ವಸತಿ ನಿಲಯ ಸಮಸ್ಯೆ ಪರಿಹಾರಕ್ಕೆ ಭರವಸೆ


Team Udayavani, Nov 8, 2019, 1:12 PM IST

hv-tdy-2

ಹಾವೇರಿ: ರಾಜ್ಯದಲ್ಲಿ ವಸತಿ ನಿಲಯಗಳಿಗೆ ಅಗತ್ಯವಿರುವ ನಿವೇಶನಗಳ ಸಮಸ್ಯೆ ನಿವಾರಣೆ ಹಾಗೂ ಮಂಜೂರಾತಿ ಕುರಿತಂತೆ ಶೀಘ್ರವೇ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ನಿವಾರಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಹಾವೇರಿ ಜಿಲ್ಲೆ ಒಳಗೊಂಡಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಗಳು ಖಾಸಗಿ ಕಟ್ಟದಲ್ಲಿ ನಡೆಯಬಾರದು. ಖಾಸಗಿ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯಗಳು ನಡೆದರೆ ಮೂಲ ಸೌಕರ್ಯ ಕಲ್ಪಿಸಲು ಕಷ್ಟಸಾಧ್ಯ. ಎಲ್ಲ ವಸತಿ ನಿಲಯಗಳು ಸರ್ಕಾರಿ ಕಟ್ಟಡಗಳಲ್ಲೇ ನಡೆಯಬೇಕು. ಈ ನಿಟ್ಟಿನಲ್ಲಿ ನಿವೇಶನ ಇಲ್ಲದ ವಸತಿ ನಿಲಯಗಳಿಗೆ ನಿವೇಶ ಕಲ್ಪಿಸುವ ಕುರಿತಂತೆ ಜಿಲ್ಲಾಧಿಕಾರಿಗಳು ಆದ್ಯತೆ ಗಮನಹರಿಸಬೇಕು. ಕಟ್ಟಡ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ ಕೋಟ್ಯಾಂತರ ರೂ. ಅನುದಾನ ಒದಗಿಸಲಾಗಿದೆ. ಆದರೆ, ಬಹಳಷ್ಟು ಕಡೆ ನಿವೇಶನ ಸಿಗದೆ ಭವನಗಳು ನಿರ್ಮಾಣವಾಗಿಲ್ಲ. ಅನುದಾನ ಕೊಳೆಯುತ್ತಿದೆ. ನಿವೇಶನ ಸಿಗದೆ ಕಟ್ಟಡ ಆರಂಭಿಸಿದ ಇಂತಹ ಭವನಗಳಿಗೆ ಬಿಡುಗಡೆಯಾದ ಅನುದಾನವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಇದ್ದರೆ ಪಟ್ಟಿ ಮಾಡಿ ಸಲ್ಲಿಸಿ ಅಥವಾ ಜಿಲ್ಲೆಯಲ್ಲಿ ಬೇರೆಡೆ ಸ್ಥಳಾಂತರಿಸಿ ಪ್ರಸ್ತಾವನೆ ಸಲ್ಲಿಸಿದರೆ ಮಂಜೂರಾತಿ ನೀಡುವುದಾಗಿ ತಿಳಿಸಿದರು.

ರಾಜ್ಯ ವಲಯದಲ್ಲಿ ಜಿಲ್ಲಾ ಪಂಚಾಯತ್‌ ಅಧೀನ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನ ಹೆಚ್ಚುವರಿ ಆಗಿದ್ದರೆ ಖರ್ಚು ಮಾಡುವ ಇಲಾಖೆಗೆ ಮರು ಹೊಂದಾಣಿಕೆ ಮಾಡಿಕೊಳ್ಳಿ. ಈ ಕುರಿತು ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದರೆ ಅನುಮೋದನೆ ನೀಡಲಾಗುವುದು ಎಂದರು. ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆ ಮಾಡದ ಸ್ವತ್ಛತೆ, ಮೂಲಸೌಕರ್ಯ ಕಲ್ಪಿಸಲು ವಿಫಲವಾದ ಕಾವಲುಗಾರರು, ತಾಲೂಕು ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ಅಂತಹ ಅಧಿಕಾರಿಗಳನ್ನು ಹೊರಹಾಕಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾಧಿಕಾರಿ ಇತರ ಇಲಾಖಾ ಅಧಿಕಾರಿಗಳು ತಮ್ಮ ಜಿಲ್ಲಾ ಪ್ರವಾಸ ವೇಳೆಯಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ಮಾಡಿ ಕಡ್ಡಾಯವಾಗಿ ಊಟ ಮಾಡಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ನಿಲಯಗಳ ಎಸ್‌ಎಸ್‌ ಎಲ್‌ಸಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮವಹಿಸಿ, ಇಂಗ್ಲಿಷ್‌, ವಿಜ್ಞಾನ, ಗಣಿತ ವಿಷಯಗಳ ವಿಶೇಷ ಬೋಧನೆಗೆ ನಿವೃತ್ತ ಶಿಕ್ಷಕರ ನೇಮಕಕ್ಕೆ ಸಲಹೆ ನೀಡಿದರು. ಪರಿಶಿಷ್ಟ ವರ್ಗದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಗಣಕಯಂತ್ರ, ನರ್ಸಿಂಗ್‌, ಪ್ಯಾರಾಮೆಡಿಕಲ್‌, ಪ್ರಿಂಟಿಂಗ್‌ ನಂತಹ ಕೌಶಲ್ಯಾಧಾರಿತ ತರಬೇತಿಗೆ ಸೂಕ್ತ ವ್ಯವಸ್ಥೆ ಮಾಡಿ ತರಬೇತಿಗೆ ಬೇಕಾದ ಅಗತ್ಯ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ಪದವಿ ಶಿಕ್ಷಣ ಮುಂದುವರಿಸಿದ್ದಾರಾ ಎಂಬುದನ್ನು ಸರ್ವೇಮಾಡಿ. ನಗರದಲ್ಲಿ ವಸತಿ ಸಮಸ್ಯೆ, ಆರ್ಥಿಕ ಸಮಸ್ಯೆಯಿಂದ ಶಿಕ್ಷಣ ಮೊಟಕುಗೊಳಿಸಿದ್ದಾರಾ ಎಂಬುದನ್ನು ಪರಿಶೀಲಿಸಿ ಕಾರಣ ಸಹಿತ ವರದಿ ಸಲ್ಲಿಸಿ. ಈ ಮಕ್ಕಳು ಶಿಕ್ಷಣ ಮುಂದುವರಿಸಲು ಬೇಕಾದ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಇತರ ಸೌಕರ್ಯ ಒದಗಿಸಲು ಇಲಾಖೆಯಿಂದಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ಬಹುಪಯೋಗಿ ಕಟ್ಟಡ, ದೇವಾಲಯಗಳು, ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪುನರ್‌ ನಿರ್ಮಾಣದಂತಹ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳ ಕಲ್ಯಾಣ ಕಾರ್ಯಕ್ರಮಳ ಪ್ರಗತಿಯನ್ನು ಪರಿಶೀಲಿಸಿದರು. ಪ್ರಸಕ್ತ ಆರ್ಥಿಕ ವರ್ಷದ ಐದು ತಿಂಗಳು ಮಾತ್ರ ಬಾಕಿ ಇದೆ. ಬಿಡುಗಡೆಯಾದ ಅನುದಾನವನ್ನು ಕಡ್ಡಾಯವಾಗಿ ಖರ್ಚುಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ರಮೇಶ ದೇಸಾಯಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಭಾರ ಅಧಿ ಕಾರಿ ರಾಜು ಕೂಲೇರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.