ಬ್ಯಾಡಗಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ “ಕತ್ತೆಗಳ ಮದುವೆ’


Team Udayavani, Jul 1, 2023, 6:40 PM IST

ಬ್ಯಾಡಗಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ “ಕತ್ತೆಗಳ ಮದುವೆ’

ಬ್ಯಾಡಗಿ: ಕೈಕೊಟ್ಟ ಮಳೆಯಿಂದ ಕಂಗಾಲಾದ ರೈತ ಸಮುದಾಯ ಮಳೆಗಾಗಿ ಪ್ರಾರ್ಥಿಸಿ ಪಟ್ಟಣದ ಚಾವಡಿ ರಸ್ತೆಯಲ್ಲಿರುವ
ಗ್ರಾಮದೇವತೆ(ದ್ವಾಮವ್ವ ದೇವಿ)ದೇವಸ್ಥಾನದ ಬಳಿ ಶುಕ್ರವಾರ ಕತ್ತೆಗಳ ಮದುವೆ ಮಾಡಿಸಿದರು.

ಮಳೆಗಾಗಿ ದೇವಸ್ಥಾನಗಳಲ್ಲಿ ಪೂಜೆ, ಪುನಸ್ಕಾರ, ಹೋಮ-ಹವನಗಳನ್ನು ನಡೆಸುವುದು ಸಹಜ. ಮಳೆ ಕೈಕೊಟ್ಟ ಸಂದರ್ಭದಲ್ಲಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಗೋಪೂಜೆ, ಬೋರ್ಗಲ್‌ ಮೇಲೆ ನೀರು ಸುರಿಯುವುದು, ಗಣ ಹೋಮ ಸೇರಿದಂತೆ ಇನ್ನಿತರ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವುದು ಕೂಡ ಸಾಮಾನ್ಯ. ಅಂತೆಯೇ, ಪಟ್ಟಣದ ರೈತರು ಗ್ರಾಮದೇವತೆ ದೇವಸ್ಥಾನದ ಎದುರು ಕತ್ತೆಗಳ ಮದುವೆ ನೆರವೇರಿಸಿದರು.

ಶಾಸ್ತ್ರೋಕ್ತ ಮದುವೆ: ದೇವಸ್ಥಾನದ ಎದುರು ಮದುವೆ ಸಮಾರಂಭಗಳಿಗೆ ಹಾಕುವ ಮಾದರಿಯಲ್ಲೇ ಹಂದರ ಹಾಕಲಾಗಿತ್ತು.
ಕತ್ತೆಗಳಿಗೆ ಮುತ್ತೆ„ದೆಯರು ಅರಿಶಿಣ ಹಚ್ಚಿ, ಸುರಿಗೆ ನೀರು ಹಾಕಿ, ಹಂದರಕ್ಕೆ ಪೂಜೆ ಮಾಡಿದರು. ನಂತರ ಕತ್ತೆಗಳಿಗೆ ತಾಳಿ ಕಟ್ಟುವ
ಕಾರ್ಯ ಪುರೋಹಿರ ಮಂತ್ರಘೋಷಗಳ ನಡುವೆ ಶಾಸ್ತ್ರೋಕ್ತವಾಗಿ ನಡೆಯಿತು.

ಉಚ್ಚಂಗಿ ದುರ್ಗದ ವಧು-ವರರು: ನೂತನ ವಧು-ವರರು ಹರಪನಹಳ್ಳಿ ತಾಲೂಕು ಉಚ್ಚಂಗಿ ದುರ್ಗದವರಾಗಿದ್ದಾರೆ (ಸ್ಥಳೀಯವಾಗಿ ಕತ್ತೆಗಳು ಸಿಗದ ಕಾರಣ). ಪಟ್ಟಣದ ರೈತ ಮುಖಂಡರ ಸಮ್ಮುಖದಲ್ಲಿ ಕತ್ತೆಗಳನ್ನು ಸಾಂಪ್ರದಾಯಿಕ ವಿ ಧಿವಿಧಾನಗಳೊಂದಿಗೆ ಮದುವೆ ಮಾಡಲಾಯಿತು. ನಂತರ ಸಕಲ ವಾದ್ಯವೈಭವಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ವಧು-ವರ ಕತ್ತೆಗಳ ಮರೆವಣಿಗೆ ನಡೆಸಿ ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿಸಲಾಯಿತು.

