ಮುಂಗಾರು ಹಂಗಾಮು ಬಿತ್ತನೆ ಬೀಜೋಪಚಾರ

ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಅಶೋಕ ಪಿ. ಅವರಿಂದ ರೈತರಿಗೆ ತರಬೇತಿ

Team Udayavani, May 27, 2022, 3:21 PM IST

19

ರಾಣಿಬೆನ್ನೂರ: ಹನುಮನವ¾ಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ| ಅಶೋಕ ಪಿ. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ಜಿಲ್ಲಾದ್ಯಂತ ಬಿತ್ತನೆ ಬೀಜಗಳ ಖರೀದಿ ಹಾಗೂ ಬಿತ್ತನೆ ತುಂಬಾ ಬಿರುಸುನಿಂದ ನಡೆದಿದೆ ಎಂದರು.

ಪ್ರತಿ ವರ್ಷ ರೈತರು ಬಿತ್ತನೆ ಮಾಡಲು ಪ್ರಮಾಣೀಕರಿಸಿದ ಬೀಜಗಳನ್ನು ಖರೀದಿಸುವುದು ಸೂಕ್ತವಾದರೂ, ಇದರಿಂದ ರೈತರಿಗೆ ಖರ್ಚಿನ ಹೊರೆ ಹೆಚ್ಚಾಗುತ್ತದೆ. ಹಾಗಾಗಿ, ಒಮ್ಮೆ ಖರೀದಿಸಿದ ಸುಧಾರಿತ ತಳಿಗಳ (ಹೈಬ್ರಿಡ್‌ ತಳಿ ಹೊರತುಪಡಿಸಿ) ಪ್ರಮಾಣೀಕೃತ ಬೀಜಗಳನ್ನು ಸಾಮಾನ್ಯವಾಗಿ 2-3 ವರ್ಷ ಅದೇ ತಳಿಯ ಬೀಜಗಳನ್ನು ಬಿತ್ತನೆಗಾಗಿ ಬಳಸಬಹುದು. ದ್ವಿದಳ ಧಾನ್ಯ ಬೆಳೆಗಳಾದ ಶೇಂಗಾ, ಸೋಯಾ, ಅವರೆ, ಕಡಲೆ, ಹೆಸರು, ಅಲಸಂದೆ, ಅವರೆ ಮುಂತಾದ ಬೀಜಗಳಿಗೆ ಜೈವಿಕ ಗೊಬ್ಬರಗಳಾದ ರೈಜೋಬಿಯಂ, ರಂಜಕ ಕರಗುವಂತಹ ಗೊಬ್ಬರಗಳು ಹಾಗೂ ಏಕದಳ ಧಾನ್ಯಗಳ ಬೀಜಗಳಿಗೆ ಅಜೋಸ್ಪಿರಿಲಮ್‌ಗಳಿಂದ ಪ್ರತಿ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ ಅಣುಜೀವಿ ಗೊಬ್ಬರದಿಂದ ಬೀಜೋಪಚಾರ ಮಾಡಬೇಕೆಂದರು.

ಜೈವಿಕ ಅಣುಜೀವಿಗಳಿಂದ ಬೀಜೋಪಚಾರ ಮಾಡಬೇಕಾದರೆ ಮೊದಲು ಅಂಟು ದ್ರಾವಣ ತಯಾರಿಸಬೇಕು. ಅದಕ್ಕಾಗಿ 250 ಮಿ.ಲೀ. ನೀರಿನಲ್ಲಿ 25 ಗ್ರಾಂ ಬೆಲ್ಲ ಅಥವಾ ಸಕ್ಕರೆ ಕರಗಿಸಿ 15 ನಿಮಿಷ ಕಾಲ ಕುದಿಸಿ ಆರಿಸಿ ಅಗತ್ಯವಿದ್ದಷ್ಟು ಅಂಟು ದ್ರಾವಣವನ್ನು ಒಂದು ಸಣ್ಣ ಪಾತ್ರೆಯಲ್ಲಿ ತೆಗೆದುಕೊಂಡು ಎಕರೆಗೆ ಶಿಫಾರಸ್ಸು ಮಾಡುದ ಅಣುಜೀವಿ ಗೊಬ್ಬರವನ್ನು ಬೆರೆಸಿ ಚೆನ್ನಾಗಿ ಲೇಪನ ಮಾಡಿ, ಬಟ್ಟೆ ಅಥವಾ ಗೋಣಿ ಚೀಲದ ಮೆಲೆ ನೆರಳಲ್ಲಿ ಒಣಗಿಸಿ ಬೀಜ ಬಿತ್ತನೆಗೆ ಬಳಸಬೇಕೆಂದರು.

ಬೀಜಕ್ಕೆ ಶೀಲೀಂಧ್ರ ನಾಶಕಗಳ ಲೇಪನದ ನಂತರ ಈ ಅಣುಜೀವಿ ಗೊಬ್ಬರಗಳ ಲೇಪನ ಮಾಡಬೇಕು. ಬಿತ್ತನೆ ಬೀಜಕ್ಕೆ ಮೇಲೆ ತಿಳಿಸಿದಂತೆ ಅಗತ್ಯವಾದ ಬೀಜೋಪಚಾರ ಮಾಡಿದಾಗ ಮಾತ್ರ ಕಡಿಮೆ ಖರ್ಚಿನ ಹಾಗೂ ಹೆಚ್ಚು ಗುಣಮಟ್ಟದ ಫಸಲು ಪಡೆಯಲು ಸಾಧ್ಯ. ಅಲ್ಲದೇ, ಬೆಳೆಗೆ ಪೂರೈಸಿದ ಗೊಬ್ಬರ, ನೀರು, ಸಸ್ಯ ಸಂರಕ್ಷಣೆ ಹಾಗೂ ಕಾರ್ಮಿಕ ಶ್ರಮದ ಸದುಪಯೋಗವಾಗುವುದೆಂದು ತಿಳಿಸಿದರು.

