ದಂಪತಿ ಬಾಳು ಬೆಳಗಿದ ಅಗರಬತ್ತಿ

20 ವರ್ಷದಿಂದ ಅಗರಬತ್ತಿ ತಯಾರಿಸುವ ಕಾಯಕ

Team Udayavani, May 17, 2019, 5:13 PM IST

haveri-tdy-5..

ಅಗರಬತ್ತಿ ತಯಾರಿಕೆಯಲ್ಲಿ ಚನ್ನೇಶಶಾಸ್ತ್ರಿ ಮಠದ.

ಹಿರೇಕೆರೂರ: ಕುಂಬಾರ ಓಣಿ ನಿವಾಸಿಯಾದ ಚನ್ನೇಶಶಾಸ್ತ್ರಿ-ಜಯಮ್ಮ ಮಠದ ದಂಪತಿ ಕಳೆದ 20 ವರ್ಷಗಳಿಂದ ಅಗರಬತ್ತಿ ತಯಾರಿಸುವ ಕಾಯಕದಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಓಂ ಅಗರಬತ್ತಿ ಹೆಸರಿನಲ್ಲಿ ಇವರು ತಯಾರಿಸುವ ಅಗರಬತ್ತಿಗಳು ಹಿರೇಕೆರೂರ, ಚಿಕ್ಕೇರೂರು ಮಾರುಕಟ್ಟೆ ಸೇರಿದಂತೆ ತಾಲೂಕಿನಲ್ಲಿ ಸುವಾಸನೆ ಬೀರುತ್ತಿವೆ.

ಮೊದಲು ಅಗರಬತ್ತಿ ತಯಾರಿಸಲು ಅಕ್ಕಪಕ್ಕದ ಮನೆಗಳ ಆಯ್ದ ಮಹಿಳೆಯರಿಗೆ ಕಚ್ಚಾವಸ್ತುಗಳನ್ನು ನೀಡಿ ಅವರಿಗೆ ಕೂಲಿಯನ್ನು ಕೊಟ್ಟು ಅಗರಬತ್ತಿ ತಯಾರು ಮಾಡಿಸುತ್ತಿದ್ದರು. ಅವುಗಳನ್ನು ಪಟ್ಟಣದಲ್ಲಿ ನಡೆಯುವ ವಾರದ ಸಂತೆ ಹಾಗೂ ಚಿಕ್ಕೇರೂರು ಗ್ರಾಮದಲ್ಲಿ ನಡೆಯುವ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು.

ಉತ್ತಮ ಗುಣಮಟ್ಟದ ಅಗರಬತ್ತಿ ಆಗಿರುವುದರಿಂದ ಹಾಗೂ ಕಡಿಮೆ ಬೆಲೆಯಲ್ಲಿ ಹೆಚ್ಚು ದೊರೆಯುವುದರಿಂದ ಗ್ರಾಹಕರನ್ನು ಸೆಳೆಯಲು ಸಾಧ್ಯವಾಯಿತು. ಕೆಜಿ ಲೆಕ್ಕದಲ್ಲಿ ಅಗರಬತ್ತಿ ಮಾರಾಟ ಆರಂಭಿಸಿದ ಮೊದಲಿಗ ನಾನು. ಅಂಗಡಿಗಳಿಗೆ ಮಾರಾಟ ಮಾಡದೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಕಡಿಮೆ ಬೆಲೆಯಲ್ಲಿ ಅಗರಬತ್ತಿ ಗ್ರಾಹಕರಿಗೆ ಸಿಗುವಂತಾಯಿತು. ಈಗ ನಮಗೆ ಕಾಯಂ ಗ್ರಾಹಕರು ಇದ್ದಾರೆ ಎಂದು ಚನ್ನೇಶಶಾಸ್ತ್ರಿ ಹೇಳುತ್ತಾರೆ.

ಜಾಗತೀಕರಣದ ಪರಿಣಾಮ ಮಾರುಕಟ್ಟೆಯಲ್ಲಿ ನಡೆಯುವ ಸ್ಪರ್ಧೆಯಿಂದ ಒಂದಿಷ್ಟು ವ್ಯಾಪಾರ ಕುಂಠಿತಗೊಂಡಿದೆ. ಕಾರ್ಮಿಕರ ಕೊರತೆ ಸಹ ಕಾಡುತ್ತಿದೆ ಎನ್ನುವುದು ಅವರ ಅಭಿಪ್ರಾಯ. ಬದಲಾವಣೆಗೆ ಹೊದಿಕೊಳ್ಳಬೇಕೆಂಬ ಮನೋಭಾವದಿಂದ 3 ವರ್ಷಗಳ ಹಿಂದೆ ಸುಮಾರು 2.50 ಲಕ್ಷ ರೂ. ತೊಡಗಿಸಿ 2 ಅಗರಬತ್ತಿ ತಯಾರಿಸುವ ಯಂತ್ರಗಳನ್ನು ಖರೀದಿಸಿದ್ದಾರೆ. ಪರಿಣಾಮವಾಗಿ ಕಾರ್ಮಿಕರ ಅವಲಂಬನೆ ಇಲ್ಲದೇ ಪತ್ನಿ ಜಯಮ್ಮನ ಜೊತೆಗೆ ಸೇರಿಕೊಂಡು ಇಬ್ಬರೇ ಅಗರಬತ್ತಿ ತಯಾರಿಸುವ ಕಾಯಕವನ್ನು ಮುಂದುವರೆಸಿದ್ದಾರೆ. ಯಂತ್ರದ ಮೂಲಕ ತಯಾರಿಸುವ ಅಗರಬತ್ತಿಗಳು ಕೈಯಿಂದ ತಯಾರಿಸಿದ ಅಗರಬತ್ತಿಗಳಿಗಿಂತ ದಪ್ಪ ಇರುತ್ತವೆ. ಕಾರ್ಮಿಕರ ಕೊರತೆಯಿಂದ ಅನಿವಾರ್ಯವಾಗಿ ಯಂತ್ರಗಳಿಗೆ ಹೊಂದಿಕೊಳ್ಳಬೇಕಾಯಿತು ಎನ್ನುತ್ತಾರೆ ಚನ್ನೇಶಶಾಸ್ತ್ರಿ.

ಕಚ್ಚಾ ವಸ್ತುಗಳನ್ನು ಸಗಟು ಖರೀದಿ ಮೂಲಕ ಬೆಂಗಳೂರಿನಿಂದ ಖರೀದಿಸಿ ತರುವ ಇವರು 5 ಬಗೆಯ ಸುವಾಸನೆಯುಳ್ಳ ಅಗರಬತ್ತಿ ತಯಾರಿಸುತ್ತಾರೆ. ಓಂ ಅಗರಬತ್ತಿ ಹೆಸರಿನಲ್ಲಿ ಇವರು ತಯಾರಿಸುವ ಅಗರಬತ್ತಿಗಳು ತಾಲೂಕಿನಲ್ಲಿ ಸುವಾಸನೆ ಬೀರುತ್ತಿವೆ.

.ಸಿದ್ಧಲಿಂಗಯ್ಯ ಗೌಡರ್‌

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.