![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 10, 2020, 6:38 AM IST
ಹಿರೇಕೆರೂರ: ಇಲ್ಲಿನ ವಾಲ್ಮೀಕಿ ಭವನದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರನ್ನು ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು.
ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಪಟ್ಟಣದಲ್ಲಿ ವಾಲ್ಮೀಕಿ ಭವನ ಕಟ್ಟಡ ಮೊದಲ ಹಂತದ ರೂ 1 ಕೋಟಿ ವೆಚ್ಚದಲ್ಲಿ ಕಾಮಗಾರಿ ಮುಗಿದಿದ್ದು, ಈಗ ಮತ್ತೆ ರೂ. 1 ಕೋಟಿ ಮಂಜೂರಾಗಿದೆ. ಇದಕ್ಕೆ ಇನ್ನೂ ರೂ. 1.50 ಕೋಟಿ ಹೆಚ್ಚಿನ ಅನುದಾನ ನೀಡಿ ರೂ. 3.50 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿಯೇ ಮಾದರಿ ವಾಲ್ಮೀಕಿ ಭವನ ನಿರ್ಮಿಸಲು ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಸಹಮತ ಸೂಚಿಸಿದ್ದಾರೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಜಿ.ಎಚ್. ತಳವಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎನ್.ಎಂ. ಈಟೇರ, ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ವೈ.ಪಿ. ಜಿಗಳೂರ, ಕಾರ್ಯದರ್ಶಿ ಪಿ.ಎಸ್. ಸಾಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಹುಲ್ಯಾಳ, ರಟ್ಟಿàಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ತಳವಾರ, ಲಕ್ಷ್ಮಣ ನಾಯ್ಕರ್, ಹನುಮಂತಪ್ಪ ಮೇಗಳಮನಿ, ಆರ್.ಎಫ್.ಹುಲ್ಲತ್ತಿ, ರಮೇಶ ಚಿಕ್ಕೇರೂರ, ಲಿಂಗರಾಜ ನಾಯ್ಕರ್ ಜಿ.ಎಚ್.ಅಗಸಿಬಾಗಿಲ, ಐ.ಬಿ. ಕಡೇಮನಿ, ಜಿ.ಕೆ. ಸುಳಗನ್ನಿ, ಜಗದೀಶ ಗೋಣಗೇರಿ ಇತರರು ಹಾಜರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.