ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಜೀವನದಲ್ಲಿ ಉತ್ತಮ ನಡುವಳಿಕೆ ಅಳವಡಿಸಿಕೊಳ್ಳಬೇಕು
Team Udayavani, Sep 16, 2024, 1:10 PM IST
■ ಉದಯವಾಣಿ ಸಮಾಚಾರ
ಹಾವೇರಿ: ಜೀವನದಲ್ಲಿ ಹಣ, ಸಂಪತ್ತು ಗಳಿಸಿದರೆ ಅದು ನಮ್ಮ ಜೊತೆಗೆ ಬರುವುದಿಲ್ಲ. ನಮ್ಮ ಜೊತೆಗೆ ಬರುವುದು ವಿದ್ಯೆ, ದಾನ, ಧರ್ಮ, ನಮ್ಮ ಸಂಸ್ಕೃತಿ ಮಾತ್ರ. ಆದ್ದರಿಂದ ಸಂಪತ್ತಿಗೆ ಮರುಳಾಗದೇ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಕಲಿಸಿ ಎಂದು ಅಂಬಿಗರ ಚೌಡಯ್ಯನವರ ಪೀಠದ ಶಾಂತಬೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು.
ಸ್ಥಳೀಯ ನೀಲನಗೌಡ್ರ ಬಡಾವಣೆಯಲ್ಲಿ ರವಿವಾರ ತಾಲೂಕಿನ ಗಂಗಾಮತ ಸಮಾಜ ನೌಕರರ ಸಂಘದ ವತಿಯಿಂದ ನಿರ್ಮಿಸಿದ
ಗಂಗಾಪರಮೇಶ್ವರಿ, ಗಣಪತಿ ಹಾಗೂ ಬನ್ನಿ ಮಹಾಂಕಾಳಿ ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದರು.
ದೇವರುಗಳಲ್ಲಿ ಭಕ್ತಿ ಭಾವದಿಂದ ಗುರುಹಿರಿಯರಲ್ಲಿ ಗೌರವದಿಂದ ಸಮಾಜದಲ್ಲಿ ಉತ್ತಮ ಸೇವಕನಂತೆ ನಾವು ಜೀವನದಲ್ಲಿ ಉತ್ತಮ ನಡುವಳಿಕೆ ಅಳವಡಿಸಿಕೊಳ್ಳಬೇಕು ಎಂದರು.
ಪ್ರಾಣ ಪ್ರತಿಷ್ಠಾಪನೆಗೂ ಹಿಂದಿನ ದಿನ ಮಹಿಳೆಯರ ಪೂರ್ಣಕುಂಭ ಮೇಳ, ಡೊಳ್ಳು ಕುಣಿತ, ಭಜನೆ ಮೂಲಕ ಮೂರ್ತಿಗಳ ಮೆರವಣಿಗೆ ನಡೆಯಿತು. ರವಿವಾರ ಬೆಳಗ್ಗೆ ಪ್ರತಿಷ್ಠಾಪನೆ ವೇಳೆ ಹೋಮ, ಹವನ ಪೂಜೆ ನೆರವೇರಿಸಲಾಯಿತು.
ನಂತರ ಕರ್ಜಗಿ ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹಾಗೂ ನರಸೀಪುರ ಶಾಂತಬೀಷ್ಮ ಚೌಡಯ್ಯ ಸ್ವಾಮೀಜಿ ಪ್ರಾಣ ಪ್ರತಿಷ್ಠಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಸಂಜಯ ಸುಣಗಾರ,ಶಂಕರ್ ಸುತಾರ, ನಾಗಪ್ಪ ಶೇಷಗಿರಿ, ಆರ್.ಎನ್. ಕರ್ಜಗಿ, ಎಚ್.ಎಫ್. ದಂಡಿನ, ಮನೋಹರ ಬಾರ್ಕಿ, ಎಂ.ಬಿ. ಅಂಬಿಗೇರ, ಬಾಬು ಸುಣಗಾರ, ನಾಗರಾಜ, ಮಂಜುನಾಥ ಬೋವಿ, ನಾಗರಾಜ ನಡುವಿನಮಠ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
ಗಣೇಶೋತ್ಸವ ಹಿಂದೂ ಧರ್ಮದ ಜಾಗೃತಿಯ ಸಂಕೇತ-ಸ್ವಾಮಿ ಪ್ರಕಾಶಾನಂದಜಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.