ನಂತರ ಬಿತ್ತನೆ ಬೀಜಗಳಿಗೆ ವಿವಿಧ ಕೀಟ ನಾಶಕಗಳಿಂದ ಉಪಚರಿಸಿ ಬಿತ್ತುವುದರಿಂದ ಕಡಿಮೆ ಖರ್ಚಿನಲ್ಲಿ ಬೆಳೆಗೆ ಬರಬಹುದಾದ ಅನೇಕ ರೋಗ ಮತ್ತು ಕೀಟದ ಹಾವಳಿ ತಪ್ಪಿಸಬಹುದಾಗಿದೆ. ಸಾಮಾನ್ಯವಾಗಿ ಬೀಜಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕಾಗಿ ಸಸಿ ಮಡಿಯಲ್ಲಿ ಕಂಡು ಬರುವ ಕೊಳೆರೋಗ ನಿಯಂತ್ರಿಸಲು ಪ್ರತಿ ಕಿ.ಗ್ರಾಂ ಬೀಜಕ್ಕೆ 2 ಗ್ರಾಂ ಥೈರಾಮ್‌ ಅಥವಾ ಕ್ಯಾಪಾrನ್‌ ಶಿಲೀಂಧ್ರ ನಾಶಕ ಪುಡಿ ಲೇಪನ ಮಾಡುವುದರಿಂದ ಟೊಮೆಟೋ, ಬದನೆ, ಮೆಣಸಿನಕಾಯಿ ಮುಂತಾದ ಬೆಳೆಗಳಲ್ಲಿ ಸಸಿ ಸಾಯುವ ರೋಗದಿಂದ ರಕ್ಷಿಸಬಹುದು.

ಶೇಂಗಾ, ಹತ್ತಿ, ಕಡಲೆ ಹಾಗೂ ತೊಗರಿ ಬೆಳೆಗಳಿಗೆ ಬರುವ ಬುಡಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರತಿ ಕಿ.ಗ್ರಾಂ ಬೀಜಕ್ಕೆ 4-6 ಗ್ರಾಂ ಟ್ರೆ„ಕೋಡರ್ಮಾ ಜೈವಿಕ ಅಣುಜೀವಿಯಿಂದ ಲೇಪನ ಮಾಡುವುದರಿಂದ ಬೆಳೆ ರಕ್ಷಿಸಬಹುದೆಂದು ತಿಳಿಸಿದರು.

ಮಣ್ಣು ವಿಜ್ಞಾನಿ ಡಾ| ರಾಜಕುಮಾರ ಜಿ.ಆರ್‌. ಮಾತನಾಡಿ, ಮಣ್ಣು ಪರೀಕ್ಷೆ ಆಧಾರಿತ ಮೇಲೆ ಬಿತ್ತುವ ಪೂರ್ವದಲ್ಲಿ ರಸಗೊಬ್ಬರಗಳ ಬಳಕೆ ಮಾಡಬೇಕು. ತದನಂತರ ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆ ಕಂಡು ಬಂದಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರಗಳನ್ನು ಸಿಂಪರಣೆ ಮೂಲಕ ಬೆಳೆಗಳಿಗೆ ಸಿಂಪರಣೆ ಮಾಡಿದಲ್ಲಿ ಪೋಷಕಾಂಶಗಳ ಕೊರತೆ ನಿಗಿಸಬಹುದು. ಬೇಸಿಗೆಯಲ್ಲಿ ಬೆಳೆದ ಹತ್ತಿ ಬೆಳೆಗೆ ಅಲ್ಲಲ್ಲಿ ಮೂಪು ಉದುರುವ ಲಕ್ಷಣಗಳು ಕಂಡು ಬರುತ್ತಿದ್ದು, ಪ್ರತಿ ಲೀಟರ್‌ಗೆ ನೀರಿಗೆ 10 ಗ್ರಾಂ ನೀರಿನಲ್ಲಿ ಕರಗುವ ಪೊಟ್ಯಾಷ್‌ ನೈಟ್ರೇಟ್‌ ಸಿಂಪಡಿಸಬೇಕೆಂದು ತಿಳಿಸಿದರು.

ಪಶು ವಿಜ್ಞಾನಿ ಡಾ| ಮಹೇಶ ಕಡಗಿ ಅವರು, ಕುರಿಗಳ ಆರೋಗ್ಯದ ಬಗ್ಗೆ ಲಸಿಕೆಗಳನ್ನು ನೀಡಲು ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ರೈತರಾದ ದಿಳ್ಳೆಪ್ಪ ಬಣಕಾರ, ಹೊನ್ನಪ್ಪ ಗೌಡ್ರು, ಭೀರಪ್ಪ ಎರೇಕುಪ್ಪಿ, ಕರಿಯಪ್ಪ ಬೀರಾಳ, ನಿಂಗಪ್ಪ ಬಡಪ್ಪಳವರ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.