![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 1, 2020, 6:57 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ನೆರವಿನ ಹಣವನ್ನು ತ್ವರಿತವಾಗಿ ಎಲ್ಲ ನೋಂದಾಯಿತ ಅರ್ಹ ಎಲ್ಲ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ನೋಂದಾಯಿತ 38 ಸಾವಿರ ಕಾರ್ಮಿಕರ ಪೈಕಿ ನಾಲ್ಕು ಸಾವಿರ ಕಾರ್ಮಿಕರಿಗೆ ಈಗಾಗಲೇ ಹಣ ಜಮೆಯಾಗಿದೆ. ಜಿಲ್ಲಾ ಕಚೇರಿಯಿಂದ ಎಲ್ಲರ ಮಾಹಿತಿಯನ್ನು ಕೇಂದ್ರ ಕಚೇರಿಗೆ ಒದಗಿಸಲಾಗಿದೆ. ಪರಿಶೀಲನೆ ನಂತರ ಕೇಂದ್ರ ಕಚೇರಿಯಿಂದಲೇ ನೇರವಾಗಿ ಕಾರ್ಮಿಕರ ಖಾತೆಗೆ ಹಣ ಜಮೆಯಾಗಲಿದೆ ಎಂದು ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾಹಿತಿ ನೀಡಿದರು.
ಕಳಪೆ ಬಿತ್ತನೆ ಬೀಜ ದಾಸ್ತಾನು ಮಾಡಿದ ಕೋಲ್ಡ್ ಸ್ಟೋರೇಜ್ ಸೀಜ್ ಮಾಡಲಾಗಿದೆ. ಈ ಬೀಜಗಳನ್ನು ಬೇರೆಡೆ ಸ್ಥಳಾಂತರಿಸಿ ಕೋಲ್ಡ್ ಸ್ಟೋರೆಜ್ ಖಾಲಿ ಮಾಡಿಕೊಡಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಚೆಕ್ಪೋಸ್ಟ್ ಚಟವಟಿಕೆ ಕುರಿತಂತೆ ಮಾಹಿತಿ ಪಡೆದ ಅವರು, ಪ್ರತಿ ವಾಹನಗಳ ಮೇಲೆ ತೀವ್ರ ನಿಗಾವಹಿಸಬೇಕೆಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು, ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇನ್ನಿತರ ಅಧಿಕಾರಿಗಳು ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.