ಮಕ್ಕಳಲ್ಲಿ ಆಧ್ಯಾತ್ಮಿಕ-ಧಾರ್ಮಿಕತೆ ಜಾಗೃತಿ ಮೂಡಿಸಿ

ಇದು ಕೇವಲ ವಿಶ್ವಕರ್ಮ ಸಮುದಾಯಕ್ಕಲ್ಲದೇ, ಭಾರತೀಯ ಶಿಲ್ಪ ಪರಂಪರೆಗೆ ಮಾಡುತ್ತಿರುವ ಅವಮಾನ

Team Udayavani, Feb 5, 2022, 5:52 PM IST

ಮಕ್ಕಳಲ್ಲಿ ಆಧ್ಯಾತ್ಮಿಕ-ಧಾರ್ಮಿಕತೆ ಜಾಗೃತಿ ಮೂಡಿಸಿ

ಸವಣೂರ: ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಿಂತನೆಯ ಮೇಲೆ ಸಮಾಜವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ವಹಿಸುವ ನಿಟ್ಟಿನಲ್ಲಿ, ಬಾಲ್ಯದಿಂದಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಹಿರಿಯರು ಮಾಡಬೇಕಾದ ಅವಶ್ಯಕತೆಯಿದೆ ಎಂದು ಅರೆ ಮಾದನಹಳ್ಳಿ ಮಹಾ ಸಂಸ್ಥಾನಮಠದ ವಿಶ್ವಕರ್ಮ ಜಗದ್ಗುರು ಪೀಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು.

ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ, ಕಾಳಿಕಾದೇವಿ ಮೂರ್ತಿಯ ಪುನಃ ಪ್ರಾಣ ಪ್ರತಿಷ್ಠಾಪನೆ ಹಾಗೂ ಗೋಪುರದ ಕಳಸಾರೋಹಣ ಕಾರ್ಯಕ್ರಮದ ಪ್ರಯುಕ್ತ ನಡೆದ ಧರ್ಮಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ನಮ್ಮ ಮಕ್ಕಳು ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಯತ್ತ ಮುಖ ಮಾಡುತ್ತಿರುವುದರಿಂದ ಸಮಾಜ ಆತಂಕದ ಸ್ಥಿತಿಯಲ್ಲಿದೆ. ಈ ಕುರಿತು ಮಕ್ಕಳಲ್ಲಿ
ಸಂಸ್ಕಾರವನ್ನು ತುಂಬುವ ಮನಸ್ಸು ತಂದೆ, ತಾಯಂದಿರಲ್ಲಿ ಜಾಗೃಗೊಳ್ಳಬೇಕಿದೆ.

ಜಗತ್ತಿನ ಪ್ರತಿಯೊಬ್ಬ ಮನುಷ್ಯನ ಬದುಕಿಗೆ ಅವಶ್ಯಕವಾಗಿ ಬೇಕಾದ ಪಂಚ ಶಿಲ್ಪಗಳ ಮೂಲಕ ಎಲ್ಲವನ್ನು ನಿರ್ಮಾಣ ಮಾಡಿಕೊಡುವಲ್ಲಿ ಆದಿಯಿಂದ ಇಂದಿನವರೆಗೆ ಸೇವೆ ಸಲ್ಲಿಸಿದ ವಿಶಿಷ್ಟ ಸಮುದಾಯ ಎಂದರೆ ವಿಶ್ವಕರ್ಮ ಸಮುದಾಯವಾಗಿದೆ. ಬೇಲೂರು, ಹಳೆಬೀಡು, ಸೋಮನಾಥಪುರ, ಕೈದಾಳ ಇತ್ಯಾದಿ ಶಿಲ್ಪಗಳ ಕೊಡುಗೆ ಕೊಟ್ಟ ಅಮರಶಿಲ್ಪಿ ಜಕಣಾಚಾರ್ಯರ ಬಗ್ಗೆ ಇತ್ತೀಚಿನ ದಿನಮಾನಗಳಲ್ಲಿ ಕಾಲ್ಪನಿಕ ವ್ಯಕ್ತಿ ಎಂಬ ಹೇಳಿಕೆಗಳು ಕೇಳಿಬರುತ್ತಿರುವುದು
ವಿಷಾದನೀಯವಾಗಿದೆ. ಇದು ಕೇವಲ ವಿಶ್ವಕರ್ಮ ಸಮುದಾಯಕ್ಕಲ್ಲದೇ, ಭಾರತೀಯ ಶಿಲ್ಪ ಪರಂಪರೆಗೆ ಮಾಡುತ್ತಿರುವ ಅವಮಾನವಾಗಿದೆ ಎಂದರು.