ನಂಬಿಕೆ ಹುಸಿಯಾಗದಿರಲಿ: ಈ ವೇಳೆ ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಪರಿಸ್ಥಿತಿ ಹೀಗೆಯೇ ಮುಂದುವರೆದಲ್ಲಿ ಪ್ರಸಕ್ತ ವರ್ಷ ಬರಗಾಲ ಎದುರಾಗುವ ಭೀತಿ ಇದೆ. ಹಾಗಾಗಿ, ಕತ್ತೆಗಳ ಮದುವೆ ಮಾಡಿಸಿದಲ್ಲಿ ಮಳೆ ಬರುತ್ತದೆ ಎಂಬ ನಮ್ಮ ಪೂರ್ವಜರ ನಂಬಿಕೆಯಂತೆ ಮದುವೆ ಕಾರ್ಯ ಮಾಡಲಾಗುತ್ತಿದೆ. ಪ್ರಸಕ್ತ ವರ್ಷ ಬರಗಾಲದ ಛಾಯೆ ಅವರಿಸಿದ್ದು, ರೈತರನ್ನು ಚಿಂತೆಗೀಡು ಮಾಡಿದೆ. ಕಳೆದ ತಿಂಗಳು ಸುರಿದ ಅಷ್ಟಿಷ್ಟು ಮಳೆಯನ್ನು ನಂಬಿ ಕೆಲ ರೈತರು ಬಿತ್ತನೆ ಕಾರ್ಯ ಮುಗಿಸಿದ್ದಾರೆ. ಮಳೆ ಕೈಕೊಟ್ಟಿದ್ದರಿಂದ ರೈತ ಸಮೂಹಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಅಶೋಕ ಮೂಲಿಮನಿ, ಪುಟ್ಟಪ್ಪ ಛತ್ರದ, ಎಂ.ಆರ್‌.ಭದ್ರಗೌಡ್ರ, ಅಶೋಕ ಮಾಳೇನಹಳ್ಳಿ, ಈಶ್ವರ ಮಠದ, ಪ್ರಶಾಂತ ಹಾಲನಗೌಡ್ರ, ಬಸವರಾಜ ಸಂಕಣ್ಣನವರ, ಸಿದ್ಧಣ್ಣ ಮಾಳೇನಹಳ್ಳಿ, ಶಂಕರ ಬಿದರಿ, ರಾಜು ಚನ್ನಗೌಡ್ರ, ಶಿವಕುಮಾರ ಕಲ್ಲಾಪೂರ, ಶಕುಂತಲ ಮಠದ, ವಿಕಾಸ ಕಾಟೇನಹಳ್ಳಿ, ಜ್ಯೋತಿ ಡಂಬಳ, ಸುಶೀಲಮ್ಮ ಯಲಿ, ತಿಮ್ಮಣ್ಣನವರ, ಕರಬಸಪ್ಪ ಹರಿಯಾಳದ, ಸುನಂದಾ ಮಾಳೇನಹಳ್ಳಿ, ಲಕ್ಷಣಪ್ಪ ಸೊಟ್ಟೇರ, ಕನ್ನಪ್ಪ ಕೊಪ್ಪದ, ವೀರಬಸವ್ವ ಮೂಲಿಮನಿ, ಸುಮ ಸಂಕಣ್ಣನವರ, ನಿರ್ಮಲ ಛತ್ರದ, ಶೈಲ ಆಟದವರ, ಮಹದೇವಕ್ಕ ಮಾಳೇನಹಳ್ಳಿ, ಚಂದ್ರಣ್ಣ ಶೆಟ್ಟರ, ಮಹದೇವಪ್ಪ ಎಲಿ, ಗಣೇಶ ಬೆನಕನಕೊಂಡ, ಉಮೇಶ ಕಬ್ಬೂರ, ಮಹದೇವಪ್ಪ ಕೊಪ್ಪದ, ಮುತ್ತು ಸಂಕಣ್ಣನವರ,
ರಾಜು ಹೂಲಿಹಳ್ಳಿ, ಮಂಜು ಕೊಪ್ಪದ ಇನ್ನಿತರರಿದ್ದರು.

ವೈಜ್ಞಾನಿಕವಾಗಿ ನಾವು ಎಷ್ಟೇ ಮುಂದುವರೆದಿದ್ದರೂ ಸಂಪ್ರದಾಯವಾದಿ ರಾಷ್ಟ್ರ ಭಾರತದಲ್ಲಿ ನಿಗದಿತ ಸಮಯಕ್ಕೆ ಮಳೆ ಬಾರದಿದ್ದಾಗ ಇಂತಹ ಪದ್ಧತಿ, ಆಚರಣೆಳನ್ನು ನೆರವೇರಿಸುತ್ತಾರೆ. ಮಳೆಯಾದರೆ ಎಲ್ಲರಿಗೂ ಒಳಿತು. ವರುಣ ದೇವ ರೈತರ ನಂಬಿಕೆ ಹುಸಿಗೊಳಿಸಿದಿರಲಿ.
ಸುರೇಶಗೌಡ ಪಾಟೀಲ,
ಮಾಜಿ ಶಾಸಕರು

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.