್ಟಿಸಿ ಓಡಾಟ ; ಚಾಲಕ ಬಂಧನ


Team Udayavani, Apr 16, 2020, 7:51 PM IST

ಶಾಸಕರ ಹೆಸರಲ್ಲಿ ನಕಲಿ ಪಾಸ್ ಸೃಷ್ಟಿಸಿ ಓಡಾಟ ; ಚಾಲಕ ಬಂಧನ

ಹಾವೇರಿ: ಬ್ಯಾಡಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ವಿರೂಪಾಕ್ಷಪ್ಪ ಬಳ್ಳಾರಿ ಹೆಸರಿನಲ್ಲಿ ನಕಲಿ ಪಾಸ್ ಸೃಷ್ಟಿಸಿ ಗದಗ ಜಿಲ್ಲೆಯಿಂದ ಹಾವೇರಿಗೆ ಪ್ರವೇಶಿಸಲು ಯತ್ನಿಸಿದ ಕಾರು ಚಾಲಕನೋರ್ವ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ಪಾಸ್ ಸೃಷ್ಟಿಕರ್ತನ ಮೇಲೆ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ.

ಕೋವಿಡ್ 19 ಸಂಬಂಧಿತ ಲಾಕ್ ಡೌನ್ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣ ಹೊರತುಪಡಿಸಿ ಇತರ ಪ್ರಯಾಣಿಕರ ವಾಹನ ಓಡಾಟಕ್ಕೆ ನಿರ್ಭಂಧ ಹೆರಲಾಗಿದೆ. ತುರ್ತು ವೈದ್ಯಕೀಯ ಕಾರಣಗಳಿದ್ದರೆ ಅಧಿಕೃತವಾಗಿ ಪಾಸ್ ಪಡೆದು ಪ್ರಯಾಣ ಮಾಡಬಹುದು.

ಆದರೆ ದಿಲೀಪ್ ಬಂಕಾಪುರ ಎಂಬಾತ ಮಾರುತಿ ವಿಟಾರ್ ಬ್ರಿಜ್ (ಕೆಎ-27 ಎನ್ 4122) ಕಾರಿನ ಮೇಲೆ ಬ್ಯಾಡಗಿ ಶಾಸಕರು ಎಂದು ನಕಲಿ ಪಾಸ್ ಹಾಕಿಕೊಂಡು ಲಕ್ಷ್ಮೇಶ್ವರದಿಂದ ರಾಣೇ ಬೆನ್ನೂರಿಗೆ ಕುಟುಂಬದೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎನ್ನಲಾಗಿದೆ.

ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆಯಲ್ಲಿ ಈ ಕಾರನ್ನು ಗಮನಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಕಾರು ತಡೆದು ವಿಚಾರಣೆ ನಡೆಸಿದ್ದಾರೆ. ಕಾರಿನ ಮೇಲಿದ್ದ ಶಾಸಕರ ಹೆಸರಿನ ಬಣ್ಣದ ಪಾಸ್ ಸಾಚಾತನದ ಕುರಿತಂತೆ ಸಂಶಯಗೊಂಡು  ಸ್ಥಳದಲ್ಲೇ ಶಾಸಕರಿಗೆ ಕರೆಮಾಡಿ ಮಾಹಿತಿ ಪಡೆದಿದ್ದಾರೆ.

ಈ ವೇಳೆಯಲ್ಲಿ ಶಾಸಕರು ಯಾರಿಗೂ ಪಾಸ್ ನೀಡಿಲ್ಲ ಎಂಬ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಕಲಿ ಪಾಸ್ ಸೃಷ್ಟಿಸಿ ಕಾರು ಚಾಲನೆ ಮಾಡುತ್ತಿದ್ದವನ ಮೇಲೆ ಮೊಕದ್ದಮೆ ದಾಖಲಿಸಿ ಕಾರು ವಶಪಡಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿಯವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.