ಬಾಡಿಗೆ ವಾಹನಗಳಿಗೆ ಈಗ ಹೊಸ ಸಂಕಷ್ಟ! ಸರ್ಕಾರಕ್ಕೂ ಲಕ್ಷಾಂತರ ರೂ. ತೆರಿಗೆ ನಷ್ಟ


Team Udayavani, Jul 10, 2024, 6:09 PM IST

ಬಾಡಿಗೆ ವಾಹನಗಳಿಗೆ ಈಗ ಹೊಸ ಸಂಕಷ್ಟ! ಸರ್ಕಾರಕ್ಕೂ ಲಕ್ಷಾಂತರ ರೂ. ತೆರಿಗೆ ನಷ್ಟ

ಉದಯವಾಣಿ ಸಮಾಚಾರ
ಶಿಗ್ಗಾವಿ: ಸಾರಿಗೆ ಇಲಾಖೆಯಿಂದ ವಾಣಿಜ್ಯ ಪರವಾನಗಿ ಪಡೆಯದ ವಾಹನಗಳನ್ನು ತಾಲೂಕಿನಲ್ಲಿ ಅಕ್ರಮವಾಗಿ ಬಾಡಿಗೆಗೆ
ಬಳಸಲಾಗುತ್ತಿದ್ದು ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ನಷ್ಟವಾಗುತ್ತಿದೆ. ಅಲ್ಲದೇ ವಾಣಿಜ್ಯ ಪರವಾನಗಿ ಪಡೆದ ವಾಹನ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ.

ಸ್ವಂತ ಬಳಕೆಯ ಉದ್ದೇಶದ ಹೆಸರಲ್ಲಿ ವಾಹನಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಖಾಸಗಿ(ವೈಟ್‌ ಬೋರ್ಡ್‌) ನೋಂದಣಿ
ಮಾಡಿಸಿ ಲೈಫ್‌ ಟೈಂ ಟ್ಯಾಕ್ಸ್‌ನಿಂದ ಮುಕ್ತಿ ಪಡೆದಿದ್ದಲ್ಲದೇ ವಾಹನವನ್ನು ಬಾಡಿಗೆಗೆ ಬಳಸಿ ಲಾಭ ಮಾಡಿಕೊಳ್ಳಲಾಗುತ್ತಿದೆ.

ಆದರೆ ವಾಣಿಜ್ಯ ಬಳಕೆಗೆಂದು (ಹಳದಿ ಬೋರ್ಡ್‌) ವಾಹನ ನೋಂದಣಿ ಮಾಡಿಸಿದವರು ಪ್ರತಿ ಮೂರು ತಿಂಗಳಿಗೊಮ್ಮೆ ಸಾವಿರಾರು ರೂ.ಸಾರಿಗೆ ತೆರಿಗೆ, ವಾಹನ ವಿಮಾ ಪಾವತಿಸುತ್ತಾರೆ. ಇದರಿಂದ ಸರ್ಕಾರಕ್ಕೆ ಲಾಭವಾಗುತ್ತದೆ. ಆದರೆ ವಾಣಿಜ್ಯ ವಾಹನ ಮಾಲೀಕರ ಬಾಡಿಗೆ ದುಡಿಮೆಯನ್ನು ವೈಟ್‌ಬೋರ್ಡ್‌ ಪರವಾನಗಿ ವಾಹನ ಮಾಲಿಕರು ಕಬಳಿಸುತ್ತಿರುವುದು ಸಂಕಷ್ಟ ತಂದೊಡ್ಡಿದೆ.

ವಾಣಿಜ್ಯ ವಾಹನಗಳ ಮಾಲೀಕರು ಬ್ಯಾಂಕ್‌ ಸಾಲದ ತಿಂಗಳ ಕಂತು, ವಾಹನದ ವಿಮೆ, ಪರವಾನಗಿಗಾಗಿ ಸಾವಿರಾರು ರೂ. ವಾರ್ಷಿಕ ಪ್ರೀಮಿಯಂ, ಚಾಲಕರ ಸಂಬಳ, ವಾಹನ ನಿರ್ವಹಣೆ ಹೀಗೆ ಹತ್ತಾರು ತರಹದ ಆರ್ಥಿಕ ತೊಂದರೆ ಎದುರಿಸುವಂತಾಗಿದೆ.

