ಕೈಗಾರಿಕಾಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಜಿಲ್ಲೆ

•600 ಎಕರೆ ಭೂಮಿ ಮೀಸಲಿಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ: ಶೆಟ್ಟಿ

Team Udayavani, May 22, 2019, 1:11 PM IST

haveri-tdy-3..

ಹಾವೇರಿ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಸುಧಾಕರ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ಕೈಗಾರಿಕಾ ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿ 600 ಎಕರೆ ಭೂಮಿ ಮೀಸಲಿಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಸುಧಾಕರ ಶೆಟ್ಟಿ ತಿಳಿಸಿದರು.

ಮಂಗಳವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ತಾಲೂಕಿನ ಕೊಳೂರು ಬಳಿ ಈಗಾಗಲೇ 400 ಎಕರೆ ಜಮೀನು ಗುರುತಿಸಲಾಗಿದ್ದು, ಅದು ಸರ್ಕಾರದಿಂದ ಮಂಜೂರಾಗಬೇಕಿದೆ. ಜತೆಗೆ ಇನ್ನೂ 200 ಎಕರೆ ಭೂಮಿ ಗುರುತಿಸಿ ಕೈಗಾರಿಕೆಗಳಿಗೆ ನೀಡಬೇಕು ಎಂದರು.

ಹಾವೇರಿ ಕೈಗಾರಿಕಾಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಜಿಲ್ಲೆಯಾಗಿದ್ದು, ಸರ್ಕಾರ ಇಲ್ಲಿ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡಿ ಸಾಕಷ್ಟು ಅನುದಾನ ನೀಡಿ ಯೋಜನೆಗಳನ್ನು ರೂಪಿಸಬೇಕು. ಈಗಾಗಲೇ ಸಾಕಷ್ಟು ಯೋಜನೆಗಳಿವೆ. ಆದರೆ, ಆ ಯೋಜನೆಗಳ ಬಗ್ಗೆ ಸರಿಯಾದ ಪ್ರಚಾರ ಆಗುತ್ತಿಲ್ಲ. ಹೀಗಾಗಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಲ್ಲಿ ಜಿಲ್ಲೆ ಹಿಂದುಳಿದೆ ಎಂದರು.

ಜಿಲ್ಲೆಯಲ್ಲಿ ಮಾನವ ಶಕ್ತಿ, ಉತ್ತಮ ಸಂಪರ್ಕ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಸಾಕಷ್ಟು ಇದೆ. ಆದರೆ, ಸೌಕರ್ಯ ಇದೆ ಎಂಬುದನ್ನು ಹೊರಜಗತ್ತಿಗೆ ಪರಿಚಯಿಸುವ ಕಾರ್ಯವೂ ಆಗಿಲ್ಲ. ಇದರಿಂದಾಗಿ ಕೈಗಾರಿಕೆ ಸ್ಥಾಪಿಸಲು ಹೊರಗಿನಿಂದ ಉದ್ಯಮಿಗಳು ಸಹ ಬರುತ್ತಿಲ್ಲ ಎಂದರು.

ಹೊಸಬರಿಗೆ ಆದ್ಯತೆ ನೀಡಲಿ: ಬ್ಯಾಂಕ್‌ಗಳು ಹಳೆ ಉದ್ಯಮಿಗಳಿಗೆ ಸಾಲ ಕೊಡಲು ತೋರುವ ಆಸಕ್ತಿ ಹೊಸ ಉದ್ಯಮಿಗಳಿಗೆ ತೋರುತ್ತಿಲ್ಲ. ಬ್ಯಾಂಕ್‌ ಅಧಿಕಾರಿಗಳ ತಾರತಮ್ಯ ಮನೋಭಾವ ಬದಲಾಗಬೇಕು. ಹೊಸ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಆಗಬೇಕು. ಕೃಷಿ, ಪ್ರವಾಸೋದ್ಯಮ ಪೂರಕ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶಗಳಿದ್ದರೂ ಕೈಗಾರಿಕೆ ಸ್ಥಾಪಿಸಲು ಯಾರೂ ಮುಂದೆ ಬರುತ್ತಿಲ್ಲ. ಪದವೀಧರರು ಉದ್ಯೋಗ ಅರಸಿ ದೊಡ್ಡ ದೊಡ್ಡ ನಗರಗಳಿಗೆ ಹೋಗುತ್ತಿದ್ದಾರೆ. ಯುವಕರು ಉದ್ಯೋಗಕ್ಕಿಂತ ಉದ್ಯಮಿಯಾಗಲು ಮುಂದೆ ಬರಬೇಕು ಎಂದ ಅವರು, ಹೊಸ ಉದ್ಯಮಿಗಳಿಗೆ ಕೈಗಾರಿಕಾ ಘಟಕದ ಯೋಜನೆ, ಸಾಲ ಇನ್ನಿತರ ಸಲಹೆ ಮಾರ್ಗದರ್ಶನ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸದಾಸಿದ್ಧ ಎಂದರು.

