ಹಿರೇಕೆರೂರ-ರಟ್ಟೀಹಳ್ಳಿಯಲ್ಲಿ ನೀರಿಗಿಲ್ಲ ಬರ

ಕಳೆದ ವರ್ಷ ಸುರಿದ ಮಳೆಯಿಂದ ಕೆರೆ-ಕಟ್ಟೆಗಳಲ್ಲಿ ನೀರು ಭರ್ತಿ ­ಅಂತರ್ಜಲ ಮಟ್ಟವೂ ಹೆಚ್ಚಳ

Team Udayavani, May 9, 2021, 4:11 PM IST

jghjtyuy

ವರದಿ: ಸಿದ್ಧಲಿಂಗಯ್ಯ ಗೌಡರ

ಹಿರೇಕೆರೂರ: ಹಿರೇಕೆರೂರ ಹಾಗೂ ರಟ್ಟಿàಹಳ್ಳಿ ತಾಲೂಕಿನಲ್ಲಿ ಬಿಸಿಲಿನ ತಾಪ ದಿನೇ ದಿನೆ ಹೆಚ್ಚುತ್ತಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟೊಂದು ಉಲ್ಬಣಗೊಂಡಿಲ್ಲ. ಉಭಯ ತಾಲೂಕುಗಳಲ್ಲಿ ಕಳೆದ ವರ್ಷ ಉತ್ತಮ ಮಳೆ ಸುರಿದ ಕಾರಣ ಕೆರೆ-ಕಟ್ಟೆಗಳಲ್ಲಿ ನೀರು ತುಂಬಿದೆ. ಹಾಗಾಗಿ, ಅಂತರ್ಜಲ ಮಟ್ಟವೂ ಹೆಚ್ಚಾಗಿದೆ.

ಪ್ರಸ್ತುತದಲ್ಲಿ ಬಿಸಿಲಿನ ತಾಪದಿಂದ ಕೆರೆ-ಕಟ್ಟೆಗಳಲ್ಲಿ ನೀರು ಕಡಿಮೆಯಾಗಿದ್ದರೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣುತ್ತಿಲ್ಲ. ಆದರೆ, ಇದೇ ಬಿಸಿಲಿನ ತಾಪ ಮುಂದುವರೆದು ಮಳೆಯೂ ಆಗದ ಸಂದರ್ಭದಲ್ಲಿ ಅಲ್ಪ ಮಟ್ಟಿನ ನೀರಿನ ತೊಂದರೆಯಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಅವಳಿ ತಾಲೂಕಿನಲ್ಲಿ 126 ಗ್ರಾಮಗಳಿದ್ದು, ಅವುಗಳಲ್ಲಿ ರಟ್ಟಿàಹಳ್ಳಿ ತಾಲೂಕಿನ ಒಟ್ಟು 36 ಗ್ರಾಮಗಳಿಗೆ ಬೈರನಪಾದ ಮತ್ತು ರಟ್ಟಿàಹಳ್ಳಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಗ್ರಾಮಗಳಿಗೆ ಆಯಾ ಗ್ರಾಮಗಳ ಕೊಳವೆ ಬಾವಿಗಳ ಮೂಲಕ ನೀರು ಪೊರೈಕೆ ಮಾಡಲಾಗುತ್ತಿದೆ. ಆದಾಗ್ಯೂ, ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆಗಳು ಉಲ್ಬಣಿಸಬಹುದು ಎಂದು ಅಂದಾಜಿಸಿ, ಗ್ರಾಮೀಣ ನೀರು ಮತ್ತು ಸರಬರಾಜು ಇಲಾಖೆಯವರು ಅವಳಿ ತಾಲೂಕಿನಲ್ಲಿ ಸಮೀಕ್ಷೆ ಕೈಗೊಂಡು ಚಿಕ್ಕೇರೂರು, ಚಿನ್ನಮುಳಗುಂದ ತಾಂಡಾ, ಹಿರೇಮತ್ತೂರು, ಲಿಂಗದೇವರಕೊಪ್ಪ, ಯತ್ತಿಹಳ್ಳಿ ಎಂ.ಎಂ. ತಾಂಡಾ, ಚಿಕ್ಕಮತ್ತೂರು, ಕೋಡ, ಶಂಕರನಹಳ್ಳಿ, ಚಿಕ್ಕೊಣತಿ, ಗಂಗಾಪುರ, ಉಜನಿಪುರ, ಚೊಗಚಿಕೊಪ್ಪ ತಾಂಡಾ, ಹೊಸವೀರಾಪುರ, ಸುತ್ತಕೋಟಿ, ಹೊಸಳ್ಳಿ, ದೊಡ್ಡಗುಬ್ಬಿ, ಯತ್ತಿನಹಳ್ಳಿ ಎಂ.ಕೆ., ಪುರಕೊಂಡಿಕೊಪ್ಪ, ಮಡ್ಲೂರು, ನಿಟ್ಟೂರು, ಭೋಗಾವಿ, ದುಪದಹಳ್ಳಿ, ಮುದ್ದಿನಕೊಪ್ಪ, ಹಿರೇಯಡಚಿ, ಬತ್ತಿಕೊಪ್ಪ, ಕುಂಚೂರು, ಚಿನ್ನಮುಳಗುಂದ, ಬೆಟಕೇರೂರ, ಸಾತೇನಹಳ್ಳಿ, ಆರೀಕಟ್ಟಿ, ಹಿರೇಬೂದಿಹಾಳ ಹಾಗೂ ಚಿಕ್ಕಬೂದಿಹಾಳ ಗ್ರಾಮಗಳನ್ನು ಗುರುತಿಸಿದ್ದಾರೆ. ನೀರಿನ ತೊಂದರೆ ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ.

ಹಿರೇಕೆರೂರ ದುರ್ಗಾದೇವಿ ಕೆರೆ ತುಂಬಿಸುವ ಯೋಜನೆ ಹಾಗೂ ರಟ್ಟಿàಹಳ್ಳಿ ತಾಲೂಕಿನ ಗುಡ್ಡದ ಮಾದಾಪುರ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಈಗಾಗಲೇ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ಸರ್ವಜ್ಞ ಏತ ನೀರಾವರಿ ಯೋಜನೆ, ಮಡ್ಲೂರು ಏತ ನೀರಾವರಿ ಯೋಜನೆ ಹಾಗೂ ಅಸುಂಡಿ ಏತ ನೀರಾವರಿ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಕಾಮಗಾರಿ ಪೂರ್ಣಗೊಂಡು ನೀರು ಹರಿಯಲಾರಂಭಿಸಿದಾಗ ತಾಲೂಕಿನ ಬಹುತೇಕ ಎಲ್ಲ ಕೆರೆಗಳು ಭರ್ತಿಯಾಗುತ್ತವೆ. ಆಗ ಜನ, ಜಾನುವಾರುಗಳಿಗೆ ಎಲ್ಲೆಡೆ ಸಮೃದ್ಧವಾಗಿ ನೀರು ಲಭ್ಯವಾಗಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.