ವಾಣಿಜ್ಯ ವಾಹನಗಳ ಮಾಲೀಕರು ಸಂಬಂಧಿತ ಸಾರಿಗೆ ಪ್ರಾಧಿಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಬಿಗಿ ಕಾನೂನು ಕ್ರಮ ಕೈಗೊಂಡಿಲ್ಲ. ಇದೇ ರೀತಿ ಮುಂದುವರಿದರೆ ನಾವೆಲ್ಲ ಅರ್ಥಿಕ ಸಂಕಷ್ಟಕ್ಕೆ ಸಿಲುಕುತ್ತೇವೆ. ಬ್ಯಾಂಕ್‌ಗಳು ಸಾಲ
ವಸೂಲಿಗಾಗಿ ವಾಹನವನ್ನೇ ಸೀಜ್‌ ಮಾಡುತ್ತಾರೆ. ನಮ್ಮ ಜೀವನ ಮತ್ತಷ್ಟು ಬಿಗಡಾಯಿಸಲಿದೆ ಎಂದು ವಾಣಿಜ್ಯ ವಾಹನ ಮಾಲೀಕರು ಕಳವಳ ವ್ಯಕ್ತಪಡಿಸುತ್ತಾರೆ.

ಖಾಸಗಿ ವಾಹನ ಪರವಾನಗಿ ಪಡೆದು ವಾಣಿಜ್ಯ ಬಳಕೆ ಮಾಡುತ್ತಿರುವ ವಾಹನಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
*ಸತ್ಯಪ್ಪ ಮಾಳಗೊಂಡ, ಶಿಗ್ಗಾವಿ ಪಿ.ಐ.

ವಾಣಿಜ್ಯ ಉದ್ದೇಶಕ್ಕಾಗಿ ಎಲ್ಲ ಸೌಲಭ್ಯದ ದುಬಾರಿ ಬೆಲೆಯ ಕಾರ್‌ನ್ನು ಬ್ಯಾಂಕ್‌ಗಳ ಸಾಲ ಸೌಲಭ್ಯದಡಿ ಖರೀದಿಸಿ ಬಾಡಿಗೆಗೆ ಎದುರು ನೋಡುತ್ತಿದ್ದೇನೆ. ಖಾಸಗಿ ವಾಹನ ಮಾಲೀಕರು ನಮಗಿಂತ ಕಡಿಮೆ ಬೆಲೆಗೆ ಅವರ ಕಾರ್‌ ಗಳನ್ನು ಬಾಡಿಗೆ ನೀಡುವುದರಿಂದ ಈ ಉದ್ಯೋಗ ನಂಬಿದ ನಮಗೆ ಬಾಡಿಗೆ ಸಿಗುತ್ತಿಲ್ಲ. ಬೇರೆ ಕಡೆ ಸಾಲ ಮಾಡಿ ಕಂತು ಭರಿಸುವಂತಾಗಿದೆ.
*ಮಲ್ಲಪ್ಪ ಮಂಚಿನಕೊಪ್ಪ, ವಾಣಿಜ್ಯ ವಾಹನ ಮಾಲೀಕ.

ಸಾರಿಗೆ ಇಲಾಖೆ ಆಯುಕ್ತರಿಗೆ ಮೂರ್‍ನಾಲ್ಕು ತಿಂಗಳ ಹಿಂದೆಯೇ ವಾಹನ ಮಾಲೀಕರ ಸಂಘದ ಮೂಲಕ ಖಾಸಗಿ ಬಾಡಿಗೆ ವಾಹನಗಳ ಮೇಲೆ ಕ್ರಮ ವಹಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಪೊಲೀಸ್‌ ಇಲಾಖೆಗೆ ಪತ್ರ ಬರೆದಿದ್ದರೂ ವಾಹನ ತಪಾಸಣೆ ನಡೆಸಿ ಕ್ರಮ ವಹಿಸಲ್ಲ. ಉದ್ಯೋಗದಲ್ಲಿ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.
*ರವಿ ಗಾಣಿಗೇರ ಸವಣೂರು, ವಾಣಿಜ್ಯ
ವಾಹನ ಸಂಘದ ಸದಸ್ಯ.

ಪರವಾನಗಿ ಇಲ್ಲದೇ ಓಡಿಸುವ ವಾಹನ ಮಾಲೀಕರು ಕಡಿಮೆ ಬಾಡಿಗೆ ಹೇಳಿ ಹೆಚ್ಚೆಚ್ಚು ದುಡಿಮೆ ಮಾಡಿಕೊಳ್ಳುವಂತಾಗಿದೆ. ಸಾರಿಗೆ ಇಲಾಖೆ ನೀತಿ ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವಂತಾಗಿದೆ. ಅನಧಿಕೃತ ವಾಹನ ಮಾಲೀಕರ ಮೇಲೆ ಬಿಗಿ ಕಾನೂನು ಜಾರಿಗೊಳಿಸಬೇಕು.
*ಪುಟ್ಟರಾಜ ಸಂಶಿ, ವಾಹನ ಚಾಲಕ.

■ ದೇವರಾಜ ಸುಣಗಾರ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.