ಸಾಹಿತ್ಯಕ್ಕೆ ಪದವಿಗಳ ಪರಿಧಿ ಇಲ್ಲ: ಸತೀಶ


Team Udayavani, Dec 6, 2017, 3:13 PM IST

06-30.jpg

ಹಾನಗಲ್ಲ: ಕವಿತೆ ನನ್ನ ಮೊದಲ ಮತ್ತು ಕೊನೆಯ ಪ್ರೀತಿ. ಬಾಂಧವ್ಯಗಳನ್ನು ಬಿಗಿಯಾಗಿ ಹಿಡಿದುಕೊಂಡು ಬದುಕನ್ನು ಪ್ರೀತಿಸುವ ಇಚ್ಛೆ ನನ್ನದು. ಸಾಹಿತ್ಯ ಪ್ರೀತಿಸುವಂತಹದ್ದೇ ಹೊರತು ದ್ವೇಷಿಸುವುದಲ್ಲ ಎಂದು ಹಾವೇರಿ ಜಿಲ್ಲಾ 10ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಸತೀಶ ಕುಲಕರ್ಣಿ ನುಡಿದರು.

ಮಂಗಳವಾರ ಇಲ್ಲಿನ ಸರಕಾರಿ ಪಪೂ ಮಹಾವಿದ್ಯಾಲಯದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾಳಿನ ಪೀಳಿಗೆಗೆ ಸಾಹಿತ್ಯ, ಸಂಸ್ಕೃತಿಯ ಅಗತ್ಯಗಳ ಅರಿವು ಮೂಡಿಸಬೇಕು. ಯುವ ಪೀಳಿಗೆ ಸಮಕಾಲಿನ ಚಿಂತನೆಗಳನ್ನು ಬದುಕಿನಲ್ಲಿ ಸವಾಲಾಗಿ ಸ್ವೀಕರಿಸಬೇಕು. ಕವಿತೆ ಬರೆಯುವುದರ ಜೊತೆಗೆ ಅನುಭವಗಳ ಸೂಕ್ಷತೆಗಳನ್ನು ಸಮಾಜಕ್ಕೆ ಮುಟ್ಟಿಸುವ ಸೃಜನಶೀಲತೆ ನಿಜವಾದ ಕವಿ ಎಂದ ಅವರು, ಭಾವನೆಗಳನ್ನು ಶುದ್ಧವಾಗಿ ಅಭಿವ್ಯಕ್ತಿಸುವ ಎಲ್ಲರೂ ಕವಿಗಳೆ ಎಂದರು.

ಪ್ರಾ| ಎಸ್‌.ಸಿ. ಪೀರಜಾದೆ ಮಾತನಾಡಿ, ಸಾಹಿತ್ಯಕ್ಕೆ ಜಾತಿ, ಧರ್ಮ, ಉದ್ಯೋಗ, ಪದವಿಗಳ ಪರಿಧಿ ಇಲ್ಲ. ಸಂತೋಷಕ್ಕಾಗಿ ಬರೆಯುವುದು ಒಂದಾದರೆ ಇನ್ನೊಬ್ಬರ ಸುಖ, ದುಃಖಗಳನ್ನು ಕಾವ್ಯವಾಗಿಸುವ ಸಹೃದಯತೆಯೂ ಬೇಕು. ಸತೀಶ ಕುಲಕರ್ಣಿ ಚಿನ್ನದಂತ ಸಾಹಿತಿ. ಹಲವು ರೀತಿಯಲ್ಲಿ ಸಾಹಿತ್ಯದ ಒರೆಗಲ್ಲಿನಲ್ಲಿ ಪರೀಕ್ಷೆಗೊಂಡು ಎಲ್ಲರಿಗೂ ಬೇಕಾಗುವ ಸಾಹಿತ್ಯದ ಆಭರಣವಾಗಿದ್ದಾರೆ. ಅವರಿಗೆ ದೊರೆತ ಸಮ್ಮೇಳನದ ಸರ್ವಾಧ್ಯಕ್ಷತೆ ಎಲ್ಲರೂ ಸಂತಸಪಟ್ಟ ಸಂಗತಿ ಎಂದರು. ಕಸಾಪ ತಾಲೂಕು ಮಾಜಿ ಅಧ್ಯಕ್ಷ ಪ್ರಭು ಗುರಪ್ಪನವರ ಮಾತನಾಡಿ, ಸಾಹಿತ್ಯ, ರಂಗ ಕಲೆಗಳು ಸೃಜನಶೀಲ ಮನಸ್ಸಿನ ಅನುಭವದ ಅಭಿವ್ಯಕ್ತಿಗಳು.
ಬರವಣಿಗೆ ಹಾಗೂ ನಾಟ್ಯ ಮನುಷ್ಯನನ್ನು ಶುದ್ಧಗೊಳಿಸುತ್ತವೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮುತ್ತಣ್ಣ
ನಾಶಿಕ ಕವಿಗೋಷ್ಠಿ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿದರು. ಸಾಹಿತಿ ಪ್ರೊ| ಮಾರುತಿ ಶಿಡ್ಲಾಪುರ ಮಾತನಾಡಿದರು. ಉಪನ್ಯಾಸಕ ನಾಗರಾಜ ಧಾರೇಶ್ವರ, ಕಲಾವಿದ ರವಿ ಲಕ್ಷ್ಮೇಶ್ವರ, ಮಾರುತಿ ಪೇಟಕರ, ಕೆ.ಎಲ್‌. ದೇಶಪಾಂಡೆ, ಮಂಜುನಾಥ ಕರ್ಜಗಿ, ಅಶೋಕ ಕೊಂಡ್ಲಿ, ಎನ್‌.ವಿ. ಪಾಟೀಲ, ಗೌರಿ ಕೊಂಡೋಜಿ, ಸಂಜನಾ ಕಲಾಲ, ಚೇತನ ನಾಗಜ್ಜನವರ, ಉಮಾಮಹೇಶ್ವರಿ ಬಳ್ಳಾರಿ, ಎನ್‌. ಎನ್‌. ಸಂಗೂರ ಇದ್ದರು.

ಕವಿಗೋಷ್ಠಿ: ವೀರೇಶ ಹಿರೇಮಠ, ಶಿವರಾಜಕುಮಾರ ರಾಣೆಬೆನ್ನೂರ, ಪವಿತ್ರಾ ಕರಿಯಪ್ಪನವರ, ಮಲ್ಲಮ್ಮ ಶಿಡ್ಲಾಪುರ, ಶ್ವೇತಾ ಬಡಿಗೇರ, ಎಲ್‌.ಕೆ. ಸುಚಿತಾ, ಅನ್ನಪೂರ್ಣ ಅಂಬಿಗೇರ, ಅಂಜು ಜಂಬೇರ, ನಾಗವೇಣಿ ಕೊರವರ ಸ್ವರಚಿತ ಕವನ ವಾಚನ ಮಾಡಿದರು. ಭಾಗ್ಯಲಕ್ಷ್ಮೀ ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕಿ ವೀಣಾ ದೇವರಗುಡಿ ಸ್ವಾಗತಿಸಿದರು. ಎನ್‌ಎಸ್‌ಎಸ್‌ ಅಧಿಕಾರಿ ಎಚ್‌.ಎಸ್‌. ಬಾರ್ಕಿ ನಿರೂಪಿಸಿದರು. ಉಪನ್ಯಾಸಕಿ ರೂಪಾ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.