ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ


Team Udayavani, May 14, 2024, 6:04 PM IST

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

■ ಉದಯವಾಣಿ ಸಮಾಚಾರ
ಹಾವೇರಿ: ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿಂದ ಉಸಿರಿರುವವರೆಗೂ ಹೆಸರು
ಬರುವ ವಿದ್ಯೆ ಬರುತ್ತದೆ. ಜೀವಗಳಿಗೆ ಜೀವನ ನೀಡುವ ಏಕೈಕ ವೃತ್ತಿ ಅದು ಶಿಕ್ಷಕ ವೃತ್ತಿ, ಅದರಷ್ಟು ಪವಿತ್ರವಾದ ವೃತ್ತಿ ಇನ್ನೊಂದಿಲ್ಲ ಎಂದು ಶ್ರೀಕ್ಷೇತ್ರ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿ ಹೇಳಿದರು.

ತಾಲೂಕಿನ ಅಗಡಿ ಗ್ರಾಮದ ಶ್ರೀಶೇಷಾಚಲ ಸದ್ಗುರು ಪ್ರೌಢಶಾಲೆ ಆವರಣದ ಗಳಗನಾಥ ವೇದಿಕೆಯಲ್ಲಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ 1993ರಿಂದ 2003ನೇ ಸಾಲಿನಲ್ಲಿ  ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿ ಹುಟ್ಟಿದ ಮೇಲೆ ಹೆತ್ತವರ, ಶಿಕ್ಷಕರ ಹಾಗೂ ಸಮಾಜದ ಋಣ ತೀರಿಸಬೇಕು. ಅಕ್ಟೋಬರ್‌ ಅವಧಿಯಲ್ಲಿ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜೂನ್‌ ಎರಡನೇ ವಾರ ಈ ಶಾಲೆಯಲ್ಲಿ ಕಲಿತ ಎಲ್ಲ ವಿದ್ಯಾರ್ಥಿಗಳ ಸಭೆ ಕರೆಯಲಾಗುವುದು ಎಂದರು.

ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ಮನುಷ್ಯರಾಗಿ ಹುಟ್ಟುವುದೇ ಭಾಗ್ಯ, ಶಿಕ್ಷಕರಾದರೆ ಅದು ಸೌಭಾಗ್ಯ. ಅರ್ಜಿ ಸಲ್ಲಿಸಿ ಪಡೆಯುವ ಯಾವುದೇ ಪ್ರಶಸ್ತಿಗಿಂತ ವಿದ್ಯಾರ್ಥಿಗಳು ನೀಡಿದ ಗುರುವಂದನೆ ಎಲ್ಲದಕ್ಕೂ ಮಿಗಿಲು. ವಿದ್ಯಾರ್ಥಿಗಳ ಯಶಸ್ಸು ಶಿಕ್ಷಕ ವೃತ್ತಿಯ ಸಾರ್ಥಕತೆ ಪಡೆಯಲು ಕಾರಣ. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಗಳನ್ನು ವಿದ್ಯಾರ್ಥಿಗಳಿಗೆ ದಾಟಿಸುವ ಸಂಸ್ಕೃತಿಯ ಪರಿವರ್ತನೆಯ ನೇತಾರರಾಗಬೇಕು ಎಂದರು.

ಮುಖ್ಯೋಪಾಧ್ಯಾಯ ರಾಘವೇಂದ್ರ ನಾಡಿಗೇರ, ವಿ.ವಿ. ಕಮತರ, ಎಸ್‌.ಎಸ್‌. ಲೂತಿಮಠ ಹಾಗೂ ಸುಮಂಗಲ ಗಾಣಿಗೇರ
ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳ ಪರವಾಗಿ ಕೆ.ಎಸ್‌. ಮಂಜುನಾಥ ಮಾತನಾಡಿ, ನಾನಿಂದು ದಾವಣಗೆರೆಯಲ್ಲಿ ಶಿಕ್ಷಕ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಈ ನನ್ನ ಶಾಲೆ ಪ್ರೇರಣೆಯಾಯಿತು.

