ಪರಿಶಿಷ್ಟ ಪಂಗಡಕ್ಟೆ ಮೀಸಲಾತಿ ಹೆಚ್ಚಿಸಲು ಮನವಿ


Team Udayavani, Jan 12, 2020, 2:42 PM IST

hv-tdy-2

ಹಾವೇರಿ: ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶೈಕ್ಷಣಿಕ, ಆರ್ಥಿಕವಾಗಿ ಶೇ.7.5ರಷ್ಟು ಮೀಸಲಾತಿ ನೀಡಬೇಕು ಎಂದು ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ನ್ಯಾಯಮೂರ್ತಿ ಎಚ್‌.ಎನ್‌. ಮೋಹನ್‌ದಾಸ್‌ ಆಯೋಗದ ಸಭೆಯಲ್ಲಿ ಮನವಿ ಸಲ್ಲಿಸಿತು.

ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಿಂದ ಜಿಲ್ಲಾ ಹಾಗೂ ತಾಲೂಕಿನ ವಾಲ್ಮೀಕಿ ನಾಯಕ ಮಹಾಸಭಾದ ಪದಾಧಿಕಾರಿಗಳು ಭಾಗವಹಿಸಿ ಆಯೋಗಕ್ಕೆ ಮನವಿ ನೀಡಿದರು.

ರಾಜಕೀಯದಲ್ಲಿ ಸಮುದಾಯಕ್ಕೆ ಶೇ. 7.5ರಷ್ಟು ಮೀಸಲಾತಿ ಸಿಕ್ಕಿದೆ. ಅದೇ ರೀತಿಯಲ್ಲಿ ಶಿಕ್ಷಣ-ಉದ್ಯೋಗದಲ್ಲಿ ಹಾಗೂ ಆರ್ಥಿಕ ಮೀಸಲಾತಿ ನೀಡಬೇಕು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವಿಕೆಯನ್ನು ಆಧರಿಸಿ ಜನಗಣತಿಯಾಗಿದ್ದು, ವಿವಿಧ ವರ್ಗಗಳ ಜನಸಂಖ್ಯೆಯ ಅಂಕಿ ಅಂಶಗಳನ್ನು ಕ್ರೋಢೀಕರಿಸುವಕೆಲಸ ಆಗಿದ್ದರೂ ಅದು ಸರಕಾರದಾದ ಮಟ್ಟದಲ್ಲಿ ಇನ್ನು ಪ್ರಕಟಗೊಂಡಿಲ್ಲ. ಇದರಿಂದ ಪರಿಶಿಷ್ಟ ಪಂಗಡಗಳ ಇಂದಿನ ವಾಸ್ತವಿಕ ಜನಸಂಖ್ಯೆ ಅ ಧಿಕೃತ ಮಾಹಿತಿ ಲಭ್ಯ ಇಲ್ಲ. ಈ ನಡುವಿನ ಅವಧಿ ಯಲ್ಲಿ ಅನೇಕ ಜಾತಿ, ಉಪಜಾತಿಗಳನ್ನು ಈಗಾಗಲೇ ಪರಿಶಿಷ್ಟ ಪಂಗಡದಲ್ಲಿರುವ ಜಾತಿಗಳಿಗೆ ಸಮಾನಾಂತರವೆಂದು ಪರಿಗಣಿಸಿ ಪರಿಶಿಷ್ಟ ಪಂಗಡಗಳ ಸೇರ್ಪಡೆ ಮಾಡಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದಲ್ಲಿ ಜಾತಿ, ಉಪಜಾತಿಗಳೆಲ್ಲಾ ಸೇರಿ ಒಟ್ಟು 106 ಇದ್ದು, 50 ಗುಂಪುಗಳಾಗಿ ವಿಂಗಡಿಸಲಾಗಿವೆ. ಈ ಎಲ್ಲ ಜಾತಿ ಉಪಜಾತಿಗಳು ಬೇರೆ ಬೇರೆ ವರ್ಗಗಳಿಂದ ಪರಿಶಿಷ್ಟ ಪಂಗಡಕ್ಕೆ ವರ್ಗಾಯಿಸಲ್ಪಟ್ಟಿದ್ದರೂ ಅವುಗಳ ಮೀಸಲಾತಿ ಪ್ರಮಾಣ ಮಾತ್ರ ಅವುಗಳೊಂದಿಗೆ ವರ್ಗಾವಣೆಯಾಗಿಲ್ಲ. ರಾಜ್ಯದಲ್ಲಿ ಪರಿಶಿಷ್ಟಪಂಗಡಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಅತೀ ಹಿಂದುಳಿದಿರುತ್ತವೆ. ಪರಿಶಿಷ್ಟ ಪಂಗಡದ ಮೀಸಲಾತಿ ಸುಮಾರು 60 ವರ್ಷಗಳಿಂದ ಶೇ. 3ರಷ್ಟು ಇದೆ. ಜನಸಂಖ್ಯೆಗನುಗುಣವಾಗಿ ಈಗ ಮೀಸಲಾತಿ ಶೇ. 3ರಷ್ಟು ಶೇ.7.5ಕ್ಕೆ ಏರಿಕೆಯಾಗಬೇಕಾಗಿದೆ. ಈ ಲೋಪದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸರ್ಕಾರ, ಸರ್ಕಾರೇತರ ಶಾಲಾ ಕಾಲೇಜುಗಳಲ್ಲಿ ಪ್ರವೇಶದಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ, ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ ಸೌಲಭ್ಯ ವೃತ್ತಿ ಶಿಕ್ಷಣಗಳಾದ ಡಿಇಡಿ, ಬಿಇಡಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್‌, ಮೆಡಿಕಲ್‌, ನರ್ಸಿಂಗ್‌, ಎಂಫಿಲ್‌, ಪಿಎಚ್‌ಡಿ ಹಾಗೂ ಅನೇಕ ತರಬೇತಿ ಕಾರ್ಯಕ್ರಮಗಳಲ್ಲಿ ಪ್ರವೇಶಾವಕಾಶ ದೊರೆತಿಲ್ಲ ಎಂದು ಮನವಿಯಲ್ಲಿ ಉಲ್ಲೇಖೀಸಿದ್ದಾರೆ.

ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಮೀಸಲಾತಿ ಪಡೆಯದೇ ಪರಿಶಿಷ್ಟ ಪಂಗಡದ ಜನರು ಸಂವಿಧಾನಬದ್ಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದರಿಂದ ಪರಿಶಿಷ್ಟ ಪಂಗಡದ ಜನರನ್ನು ಮೀಸಲಾತಿ ಮೂಲಕ ಅಭಿವೃದ್ಧಿಪಡಿಸಿ ಮುಖ್ಯವಾಹಿನಿಗೆ ತರಬೇಕೆಂದಿರುವ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾಗಿದೆ.

ಈ ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಂವಿಧಾನದಲ್ಲಿ ಕಲ್ಪಿಸಿರುವ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಒದಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮನವಿ ಮಾಡಿಕೊಂಡರು. ಮನವಿ ಸಲ್ಲಿಕೆ ವೇಳೆ ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಮುಖಂಡರಾದ ಪ್ರಕಾಶ ಹಾದಿಮನಿ, ಶ್ರೀಧರ

ದೊಡ್ಡಮನಿ, ಸಣ್ಣತಮ್ಮಪ್ಪ ಬಾರ್ಕಿ, ಮಂಜುಳಾ ಕರಬಸಮ್ಮನವರ, ಶೇಖರ ಕರಬಸಮ್ಮನವರ,ಬಸವರಾಜಪ್ಪ ಭೀಮನಾಯ್ಕರ, ಹನುಮಂತಪ್ಪ ಯಮಕ್ಕನವರ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.