ಮಾಡಬಾರದ್ದೆಲ್ಲಾ ಮಾಡಿ ದೇಗುಲಕ್ಕೆ ಹೋಗುವ ಆಸ್ತಿಕ ಮನಸ್ಥಿತಿ ಒಪ್ಪಲು ಸಾಧ್ಯವಿಲ್ಲ: ಸಿಎಂ

ಸತ್ಯ ಹೇಳಿದರೆ ಕೋಪಗೊಂಡವರು ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ

Team Udayavani, Jan 15, 2024, 8:46 PM IST

ಮಾಡಬಾರದ್ದೆಲ್ಲಾ ಮಾಡಿ ದೇಗುಲಕ್ಕೆ ಹೋಗುವ ಆಸ್ತಿಕ ಮನಸ್ಥಿತಿ ಒಪ್ಪಲು ಸಾಧ್ಯವಿಲ್ಲ: ಸಿಎಂ

ಬ್ಯಾಡಗಿ(ಗುರು ಸಿದ್ಧರಾಮೇಶ್ವರ ವೇದಿಕೆ): ಮಾಡಬಾರದ್ದನ್ನೆಲ್ಲಾ ಮಾಡಿ ದೇವಸ್ಥಾನಕ್ಕೆ ಹೋಗುವ ಆಸ್ತಿಕ ಮನಸ್ಥಿತಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಣೆಬರಹದಿಂದ ಯಾರೂ ಬಡವ-ಶ್ರೀಮಂತರಾಗಿಲ್ಲ. ಮೇಲು-ಕೀಳು ರಹಿತ ಸಮ ಸಮಾಜ ನಿರ್ಮಾಣಕ್ಕೆ ವಚನಗಳ ಮೂಲಕ ವೈಜ್ಞಾನಿಕ ವಿಚಾರಗಳನ್ನು ಬಸವಾದಿ ಶರಣರು ಜನರ ಮುಂದಿಟ್ಟಿದ್ದಾರೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಇಂತಹ ಸತ್ಯ ಹೇಳಿದರೆ ಕೋಪಗೊಂಡವರು ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿಕ್ಕಬಾಸೂರಿನಲ್ಲಿ ನಡೆಯುತ್ತಿರುವ ಸಿದ್ಧರಾಮೇಶ್ವರ 851ನೇ ಜಯಂತಿ ಹಾಗೂ ನೊಳಂಬ ಸಮಾವೇಶದ ಎರಡನೇ ದಿನವಾದ ಸೋಮವಾರ ನಡೆದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಜಾತಿಯ ಬಡವರನ್ನು ಮುಖ್ಯವಾಹಿನಿಗೆ ತರಬೇಕಿದೆ.

ಯೂರೋಪ್‌ನಲ್ಲಿ ಕೂಡ ಯೂನಿವರ್ಸಲ್‌ ಇನ್‌ಕಮ್‌ ಎಂಬ ರೂಲ್‌ ಚಾಲ್ತಿಯಲ್ಲಿದೆ. ಅಂಬೇಡ್ಕರ್‌ ಹೇಳಿದಂತೆ ಎಲ್ಲ ಜನರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಾನತೆ ತಂದು ಕೊಟ್ಟ ದಿನವೇ ದೇಶದ ಜನರಿಗೆ ನಿಜವಾದ ಸ್ವಾತಂತ್ರ್ಯ ಬಂದಂತಾಗುತ್ತದೆ. 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಇಂತಹ ಚರ್ಚೆಗಳು ನಡೆಯುತ್ತಿತ್ತು ಎಂದರು.

ಪ್ರತಿ ಮಗುವೂ ವಿಶ್ವಮಾನವರಾಗಿ ಹುಟ್ಟುತ್ತಾರೆ. ಬೆಳೆದಂತೆ ಬಳಿಕ ಅಲ್ಪಮಾನವರಾಗುತ್ತಿದ್ದಾರೆ. ಹುಟ್ಟು-ಸಾವುಗಳ ನಡುವೆ ಬದುಕನ್ನು ಸಾರ್ಥಕತೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಾವಿಗೆ ಅರ್ಥವೇ ಇರಲ್ಲ. ನಮ್ಮ ತಂದೆಗೂ 6 ಜನ ಮಕ್ಕಳು. ಆದರೆ ಯಾರೊಬ್ಬರೂ ಓದಲಿಲ್ಲ. ನನಗೊಬ್ಬನಿಗೆ ಓದುವ ಅವಕಾಶ ಸಿಕ್ಕಿತ್ತು. ಅದು ನನ್ನ ಹಣೆಬರಹವಲ್ಲ, ಬದಲಾಗಿ ನಾನು ಮಾಡಿದ ಪ್ರಯತ್ನ ಎಂದರು.

ವಿಷ್ಣುವಿನ ತಲೆಯಿಂದ ಹುಟ್ಟಿದವನು ಬ್ರಾಹ್ಮಣ, ತೋಳಿನಿಂದ ಕ್ಷತ್ರಿಯ, ಹೊಟ್ಟೆಭಾಗದಿಂದ ವೈಶ್ಯ, ಪಾದದ ಕೆಳಗಿನಿಂದ ಹುಟ್ಟಿದವನು ಶೂದ್ರನೆಂದು ಸ್ವಾರ್ಥಕ್ಕಾಗಿ ಇಂತಹ ಸುಳ್ಳುಗಳನ್ನು ಹೇಳಿಕೊಂಡು ತಿರುಗಾಡುತ್ತಿರುವವರು ವೈಜ್ಞಾನಿಕ ಕಾರಣ ಕೊಡಬಲ್ಲರೇ? ಹೀಗಾಗಿ ಶರಣರು ತಮ್ಮ ಬದುಕಿನಲ್ಲಿ ಇಂತಹ ಮೌಡ್ಯ, ಕಂದಾಚಾರ ಸೇರಿ ವರ್ಗ ಪದ್ಧತಿಯನ್ನು ತಿರಸ್ಕರಿಸಿದ್ದಾರೆ ಎಂದರು.

ಮನುಷ್ಯ ಜಾತಿ ಎಂಬುದು ಒಂದೇ. ಯಾವ ದೇವಸ್ಥಾನಗಳಲ್ಲಿ ಅವಕಾಶವಿಲ್ಲವೋ ಅಂತಹ ದೇವಸ್ಥಾನಕ್ಕೆ ಹೋಗಬೇಡಿ ಎಂದು ಹಿಂದುಳಿದ ಜನರಿಗೆ ನಾರಾಯಣ ಗುರು ತಿಳಿಸಿಕೊಟ್ಟಿದ್ದಾರೆ. ನಿಮಗೆ ಬೇಕಾದ ದೇವಸ್ಥಾನಗಳನ್ನು ನಿರ್ಮಿಸಿಕೊಂಡು ಪೂಜೆಗಳನ್ನು ಸಲ್ಲಿಸುವಂತೆ ಸಲಹೆ ನೀಡಿದ್ದಾರೆ. ಕಾಯಕಯೋಗಿ ಸಿದ್ಧರಾಮೇಶ್ವರರು ಬಸವೇಶ್ವರರ ಸಮಕಾಲೀನರು. 12ನೇ ಶತಮಾನದಲ್ಲಿ ವಚನಗಳ ರಚನೆ ಮೂಲಕ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಅವರು ನುಡಿದಂತೆ ನಡೆದುಕೊಳ್ಳುವುದೇ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಹೀಗಾಗಿ ವಚನ ಸಾಹಿತ್ಯ ವಿಶ್ವಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.