ಪ್ರಸ್ತಾವನೆ: ಮಂಗಳವಾರ ಬೆಳಗ್ಗೆ ನಡೆದ ಕಾರ್ಯಾಗಾರದಲ್ಲಿ ಸರಕು ಸೇವಾ ತೆರಿಗೆ, ಕೃಷಿ ಉತ್ಪನ್ನ ಮಾರುಕಟ್ಟೆ, ಬ್ಯಾಂಕಿಂಗ್‌ ಮತ್ತು ಹಣಕಾಸು, ಕೈಗಾರಿಕೆ ಕುರಿತ ನಾಲ್ಕು ಗೋಷ್ಠಿಗಳು ನಡೆದವು. ಕಾರ್ಯಾಗಾರದಲ್ಲಿ ವ್ಯಾಪಾರ ಪರವಾನಗಿ ನವೀಕರಣ ಅವಧಿ ವಿಸ್ತರಣೆಯಾಗಬೇಕು. ಎಪಿಎಂಸಿ 0.5 ತೆರಿಗೆ ರದ್ದುಪಡಿಸಬೇಕು. ಅನವಶ್ಯಕ ಹಾಗೂ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಇಂಬು ನೀಡುವ ಎಪಿಎಂಸಿ 35-ಬಿ (35-ಎ ಇದರಲ್ಲಿ ತೆರಿಗೆ ಸೇರಿದಂತೆ ಇತರ ಎಲ್ಲ ದೃಢೀಕರಣ ಮಾಡಿದ್ದರೂ 35-ಬಿಯಲ್ಲಿ ಎಪಿಎಂಸಿ ಕಾರ್ಯದರ್ಶಿ ಸಹಿ ಹಾಕಿಸುವುದು) ರದ್ದು ಮಾಡಬೇಕು. ಜಿಎಸ್‌ಟಿ ಅನುಷ್ಠಾನದಲ್ಲಿರುವ ನೆಟ್ವರ್ಕ್‌ ಸಮಸ್ಯೆ ಸರಿಪಡಿಸಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರಗಳಿಗೆ ಕಳುಹಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದರು.

ಸ್ಥಿರ ಸರ್ಕಾರ ಬೇಕು: ಸರ್ಕಾರದ ಅಸ್ಥಿರತೆ ಎಲ್ಲ ರಂಗದಲ್ಲಿಯೂ ಪರಿಣಾಮ ಬೀರುತ್ತದೆ. ಅಂತೆಯೇ ಕೈಗಾರಿಕೆ, ವಾಣಿಜ್ಯ ರಂಗದ ಮೇಲೆಯೂ ಬೀಳುತ್ತದೆ. ಸರ್ಕಾರ ಯಾವಾಗ ಏನಾಗುತ್ತೋ ಎಂಬ ಭಾವನೆಯಿಂದ ಅಧಿಕಾರಿ ವರ್ಗ ತಟಸ್ಥವಾಗುತ್ತದೆ. ಅಧಿಕಾರಿ ವರ್ಗ ತಟಸ್ಥವಾದರೆ ಯೋಜನೆ, ಕಾರ್ಯಕ್ರಮ ಎಲ್ಲವೂ ಕುಂಠಿತಗೊಳ್ಳುತ್ತವೆ.

ಹೀಗಾಗಿ ಸರ್ಕಾರದಲ್ಲಿ ಸ್ಥಿರತೆ ಇರಬೇಕು. ಆಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಜಿಲ್ಲಾ ಘಟಕದ ಪ್ರಮುಖರಾದ ಸಿ.ಆರ್‌. ಜನಾರ್ದನ, ಎಂ.ಸುಂದರ, ಎನ್‌. ಯಶವಂತರಾಜ, ಆರ್‌.ಎಸ್‌. ಮಾಗನೂರ, ಪಿ.ಡಿ. ಶಿರೂರ, ಜಿ.ವಿ. ಹಿರೇಗೌಡ್ರ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.