ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 21ರಂದು ಪ್ರತಿಭಟನೆ


Team Udayavani, Sep 16, 2019, 11:54 AM IST

hv-tdy-3

ಬ್ಯಾಡಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಿ ಸೆ.21ರಂದು ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆ ಕುರಿತು ರೈತ ಸಂಘದಿಂದ ಪೂರ್ವಭಾವಿ ಸಭೆ ನಡೆಯಿತು.

ಬ್ಯಾಡಗಿ: ಆಣೂರ ಬುಡಪನಹಳ್ಳಿ ಕೆರೆಗಳಿಗೆ ನೀರುತುಂಬಿಸುವ ಯೋಜನೆ ಜಾರಿ, ಬೆಳೆ ವಿಮೆ ವಿತರಣೆ ಸೇರಿದಂತೆ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡುವಂತೆ ಆಗ್ರಹಿಸಿ ಸೆ.21 ರಂದು ಬೃಹತ್‌ ರೈತ ಸಂಘದ ನೇತೃತ್ವದಲ್ಲಿ ಮುಖ್ಯರಸ್ತೆ ಬಂದ್‌ ಮಾಡಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಗಂಗಣ್ಣ ಎಲಿ ಹೇಳಿದರು.

ಪಟ್ಟಣದ ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ನಡೆದ ಪ್ರತಿಭಟನೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 11 ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದರೂ ಅಧಿಕಾರದಲ್ಲಿದ್ದ ಹಲವಾರು ಶಾಸಕರು ಮುಖ್ಯರಸ್ತೆ ಅಗಲೀಕರಣಕ್ಕೆ ಮುಂದಾಗಿಲ್ಲ. ಇದು ನಾಚಿಗೇಡಿನ ಸಂಗತಿ. ಪಟ್ಟಣ ಹಾಗೂ ತಾಲೂಕನ್ನು ಅಭಿವೃದ್ಧಿ ಪಡಿಸುವ ಇಚ್ಛಾಶಕ್ತಿ ಯಾವೊಬ್ಬ ಶಾಸಕರಿಗೂ ಇಲ್ಲದಿರುವುದು ಮತ ಹಾಕಿದ ನಮ್ಮ ಪಾಲಿನ ದುರಂತವೆ ಸರಿ. ಈ ವರೆಗೂ ಶಾಂತಿಯುತ ಹೋರಾಟ ನೋಡಿದ್ದೀರಿ, ಸೆ.21ರಂದು ಮುಖ್ಯರಸ್ತೆ ಬಂದ್‌ ಮಾಡಿ ಅನಿರ್ಧಿಷ್ಠಾವಧಿ ವರೆಗೆ ಉಗ್ರಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಮುಖ್ಯರಸ್ತೆ ಅಗಲೀ ಕರಣ ಮಾಡುವುದಾಗಿ ಭರವಸೆಗಳ ಮಹಾಪೂರವನ್ನೆ ಹರಿಸಿದ್ದು ಬಿಟ್ಟರೆ ಮತ್ಯಾವ ಕೆಲಸವನ್ನೂ ಮಾಡಿಲ್ಲ. ಮುಖ್ಯರಸ್ತೆಗೆ 15 ಕೋಟಿ ರೂ. ಬಿಡುಗಡೆಗೊಳಿಸಿ ಆಡಳಿತಾತ್ಮಕ ಅನುಮೋದನೆ ತರಲು ಸಾಧ್ಯವಾಗದ ಶಾಸಕರು ಆಣೂರ ಹಾಗೂ ಬುಡಪನಹಳ್ಳಿ ಕೆರೆ ತುಂಬಿಸುವ ಯೋಜನೆಗೆ 365 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ತರವುದು ಕನಸಿನ ಮಾತಾಗಿದೆ ಎಂದು ದೂರಿದರು. ಸೆ.21 ರಂದು ನಡೆಯುವ ಪ್ರತಿಭಟನೆಯಲ್ಲಿ ಖುದ್ದು ಶಾಸಕರೆ ಬಂದು ಕಾಮಗಾರಿ ಕುರಿತಂತೆ ವರದಿ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ರಸ್ತೆ ಅಗಲೀಕರಣ ಸಮಿತಿ ಅಧ್ಯಕ್ಷ ಸುರೇಶ ಚಲವಾದಿ ಮಾತನಾಡಿ, ಮುಖ್ಯ ರಸ್ತೆ ಅವ್ಯವಸ್ಥೆಯಿಂದಾಗಿ ವರ್ತಕರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಿದ್ದು, ಪ್ರತಿದಿನ ಹಲವಾರು ತೊಂದರೆ ಅನುಭವಿಸುತ್ತಿದ್ದಾರೆ. ನಿರಂತವಾಗಿ ಹೋರಾಟ ಮಾಡಿದರೂ ನಮ್ಮ ಸಮಸ್ಯೆಗೆ ಯಾರೊಬ್ಬರೂ ಪರಿಹಾರ ಕಲ್ಪಿಸಿಲ್ಲ. ರಾಜ್ಯದ ಹಲವೆಡೆ ಬಿಜೆಪಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಇಗಾಗಲೇ ನೂರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ನಿನ್ನೆಯಷ್ಟೆ ಹೀರೆಕೆರೂರ ಅನರ್ಹ ಶಾಸಕ ಬಿ.ಸಿ.ಪಾಟೀಲ ರಸ್ತೆ ಅಭಿವೃದ್ಧಿಗೆ 26 ಕೋಟಿ ರೂ. ಅನುದಾನ ತಂದಿದ್ದಾರೆ. ಅವರಿಗಿರುವ ಇಚ್ಚಾ ಶಕ್ತಿ ನಮ್ಮ ಶಾಸಕರಿಗೇಕಿಲ್ಲ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.