ಮಾರುಕಟ್ಟೆಯಲ್ಲಿ ಹಣ್ಣುಗಳ ರಾಜನದ್ದೇ ದರ್ಬಾರ್‌


Team Udayavani, May 9, 2019, 1:50 PM IST

hav-1

ಹಾವೇರಿ: ಹಣ್ಣುಗಳ ರಾಜ ಎನಿಸಿದ ಮಾವಿನ ಹಣ್ಣು ಭರಪೂರ ಪ್ರಮಾಣದಲ್ಲಿ ಮಾರುಕಟ್ಟೆಗೆ ಆಗಮಿಸಿದ್ದು, ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಮಾವುಗಳದ್ದೇ ದರ್ಬಾರ್‌ ಜೋರಾಗಿದೆ.

ಆಪೂಸ್‌, ಕಲ್ಮಿ, ಸಿಂಧೂರ, ಮಲ್ಲಿಕಾ ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬಂದಿದ್ದು, ಪ್ರಸಕ್ತ ವರ್ಷ ಮಾವಿನ ಇಳುವರಿ ಕುಂಠಿತಗೊಂಡಿದ್ದರಿಂದ ದರದಲ್ಲಿ ಏರಿಕೆ ಕಂಡು ಬಂದಿದೆ. ಮಳೆಯ ಕೊರತೆ, ವಿವಿಧ ರೋಗಬಾಧೆ, ಅಕಾಲಿಕ ಮಳೆ ಪರಿಣಾಮ ನಿರೀಕ್ಷಿತ ಮಟ್ಟದಲ್ಲಿ ಮಾವು ಬೆಳೆ ಬರದೆ ಇರುವುದೇ ಇಳುವರಿ ಕುಸಿತಕ್ಕೆ ಕಾರಣವಾಗಿದೆ.

ನಗರದ ಮಾರುಕಟ್ಟೆಗೆ ವಿವಿಧ ತಳಿಗಳ ಮಾವು ಬಂದಿವೆ. ಹಾಗನಲ್ಲ, ಆನವಟ್ಟಿ, ಹುಬ್ಬಳ್ಳಿ, ದಾವಣಗೆರೆ, ಹರಿಹರ ಸೇರಿದಂತೆ ವಿವಿಧ ಕಡೆಗಳಿಂದ ವ್ಯಾಪಾರಸ್ಥರು ಹಣ್ಣುಗಳನ್ನು ಖರೀದಿ ಮಾರಾಟ ಮಾಡುತ್ತಿದ್ದು, ಸ್ಥಳೀಯ ಬಸ್‌ ನಿಲ್ದಾಣ, ಹಳೇ ಕೋರ್ಟ್‌ ಸರ್ಕಲ್, ಕಾಗಿನಲೆ ಕ್ರಾಸ್‌, ಹಾನಗಲ್ ರಸ್ತೆ, ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಾವಿನ ಹಣ್ಣುಗಳು ಗ್ರಾಹಕರನ್ನು ತನ್ನತ್ತ ಕೈ ಬಿಸಿ ಕರೆಯುತ್ತಿವೆ.

ವೈವಿಧ್ಯ ತಳಿಗಳು: ನಗರದ ಮಾರುಕಟ್ಟೆಗೆ ವಿವಿಧ ತಳಿಯ ಮಾವಿನ ಹಣ್ಣುಗಳ ಆಗಮನವಾಗಿದ್ದು, ಮಾರುಕಟ್ಟೆಯನ್ನು ಆವರಿಸಿಕೊಂಡಿದೆ. ಆಪೂಸ್‌, ಕಲ್ಮಿ, ರಸಪೂರಿ, ಮಲ್ಲಿಕಾ, ಸಿಂಧೂರ, ತೋತಾಪುರಿ ತಳಿಗಳ ಮಾವು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿವೆ. ಸದ್ಯ ಮಾರುಕಟ್ಟೆಯಲ್ಲಿ ಕೆಜಿ ಹಣ್ಣಿಗೆ 80-100 ರೂ., ಒಂದು ಡಜನ್‌ ಹಣ್ಣಿಗೆ 250-350 ರೂ., ಮಾರಾಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಭಾಗಗಳಿಂದ ಮಾವು ಅಧಿಕ ಪ್ರಮಾಣದಲ್ಲಿ ಬಂದರೆ ದರ ಇಳಿಯುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಸುಮಾರು 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಹಾನಗಲ್ಲ, ಶಿಗ್ಗಾವಿ ತಾಲೂಕುಗಳಲ್ಲೇ ಸುಮಾರು 3 ಸಾವಿರ ಹೆಕ್ಟೇರ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಯಲಾಗುತ್ತಿದೆ. ಭರಪೂರ ಮಾವು ಬೆಳೆ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಬೆಳೆಗಾರರು ಕಳೆದ ಕೆಲ ದಿನಗಳ ಹಿಂದೆ ಸುರಿದ ಆಲಿಕಲ್ಲು ಮಳೆ, ಗಾಳಿಯಿಂದ ಮಾವು ನೆಲ ಕಚ್ಚಿದ್ದು ಸಂಕಷ್ಟ ಎದುರಿಸುವಂತಾಗಿದೆ. ಪ್ರಸಕ್ತ ವರ್ಷ ಸುಮಾರು 1 ಲಕ್ಷ‌ 20 ಸಾವಿರ ಟನ್‌ ಮಾವು ಉತ್ಪಾದನೆಯಾಗುವ ನಿರೀಕ್ಷೆ ಹೊಂದಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ಶೇ.25ರಷ್ಟು ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಸಕ್ತ ವರ್ಷ ಒಂದು ತಿಂಗಳು ತಡವಾಗಿ ಮಾವಿನ ಹಣ್ಣು ಮಾರುಕಟ್ಟೆಗೆ ಬಂದಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಹಣ್ಣಿನ ಇಳುವರಿ ಕುಸಿದಿದ್ದು ದರ ಏರಿಕೆಗೆ ಕಾರಣವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಹಣ್ಣಿಗೆ ಬೇಡಿಕೆ ಇದೆ.
•ಮಾಬೂಲಿ ದೇವಗಿರಿ, ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.