ಗ್ರಂಥಾಲಯ-ಮ್ಯೂಸಿಯಂ ಸ್ಥಾಪನೆಗೆ ಕ್ರಮ ವಹಿಸಿ

ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

Team Udayavani, Mar 21, 2022, 4:53 PM IST

20

ಹಾವೇರಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ವಿ.ಕೃ. ಗೋಕಾಕ ನೆನಪಿನಲ್ಲಿ ಸವಣೂರಲ್ಲಿ ನಿರ್ಮಿಸಿರುವ ಡಾ| ವಿ.ಕೃ. ಗೋಕಾಕ ಸ್ಮಾರಕ ಭವನದಲ್ಲಿ ನಿರಂತರ ಕಾರ್ಯಚಟುವಟಿಕೆ ನಡೆಸುವಂತಾಗಬೇಕು. ಸುಸಜ್ಜಿತ ಗ್ರಂಥಾಲಯ ಹಾಗೂ ವಿ.ಕೃ. ಗೋಕಾಕ ಅವರಿಗೆ ಸಂಬಂಧಿಸಿದ ವಸ್ತುಗಳು ಹಾಗೂ ಛಾಯಾಚಿತ್ರಗಳನ್ನು ಒಳಗೊಂಡ ಮ್ಯೂಸಿಯಂ ಸ್ಥಾಪನೆ ಕುರಿತಂತೆ ಶೀಘ್ರ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

ಗೋಕಾಕ ಸಭಾಂಗಣದ ಆವರಣದಲ್ಲಿ ಸ್ವತ್ಛತೆ ಹಾಗೂ ಮುಂಭಾಗದಲ್ಲಿ ಕಾರಂಜಿ ನಿರ್ಮಾಣ ಕುರಿತಂತೆ ತ್ವರಿತವಾಗಿ ನೀಲನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಟ್ರಸ್ಟ್‌ ಸದಸ್ಯ ಕಾರ್ಯದರ್ಶಿಗೆ ಸೂಚಿಸಿದರು.

ಡಾ| ವಿ.ಕೃ. ಗೋಕಾಕ ವಸ್ತು ಸಂಗ್ರಾಲಯ ಹಾಗೂ ಗ್ರಂಥಾಲಯಕ್ಕೆ ಗೋಕಾಕರ ಮಗ ತಮ್ಮಲ್ಲಿ ಸಂಗ್ರಹವಿರುವ ವಸ್ತುಗಳು ಹಾಗೂ ಪುಸ್ತಕಗಳನ್ನು ನೀಡಲು ಮುಂದೆ ಬಂದಿದ್ದಾರೆ. ಗ್ರಂಥಾಲಯಕ್ಕೆ ಅಗತ್ಯ ಪೀಠೊಪಕರಣಗಳ ಖರೀದಿ ಹಾಗೂ ಸಭಾಭವನದಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಶೀಘ್ರದಲ್ಲೇ ಕಾರ್ಯ ಚಟುವಟಿಕೆ ಆರಂಭಿಸುವ ಕುರಿತಂತೆ ಕ್ರಮ ವಹಿಸಬೇಕು. ಏಪ್ರಿಲ್‌ ಮೊದಲ ವಾರದಲ್ಲಿ ಸವಣೂರಿನ ಗೋಕಾಕ ಸಭಾಂಗಣದಲ್ಲಿ ಟ್ರಸ್ಟ್‌ ಸಭೆ ಕರೆದು ಅಂತಿಮಗೊಳಿಸುವಂತೆ ಸೂಚನೆ ನೀಡಿದರು.

ನೀಲನಕ್ಷೆ: ನಾಡೋಜ ಡಾ| ಪಾಟೀಲ ಪುಟ್ಟಪ್ಪನವರ ಸಮಾಧಿ  ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಕುರಿತಂತೆ ತ್ವರಿತವಾಗಿ ಜಮೀನಿನ ನೋಂದಣಿ ಹಾಗೂ ಸ್ಮಾರಕದ ನೀಲನಕ್ಷೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಟ್ರಸ್ಟ್‌ನ ಸದಸ್ಯರಾದ ಡಾ| ರಮಾಕಾಂತ ಜೋಶಿ, ಜಿ.ಎಂ. ಹೆಗಡೆ, ಸತೀಶ ಕುಲಕರ್ಣಿ ಮಾತನಾಡಿ, ಆ.9ರಂದು ಗೋಕಾಕರ ಜನ್ಮ ದಿನ ಧಾರವಾಡದಲ್ಲಿ ಆಯೋಜಿಸಬೇಕು. ಸವಣೂರಿನಲ್ಲಿ ನಿರ್ಮಾಣ ಮಾಡಿರುವ ಡಾ| ವಿ.ಕೃ. ಗೋಕಾಕ ಸಭಾಂಗಣಕ್ಕೆ ಜ್ಞಾನಪೀಠ ಪುರಸ್ಕೃತ ಡಾ| ವಿ.ಕೃ. ಗೋಕಾಕ ಭವನ ಎಂದು ನಾಮಕರಣ ಮಾಡಬೇಕು. ಗೋಕಾಕರ ಭವನದಲ್ಲಿ ವಸ್ತು ಸಂಗ್ರಹಾಲಯ ಅಭಿವೃದ್ಧಿ, ಗ್ರಂಥಾಲಯ ಸ್ಥಾಪನೆ, ಗೋಕಾಕರ ಚಿತ್ರಸಂಪುಟ ಸಾರ್ವಜನಿಕ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಶ್ರದ್ಧಾಂಜಲಿ: ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸದಸ್ಯರಾಗಿದ್ದ ನಾಡೋಜ ಡಾ| ಪಾಟೀಲ ಪುಟ್ಟಪ್ಪ, ಎಂ.ಪಿ.ಪಾಟೀಲ, ಚನ್ನವೀರ ಕಣವಿ ಅಗಲಿಕೆಗೆ ಸಭೆಯ ಆರಂಭದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್‌ ರೋಷನ್‌, ಸವಣೂರು ಉಪ ವಿಭಾಗಾಧಿ ಕಾರಿ ಅನ್ನಪೂರ್ಣ ಮುದಕಮ್ಮನವರ, ಸವಣೂರು ಪುರಸಭೆ ಅಧ್ಯಕ್ಷೆ ಶೈಲಾ ಎಚ್‌. ಮುದೇನಗೌಡರ, ಡಿವೈಎಸ್ಪಿ ಶಂಕರ ಮಾರಿಹಾಳ, ಟ್ರಸ್ಟ್‌ನ ಸದಸ್ಯರಾದ ಮೈಲಾರಪ್ಪ ತಳ್ಳಿಹಳ್ಳಿ, ಮಂಜುಳಾ ರಾಶೀನಕರ, ಚಂದ್ರಗೌಡ ಪಾಟೀಲ, ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಶಶಿಕಲಾ ಹುಡೇದ ಇದ್ದರು.

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haveri

ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.