ನಗರಸಭೆ ಪ್ರೌಢಶಾಲೆಯಿಂದ ಸಾಧಕರ ಕೊಡುಗೆ 


Team Udayavani, Oct 28, 2018, 4:15 PM IST

28-october-22.gif

ರಾಣಿಬೆನ್ನೂರ: ಅಧಿಕಾರ, ಅಂತಸ್ತು ಶಾಶ್ವತವಲ್ಲ, ನಮ್ಮ ಜೀವಿತಾವಧಿಯಲ್ಲಿ ಮಾಡುವ ಪುಣ್ಯಕಾರ್ಯಗಳು ಮಾತ್ರ ಶಾಶ್ವತ. ನಾವು ಬರುವಾಗ ಏನನ್ನೂ ತಂದಿಲ್ಲ, ಹೋಗುವಾಗ ಸಹ ಏನನ್ನೂ ಒಯ್ಯುವುದಿಲ್ಲ. ಬದಲಾಗಿ ನಮ್ಮ ಸೇವೆಗಳು ಶಾಶ್ವತವಾಗಿ ಉಳಿಯುತ್ತವೆ ಎಂದು ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ ಹೇಳಿದರು. ನಗರಸಭಾ ಪ್ರೌಢಶಾಲಾ ಸಭಾಂಗಣದಲ್ಲಿ ಶನಿವಾರ ನಗರಸಭಾ ಪ್ರೌಢಶಾಲೆಯ ಹಿತರಕ್ಷಣಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ನಗರಸಭೆ ನೂತನ ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

1985ರಲ್ಲಿ ಸ್ಥಾಪನೆಯಾದ ನಗರಸಭೆಯ ಪ್ರೌಢಶಾಲೆ ಈಗಾಗಲೇ ಸಮಾಜಕ್ಕೆ ಸಾವಿರಾರು ಸಮರ್ಥ ವಿದ್ಯಾವಂತರನ್ನು ಕೊಡುಗೆಯಾಗಿ ನೀಡಿದೆ.ಅಂಥವರಲ್ಲಿ ಅನೇಕರು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆಫ್ರಿಕಾದ ಸಂವಿಧಾನ ರಚಿಸಿದ ಎಲ್‌. ಜಿ.ಹಾವನೂರು ಸಹ ಈ ಶಾಲೆಯ ವಿದ್ಯಾರ್ಥಿ ಎಂಬುದು ಹೆಮ್ಮೆಯ ಸಂಗತಿ ಎಂದರು. ಅಲ್ಲದೇ ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಸೇರಿದಂತೆ ಹಲವಾರು ಮಹನೀಯರು ಈ ಶಾಲೆಯ ವಿದ್ಯಾರ್ಥಿಗಳಾಗಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ವಿಜ್ಞಾನ, ತಂತ್ರಜ್ಞಾನಗಳಲ್ಲಿ ತಮ್ಮದೇ ಆದಛಾಪು ಮೂಡಿಸಿದ್ದಾರೆ ಎಂದರು.

ಇಂತಹ ಇತಿಹಾಸವುಳ್ಳ ಶಾಲೆಯು ಮುಚ್ಚುವ ಹಂತ ತಲುಪಿತ್ತು. ನಗರದ ಪ್ರಜ್ಞಾವಂತರು ಹಾಗೂ ಶಾಲೆಯ ಹಳೇ ವಿದ್ಯಾರ್ಥಿಗಳು ಒಗ್ಗೂಡಿ ವಿಧಾನಸಭಾ ಮಾಜಿ ಅಧ್ಯಕ್ಷರ ಸಮ್ಮುಖದಲ್ಲಿ ಪ್ರೌಢ ಶಾಲಾ ಹಿತರಕ್ಷಣಾ ಸಮಿತಿಯ ಮೂಲಕ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ನಗರಸಭಾ ಸದಸ್ಯರೆಲ್ಲರೂ ಪಕ್ಷ ಭೇದ ಮರೆತು ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಗೊಂಡ 35 ನಗರಸಭಾ ಸದಸ್ಯರನ್ನು ನಗರಸಭಾ ಪ್ರೌಢ ಶಾಲಾ ಹಿತರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಪುಟ್ಟಪ್ಪ ಮರಿಯಮ್ಮನವರ, ಗಂಗಮ್ಮ ಹಾವನೂರ, ಪ್ರಭಾವತಿ ತಿಳುವಳ್ಳಿ, ಚಂಪಾ ಬಿಸಲಳ್ಳಿ, ಪ್ರಕಾಶ ಪೂಜಾರ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಹಿತರಕ್ಷಣಾ ಸಮಿತಿ ಅಧ್ಯಕ್ಷ ಈಶ್ವರ ಹಾವನೂರ, ಡಾ| ಬಸವರಾಜ ಕೇಲಗಾರ, ಜೆ.ಎಂ.ಮಠದ, ನಿವೃತ್ತ ಪ್ರಧಾನ ಗುರು ಎಸ್‌.ಜಿ.ಹಿರೇಮಠ, ಪೌರಾಯುಕ್ತ ಡಾ| ಎನ್‌.ಮಹಾಂತೇಶ, ಸಮಿತಿಯ ಕಾರ್ಯದರ್ಶಿ ವಿ.ವಿ. ಹರಪನಹಳ್ಳಿ, ಅಮರನಾಥ ಭೂತೆ, ಆರ್‌.ಬಿ.ಪಾಟೀಲ, ಪ್ರಭುಸ್ವಾಮಿ ಕರ್ಜಗಿಮಠ, ಹನುಮಂತಪ್ಪ ಹೆದ್ದೇರಿ, ರಮೇಶ ಬಿಸಲಳ್ಳಿ ಸೇರಿದಂತೆ ಮತ್ತಿತರರು ಇದ್ದರು. ನಿಂಗಪ್ಪ ವಿಭೂತಿ ಪ್ರಾರ್ಥಿಸಿದರು. ಶಿಕ್ಷಕ ಎಂ.ಎಸ್‌.ಮಳೇಮಠ ಸ್ವಾಗತಿಸಿದರು. ಆರ್‌.ಬಿ.ಪಾಟೀಲ ನಿರೂಪಿಸಿದರು. ಎಂ.ಎಂ.ಅಕ್ಕಿ ವಂದಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.