ಅನಾಥ ರಕ್ಷಕ ಲಿಂ.ಹಾನಗಲ್ಲ ಕುಮಾರ ಸ್ವಾಮೀಜಿ


Team Udayavani, Mar 7, 2021, 7:11 PM IST

programme held at hanagal

ಹಾನಗಲ್ಲ: ವೈಚಾರಿಕ ಯುಗದಲ್ಲಿರುವ ನಾವು ಆಧ್ಯಾತ್ಮ ಹಾಗೂ ಸದಾಚಾರಗಳನ್ನು ಮರೆಯದೇ ಸಮಾಜಮುಖೀ ಕಳಕಳಿಯೊಂದಿಗೆ ಸಮೃದ್ಧ ಸೌಖ್ಯ ಕುಟುಂಬಿಗಳಾಗಬೇಕೆಂದು ಹುಬ್ಬಳ್ಳಿಮೂರುಸಾವಿರಮಠದ ಜಗದ್ಗುರು  ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ನುಡಿದರು.

ಇಲ್ಲಿನ ವಿರಕ್ತ ಮಠದಲ್ಲಿ ಲಿಂ.ಹಾನಗಲ್ಲ ಕುಮಾರ ಶಿವಯೋಗಿಗಳವರ 91 ನೇ ಪುಣ್ಯಸ್ಮರಣೋತ್ಸವದ ಸಮಾರೋಪದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾಯಕ, ದಾಸೋಹ ಶರಣರು ಸ್ವಯಂ ಆಚರಿಸಿ, ಹೇಳಿದ ಸತ್ಯ. ಎಲ್ಲರೂಒಂದಾಗಿ ಬದುಕಬೇಕು ಹಾಗೂ ಜೀವನದ ಶ್ರದ್ಧೆಗೆ ಸಾತ್ವಿಕ ಚಿಂತನೆಗಳು ಅಗತ್ಯ ಎಂಬುದು ಬಹುಮುಖ್ಯ ಸಂಗತಿ. ಕಾಲಹರಣ ಮಾಡದೇ ಕಾಯಕ ಧರ್ಮವನ್ನು ಪ್ರಚಾರ ಮಾಡುವ ಅಗತ್ಯವಿದೆ. ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳು ಬಡವರು, ಅಂಧರು, ಅನಾಥರ ತಂದೆ-ತಾಯಿಯಾಗಿದ್ದರು. ವಟುಗಳನ್ನು ಮಠಕ್ಕೆ ನೀಡುವ ಸಂಕಲ್ಪ ಅವರದ್ದಾಗಿತ್ತು. ದೃಷ್ಟಿ ಯೋಗದ ಮೂಲಕ ಅಂತಃಶುದ್ಧಿ ಮಾಡಿಕೊಂಡು ಆಚಾರ, ನಿಷ್ಠೆಯುಳ್ಳವರಾಗಿ, ಅಹಿಂಸಾ ತತ್ವ ಪ್ರತಿಪಾದಿಸಿದ ಮಹಾತ್ಮ ಎಂದು ಸ್ಮರಿಸಿದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಸಮಾನತೆ, ಸೌಖ್ಯ ಬದುಕಿಗಾಗಿ ಎಲ್ಲರೂ ಹಾತೊರೆಯುತ್ತಾರೆ. ಸಮಾಜಕ್ಕಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳು ಆ ಕಾಲದಲ್ಲಿಯೇ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಸುಸ್ಥಿರ ಅಭಿವೃದ್ಧಿ ಪರ ಕೃಷಿಗೆ ಚಾಲನೆ ನೀಡಿದ್ದರು.

ಆಧುನಿಕ ಕೃಷಿಗೆ ಮುಂದಾಗಿದ್ದರು ಎಂದು ಹೇಳಿದರು. ಬೆಳಗಾವಿಯ ನಿವೃತ್ತ ಉಪನ್ಯಾಸಕಿ ಶರಣೆ ಪ್ರೊ.ಗುರುದೇವಿ ಹುಲೆಪ್ಪನವರಮಠ ಮಾತನಾಡಿ, ಮಹಾತ್ಮರ ಜೀವನಾದರ್ಶಗಳು ಮಾನವನನ್ನು ಮಹಾಮಾನವನನ್ನಾಗಿಸುವ ಶಕ್ತಿ ಹೊಂದಿವೆ. ಅನುಭಾವಿಗಳ ಅನುಭವಾಮೃತಗಳು ನಮ್ಮ ಮಕ್ಕಳಿಗೆ ತಲುಪಬೇಕು. ಕೇಡನ್ನು ಅಹ್ವಾನಿಸದೇ ಬೇಡವಾಗಿರುವುದನ್ನು ಬಿಟ್ಟು ಒಳ್ಳೆಯ ಬದುಕಿಗೆ ಮುಂದಾಗಬೇಕು. ಕ್ರಯಾಶೀಲರನ್ನು ಸದಾ ಟೀಕಿಸುತ್ತಲೇ ಇರುತ್ತಾರೆ. ಇದನ್ನು ಮೀರಿ ಸಮಾಜಕ್ಕೆ ದುಡಿಯುವುದೇ ನಿಜವಾದ ಶಕ್ತಿ ಎಂದರು.

ಹಾವೇರಿ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮಿಗಳು, ಅಕ್ಕಿಆಲೂರು ಚನ್ನವೀರೇಶ್ವರ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು, ಬಿಜಕಲ್‌ನ ಶಿವಲಿಂಗ ಮಹಾಸ್ವಾಮಿಗಳು, ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಮಹಾಸ್ವಾಮಿಗಳು, ಮೂಲೆಗದ್ದೆ ಚನ್ನಬಸವ ಮಹಾಸ್ವಾಮಿಗಳು, ಗುಂಡೂರಿನ ತಿಪ್ಪೇಶ್ವರ ಮಹಾಸ್ವಾಮಿಗಳು, ಶೇಗುಣಸಿಯ ಜಯದೇವ ಶ್ರೀಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಅಗಡಿ ತೋಟದ ಮಾಲಿಕರು ಹಾಗೂ ಕೃಷಿ ತಜ್ಞ ಜಯದೇವ ಅಗಡಿ, ಜಂಪರೂಪ ಆಟಗಾರ್ತಿ ಹುಬ್ಬಳ್ಳಿಯ ಕೃತಿಕಾ ಹತ್ತಿ ಹಾಗೂ ಪ್ರತಿ ವರ್ಷದಂತೆ ಹಾನಗಲ್ಲ ತಾಲೂಕಿನ ನಿವೃತ್ತ ನೌಕರನ್ನು ಗೌರವಿಸಲಾಯಿತು. ಪ್ರೊ. ಎಂ.ಬಿ.ನಾಯಕ್‌ ಸ್ವಾಗಿತಿಸಿ, ಡಾ.ವಿಶ್ವನಾಥ ಬೋಂದಾಡೆ ನಿರೂಪಿಸಿದರು.

ಸಾಮೂಹಿಕ ವಿವಾಹ: ಇದೇ ದಿನ ಬೆಳಿಗ್ಗೆ ಶ್ರೀಮಠದಲ್ಲಿ ಸಾಮೂಹಿಕ ವಿವಾಹಗಳು ನಡೆದವು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳವರ ಭಾವ ಬಿಂಬದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.