ಬಸ್ ನಿಲುಗಡೆ ಸಮಸ್ಯೆ ಇತ್ಯರ್ಥ
ಪಿಎಸ್ಐ ಪರಶುರಾಮ ಕಟ್ಟಿಮನಿ ಸಂಧಾನ ಸಭೆ ಫಲಪ್ರದ
Team Udayavani, Mar 13, 2022, 5:29 PM IST
ಬಂಕಾಪುರ: ರಾಷ್ಟ್ರೀಯ ಹೆದ್ದಾರಿ 4ರ ತಂಬಾಕದ ಮನೆ ಬಳಿ ಎಲ್ಲ ಸಾರಿಗೆ ಸಂಸ್ಥೆಗಳ ಬಸ್ಗಳನ್ನು ನಿಲುಗಡೆಗೊಳಿಸಬೇಕೆಂದು ಆಗ್ರಹಿಸಿ ಹೋರಾಟಕ್ಕೆ ಅಣಿಯಾಗುತ್ತಿದ್ದ ಗ್ರಾಮಸ್ಥರು ಹಾಗೂ ಸಾರಿಗೆ ಸಂಸ್ಥೆ ಅಧಿಕಾರಿಗಳ ಸಭೆ ನಡೆಸಿದ ಪಿಎಸ್ಐ ಪರಶುರಾಮ ಕಟ್ಟಿಮನಿ ಅವರು, ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥಪಡಿಸಿದರು.
ಬಂಕಾಪುರ ಪಟ್ಟಣ 30 ಸಾವಿರಕ್ಕಿಂತ ಅಧಿಕ ಜನಸಂಖ್ಯೆ ಹಾಗೂ ಸುಮಾರು 60 ಹಳ್ಳಿಗಳ ನಿಕಟ ಸಂಪರ್ಕ ಹೊಂದಿದೆ. ಪಟ್ಟಣದಲ್ಲಿ ಡಿಪ್ಲೋಮಾ ಕಾಲೇಜು, ಪ್ರಥಮ ದರ್ಜೆ ಮಹಾವಿದ್ಯಾಲಯ, ಪದವಿ ಪೂರ್ವ ಕಾಲೇಜು, ಐಟಿಐ ಸೇರಿದಂತೆ ಹಲವಾರು ಪ್ರೌಢಶಾಲೆಗಳಿವೆ. ಉಪ ತಹಶೀಲ್ದಾರ್ ಕಚೇರಿ, ಕೃಷಿ ಕೇಂದ್ರ, ಪುರಸಭೆಯನ್ನು ಹೋಂದಿದೆ. ಅದಲ್ಲದೇ, ಬಹುದೊಡ್ಡ ವ್ಯಾಪಾರ ಕೇಂದ್ರವೂ ಆಗಿರುವುದರಿಂದ ಪ್ರತಿ ದಿನ ಸಾವಿರಾರು ಸಂಖ್ಯೆಯ ಜನ ದಿನದ 24 ಗಂಟೆಗಳ ಕಾಲ ಸಂಚರಿಸುತ್ತಾರೆ. ಜನರ ಅನಕೂಲಕ್ಕಾಗಿ ಎಲ್ಲ ಸಾರಿಗೆ ಸಂಸ್ಥೆಗಳ ಬಸ್ಗಳು ಎನ್.ಎಚ್. 4ರ ತಂಬಾಕದ ಮನೆಯ ಸರ್ವೀಸ್ ರಸ್ತೆಯಲ್ಲಿ ನಿಲುಗಡೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸುತ್ತಾ ಬಂದಿದ್ದರು.
ಇದಕ್ಕೆ ಸಮ್ಮತಿಸಿದ ಸಾರಿಗೆ ಸಂಸ್ಥೆ ಅಧಿಕಾರಿಗಳು, ಎಲ್ಲ ಬಸ್ಗಳು ತಂಬಾಕದ ಮನೆ ಹತ್ತಿರ ನಿಂತು ಹೋಗಲು ಆದೇಶ ಮಾಡಿದ್ದರು. ಆದರೆ, ಬಸ್ ಗಳು ನಿಲುಗಡೆಯಾಗದೆ ಮೇಲ್ಸೇತುವೆ ಮೇಲೆ ಹಾದು ಹೋಗುತ್ತಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದರು. ಆಗ ಸ್ಥಳೀಯ ಪಿಎಸ್ಐ ಪರಶುರಾಮ ಕಟ್ಟಿಮನಿ ಅವರು ಸಂಧಾನ ಸಭೆ ನಡೆಸಿದರು.
ಸಭೆಯಲ್ಲಿ ಹಾವೇರಿ ಸಾರಿಗೆ ಇಲಾಖೆ ಅಧಿಕಾರಿ ಆಶೀಕ್ ಪಾಟೀಲ ಅವರು ಮಾ. 15 ರಿಂದ ನಾನ್ಸ್ಟಾಪ್ ಹಾಗೂ ಲಗ್ಝರಿ ಬಸ್ ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್ ಗಳು ತಾಂಬಾಕದ ಮನೆ ಹತ್ತಿರ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು. ದಿನದ 24 ಗಂಟೆಗಳ ಕಾಲ ಸಾರಿಗೆ ನಿಯಂತ್ರಕರನ್ನು ನಿಯೋಜಿಸಿ ಕಡ್ಡಾಯವಾಗಿ ಎಲ್ಲ ಬಸ್ ಗಳು ನೋಂದಣಿಯಾಗಿ ಸಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಸಾರಿಗೆ ಸಹಾಯಕ ವ್ಯವಸ್ಥಾಪಕ ಬಾಪುಗೌಡ ಪಾಟೀಲ, ಸಾರಿಗೆ ನಿಯಂತ್ರಕ ಬಾಪು ತಳ್ಳಳ್ಳಿ, ಮುಖಂಡರಾದ ಹುಚ್ಚಯ್ಯಸ್ವಾಮಿ ಹುಚ್ಚಯ್ಯನಮಠ, ರಾಮಣ್ಣ ರಾಣೋಜಿ, ಸತೀಷ ಆಲದಕಟ್ಟಿ, ಸುರೇಶ ಕುರಗೋಡಿ, ಯಲ್ಲಪ್ಪ ಸುಂಕದ, ರಮೇಶ ಸಿದ್ದುನವರ, ಬಸವರಾಜ ನಾರಾಯಣಪುರ, ಎಮ್.ಎಸ್.ನರೇಗಲ್, ಕಲ್ಲಪ್ಪ ಹರವಿ, ನೀಲಪ್ಪ ಕುರಿ, ಗಿರಿರಾಜ ದೇಸಾಯಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ
By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ: ಎಚ್ ಕೆ ಪಾಟೀಲ್
Karnataka By Poll 2024: ಟಿಕೆಟ್ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ
Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್
ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.