![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 11, 2024, 9:59 PM IST
ಹಾವೇರಿ:ಟೆಂಡರ್ದಾರನೊಬ್ಬ ಲಂಚ ಕೊಡುವ ಆಮಿಷವೊಡ್ಡುತ್ತಿದ್ದಾನೆ ಎಂದು ಸರ್ಕಾರಿ ಅಧಿಕಾರಿಯೇ ದೂರು ನೀಡಿ, ಟೆಂಡರ್ದಾರನನ್ನು ಲೋಕಾಯುಕ್ತ ಬಲೆಗೆ ಬೀಳಿಸಿದ ಅಪರೂಪದ ಪ್ರಕರಣ ನಗರದಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಗುತ್ತಲದ ಗುರುಕೃಪಾ ಎಂಟರ್ಪ್ರೈಸಸ್ ಮಾಲೀಕ ಶರಣಪ್ಪ ಸಿದ್ದಪ್ಪ ಶೆಟ್ಟರ್ ಬಂಧಿತ ಟೆಂಡರ್ದಾರ. ಇವರ ವಿರುದ್ಧ ಹಾವೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭರತ್ ಹೆಗಡೆ ದೂರು ಕೊಟ್ಟಿದ್ದರು.
ಹಾವೇರಿ ತಾಲೂಕು ಪಂಚಾಯಿತಿಯಿಂದ ಸಾಮಗ್ರಿ ಪೂರೈಕೆಗಾಗಿ ಕರೆದ ಟೆಂಡರ್ನಲ್ಲಿ ಶರಣಪ್ಪ ಅವರು ಈ ಟೆಂಡರ್ ನನಗೇ ಸಿಗುವಂತೆ ಮಾಡಿದ್ದಲ್ಲಿ ಟೆಂಡರ್ ಮೊತ್ತದ ಶೇ. 20ರಷ್ಟು ಹಣವನ್ನು ನಿಮಗೆ ಕೊಡುತ್ತೇನೆ ಎಂದು ಒತ್ತಾಯಿಸಿ, ಲಂಚ ತೆಗೆದುಕೊಳ್ಳುವಂತೆ ಆಮಿಷ ಒಡ್ಡಿದ್ದರು ಎಂದು ತಾಪಂ ಇಒ ಭರತ್ ಹೆಗಡೆ ಲೋಕಾಯುಕ್ತರಿಗೆ ದೂರು ನೀಡಿದ್ದರು.
2 ಲಕ್ಷ ರೂ., ಮುಂಗಡವಾಗಿ ನೀಡಲು ಭರವಸೆ ನೀಡಿ, ನಗರದ ಖಾಸಗಿ ಹೋಟೆಲ್ನಲ್ಲಿ 90 ಸಾವಿರ ರೂ.,ಲಂಚ ಕೊಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸರ್ಕಾರಿ ಅಧಿಕಾರಿ ಲಂಚ ಮುಟ್ಟದೆ, ಲಂಚ ಕೊಡುವವನನ್ನೇ ಹಿಡಿದುಕೊಟ್ಟಿದ್ದು, ಲೋಕಾಯುಕ್ತ ಪ್ರಕರಣಗಳಲ್ಲಿಯೇ ವಿರಳ ಘಟನೆ ಎನಿಸಿದೆ. ಇದನ್ನು ರಿವರ್ಸ್ ಟ್ರ್ಯಾಪ್ ಎನ್ನುತ್ತೇವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ಬಿ.ಪಿ. ತಿಳಿಸಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.