ಶಿಲ್ಪಿಗಳು ಕೇವಲ ಒಂದು ಸಮುದಾಯಕ್ಕಾಗಿ ಶಿಲ್ಪಕಲೆಗಳನ್ನು ಮಾಡದೇ, ಜಗತ್ತಿನಲ್ಲಿ ಅತ್ಯಂತ ಸಾಮರಸ್ಯದಿಂದ ಬದುಕುತ್ತಿರುವ ದೇಶವಾದ ಭಾರತದಲ್ಲಿ ಧಾರ್ಮಿಕ ಅನೇಕ ಗುಡಿ, ಗೋಪುರಗಳನ್ನು, ಮಠ, ಮಂದಿರಗಳನ್ನು, ಮಸೀದಿ-ಚರ್ಚ್‌ಗಳನ್ನು, ಜೈನ ತೀರ್ಥಂಕರರ ಮೂರ್ತಿಗಳನ್ನು, ಅಜಂತಾ, ಯಲ್ಲೋರಾಗಳಲ್ಲಿನ ಶಿಲ್ಪಕಲೆಗಳನ್ನು ನೀಡಿದ ಸಮುದಾಯ ವಿಶ್ವಕರ್ಮ ಸಮುದಾಯವಾಗಿದೆ.ಆದರೆ, ಇಂದು ವಿಶ್ವಕರ್ಮ ಸಮುದಾಯ ಜಾಗೃತಗೊಳ್ಳಬೇಕಿದೆ.

ನಮ್ಮ ಮಕ್ಕಳನ್ನು, ಯುವ ಪೀಳಿಗೆಗಳನ್ನು ಜಾಗೈತಗೊಳಿಸಬೇಕಿದೆ. ಧಾರ್ಮಿಕ ತಳಹದಿಯ ಮೇಲೆ ಅವರನ್ನು ನಡೆಸಬೇಕಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಧಾರ್ಮಿಕ ಶಿಕ್ಷಣದ ಸಂಸ್ಕಾರವನ್ನೂ ನೀಡಬೇಕಿದೆ ಎಂದರು. ವಿಶ್ವಕರ್ಮ ಮಹಾಸಂಸ್ಥಾನ ಸಾವಿತ್ರಿಪೀಠ, ಕಾಶೀ ಪೀಠ ವಡ್ನಾಳದ ಅಷ್ಟೋತ್ತರ ಶತ ಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿ, ಶ್ರೀಮದ್‌ ಆನೆಗುಂದಿ ಮಹಾಸಂಸ್ಥಾನ, ಸರಸ್ವತಿ ಪೀಠ ವಿಶ್ವಕರ್ಮ ಏಕದಂಡಿಗೆ ಶಾಡ್ಲಗೇರಿ ಸೂರ್ಯನಾರಾಯಣ ಸ್ವಾಮೀಜಿ, ಹುಲಗೂರಿನ ಮೌನೇಶ್ವರ ಸ್ವಾಮೀಜಿ, ಮುರನಾಳ ಮಳೇರಾಜೇಂದ್ರಮಠದ ಶಿವಾನಂದ ಸ್ವಾಮೀಜಿ ಅವರು ದಿವ್ಯ ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು.

ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಈಶ್ವರ ಅರ್ಕಸಾಲಿ ಧರ್ಮ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದನ್ವಯ ವಿವಿಧ ರೂಪದಲ್ಲಿ ದಾನ ನೀಡಿದ ಮಹನೀಯರನ್ನು ಶ್ರೀ ಕಾಳಿಕಾದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗಣೇಶಪ್ಪ ಕಮ್ಮಾರ ತಾಲೂಕು ಅಧ್ಯಕ್ಷ ಪೂರ್ವಾಚಾರಿ ಬಡಿಗೇರ, ಡಾ.ಪದ್ಮಾವತಿ ಪತ್ತಾರ, ಮಹೇಂದ್ರ ಬಡಿಗೇರ, ಹನುಮಂತಗೌಡ ಮುದಿಗೌಡ್ರ, ಕು.ಸಮರ್ಥ ಮಹೇಶ ಪ್ರಸಾದ, ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಜೆ. ಮುಲ್ಲಾ, ಮುಖಂಡ ರಮಾಕಾಂತ ಶೆಂಡಗೆ ಸೇರಿದಂತೆ
ಸಮಾಜ ಬಾಂಧವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.