40 ಜನ ಶಿಕ್ಷಕರು, 300ಕ್ಕೂ ಅಧಿಕ ವಿದ್ಯಾರ್ಥಿಗಳು ನನ್ನ ಶಾಲೆಯಲ್ಲಿದ್ದಾರೆ ಎಂದು ತಿಳಿಸಿ, ಸುವರ್ಣಮೋತ್ಸವ ಕಾರ್ಯಕ್ರಮಕ್ಕೆ ಒಂದು ಲಕ್ಷ ರೂ. ನೀಡುವುದಾಗಿ ಘೋಷಿಸಿದರು. ರಾಘವೇಂದ್ರ ಈಳಿಗೇರ, ಚಂದ್ರು ಈಳಿಗೇರ, ಶಿವಪ್ಪ ಡಂಬರಮತ್ತೂರ, ವಿರೂಪಾಕ್ಷಿ ಹೆಡಿಗೊಂಡ, ಭರಮಪ್ಪ ಅಗದಿಬಾಗಿಲ, ಮೆಹರುನ್ನೀಸಾ ಬಾಗಲಕೋಟಿ, ಮಧುಮತಿ ಅಗಸನಮಟ್ಟಿ, ಅನ್ನಪೂರ್ಣ ಸಣ್ಣಪ್ಪನವರ, ಶೈಲಜಾ ಕೋರಿಶೆಟ್ಟರ್‌ ತಮ್ಮ ಅನಿಸಿಕೆ ಹಂಚಿಕೊಂಡರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದ ವಿಕಾಸ ಭಕ್ಷಿ, ಲಕ್ಷ್ಮೀ ಡಂಬರಮತ್ತೂರ, ಜಗದೀಶ ಬಡಿಗೇರ, ಕೃತಿಕಾ ಕೋತಂಬರಿ, ಪ್ರತಿಮಾ ಶಿವಣ್ಣನವರ ವಿದ್ಯಾರ್ಥಿಗಳನ್ನು ಸ್ಫೂರ್ತಿ ಕುಟೀರದಿಂದ ಗೌರವಿಸಲಾಯಿತು. ಪೂರ್ಣಿಮಾ ಆನ್ವೇರಿ, ಮಂಜುಳಾ ಮಾಳದಕರ, ಅನ್ನಪೂರ್ಣ ಪ್ರಾರ್ಥಿಸಿದರು. ದೀಪಾ ಜಂಗಲಿ ಸ್ವಾಗತಿಸಿದರು. ದಿಳ್ಳೆಪ್ಪ ಕುರುಬರ ಪ್ರಾಸ್ತಾವಿಕ ಮಾತನಾಡಿದರು. ತ್ರಿವೇಣಿ ಬಸೇಗೆಣ್ಣಿ, ರಾಮಾ ಚಕ್ರವರ್ತಿ ನಿರೂಪಿಸಿದರು. ಪ್ರಾರಂಭದಲ್ಲಿ ಸ್ವಾಮೀಜಿ
ಅವರೊಂದಿಗೆ ಎಲ್ಲ ಗುರುಗಳನ್ನು ಸಕಲ ವಾದ್ಯಗಳೊಂದಿಗೆ ವೇದಿಕೆಗೆ ಕರೆತಂದದ್ದು  ಗಮನಸೆಳೆಯಿತು.

ವಿಶ್ವತಾಯಂದಿರ ದಿನದಂದು ಗುರುವಂದನೆ ಕಾರ್ಯಕ್ರಮ ಏರ್ಪಡಿಸಿದ್ದು ಅರ್ಥಪೂರ್ಣವಾಗಿದೆ. ಮೊದಲ ಗುರು ತಾಯಿ ಆದರೆ ಎರಡನೇ ಗುರು ಶಿಕ್ಷಕರು, ಪ್ರಪಂಚದ ಭವಿಷ್ಯ ತಾಯಂದಿರು ಹಾಗೂ ಶಿಕ್ಷಕರನ್ನು ಅವಲಂಬಿಸಿದೆ. ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಹೊಣೆಗಾರಿಕೆ ಅವರ ಮೇಲಿದೆ.
*ನಿಜಲಿಂಗಪ್ಪ ಬಸೇಗಣ್ಣಿ, ಶಿಕ್ಷಣ ಚಿಂತಕರು

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.