ಪಡಿತರ ಅಕ್ಕಿ-ಬೇಳೆ ಪರಿಶೀಲನೆ
Team Udayavani, Apr 30, 2020, 6:24 PM IST
ಹಾವೇರಿ: ಪಡಿತರ ಅಕ್ಕಿ ಹಾಗೂ ತೊಗರಿ ಬೇಳೆ ದಾಸ್ತಾನು ಮಾಡಿರುವ ನಗರದ ಗೋದಾಮುಗಳಿಗೆ ಬುಧವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಪಡಿತರದಾರರಿಗೆ ಆಹಾರ ಸಾಮಗ್ರಿಗಳ ವಿತರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಅಕ್ಕಿ ಮತ್ತು ತೊಗರಿಬೇಳೆ ಗುಣಮಟ್ಟ ಕುರಿತಂತೆ ಖುದ್ದಾಗಿ ಪರಿಶೀಲಿಸಲು ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಆಹಾರ ಇಲಾಖೆ ಪಡಿತರ ದಾಸ್ತಾನಿಗಾಗಿ ಪ್ರತ್ಯೇಕ ಗೋದಾಮು ನಿರ್ಮಾಣದ ಅವಶ್ಯಕತೆ ಇದ್ದು, ಕನಿಷ್ಠ ಐದಾರು ಎಕರೆ ಭೂಮಿಯನ್ನು ಗುರುತಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಶಾಸಕ ನೆಹರು ಓಲೇಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಸಚಿವ ಜಮೀರ್ ಅಹ್ಮದ್ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ
Basavaraj Bommai: ನಮಗೆ ಕಾಂಗ್ರೆಸ್ ನೇರ ಎದುರಾಳಿ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ
By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ: ಎಚ್ ಕೆ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.