Savanur: ಮನೆಯವರು ಟ್ರಿಪ್ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ
Team Udayavani, Oct 14, 2024, 10:45 PM IST
ಸವಣೂರು: ಮನೆಗೆ ಬೀಗ ಹಾಕಿ ಮನೆಮಂದಿ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ-ನಗದು ಕಳವು ಮಾಡಿರುವ ಘಟನೆ ಸವಣೂರಿನಲ್ಲಿ ನಡೆದಿದೆ.
ಕಡಬ ತಾಲೂಕಿನ ಸವಣೂರು ನಿವಾಸಿ ಸಲೀಂ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸಕ್ಕೆ ತೆರಳಿದ್ದರು. ಅವರು ರವಿವಾರ ರಾತ್ರಿ ಪ್ರವಾಸದಿಂದ ಮರಳಿ ಬಂದಾಗ ಮನೆಯ ಬೀಗ ಮುರಿದು ಕಳವು ನಡೆಸಿರುವುದು ಬೆಳಕಿಗೆ ಬಂದಿದೆ. ಕಪಾಟಿನಲ್ಲಿದ್ದ ಅಂದಾಜು 2.12 ಲಕ್ಷ ರೂ. ಮೌಲ್ಯದ 53 ಗ್ರಾಂ ಚಿನ್ನದ ಆಭರಣಗಳು, 4,000 ಮೌಲ್ಯದ ಟ್ಯಾಬ್, 15,000 ರೂ. ಮೌಲ್ಯದ ಒಂದು ಟಿಸೋಟ್ ವಾಚ್ ಹಾಗೂ 30,000 ರೂ. ಹಣ ಕಳವಾಗಿದೆ ಎಂದು ಸಲೀಂ ಅವರು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.