ಕುಡಿವ ನೀರಿನ ಸಮಸ್ಯೆ ಪರಿಹರಿಸಿ


Team Udayavani, Mar 10, 2021, 6:11 PM IST

ಕುಡಿವ ನೀರಿನ ಸಮಸ್ಯೆ ಪರಿಹರಿಸಿ

ಹಾವೇರಿ: ಬೇಸಿಗೆ ಆರಂಭಗೊಂಡಿದ್ದು, ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳನ್ನುಈಗಿನಿಂದಲೇ ಗುರುತು ಮಾಡಿಕೊಳ್ಳಬೇಕು. ನೀರಿನ ಸಮಸ್ಯೆ ಇದ್ದಲ್ಲಿ ಪರ್ಯಾಯ ವ್ಯವಸ್ಥೆಕೈಗೊಂಡು ನೀರಿನ ಸಮಸ್ಯೆ ಎದುರಾಗದಂತೆ ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಧಿ ಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಪಂ ಸಾಮಾನ್ಯಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೀರಿನ ಮೂಲಗಳಿಲ್ಲದ ಹಳ್ಳಿಗಳಲ್ಲಿಅನಿವಾರ್ಯತೆ ಉಂಟಾದಲ್ಲಿ ಮಾತ್ರ ಟ್ಯಾಂಕರ್‌ಬಳಕೆಗೆ ಕ್ರಮ ಕೈಗೊಳ್ಳಬೇಕು. ಕೊಳವೆಬಾವಿ ಕೊರೆಯಲು ಸರ್ಕಾರದ ಅನುಮತಿ ಇಲ್ಲ.ಈ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಕುರಿತಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು.ಯಾವುದೇ ಕಾರಣಕ್ಕೂ ಯಾವ ಹಳ್ಳಿಗೂಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು.

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ನೀವಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಜಿಪಂ ಸಿಇಒ ಮಹಮ್ಮದ್‌ ರೋಷನ್‌ ಮಾತನಾಡಿ, ಸಧ್ಯ ಜಿಲ್ಲೆಯಲ್ಲಿ ನೀರಿನ ಅಭಾವವಿಲ್ಲ. ಕಳೆದಮೂರು ವರ್ಷಗಳ ಪರಿಸ್ಥಿತಿಯನ್ನು ಅವಲೋಕಿಸಿಬಹುಗ್ರಾಮ ಕುಡಿಯುವ ನೀರಿನ ಯೋಜನೆ,ಜಲಜೀವನ ಮಿಷನ್‌ ಯೋಜನೆ ಒಳಪಡುವ ಗ್ರಾಮಗಳು ಹಾಗೂ ಟ್ಯಾಂಕರ್‌ ಮೂಲಕ ನೀರುಪೂರೈಕೆ ಗ್ರಾಮಗಳ ನಕ್ಷೆ ತಯಾರಿಸಲಾಗಿದೆ.ಒಂದು ವಾರದೊಳಗೆ ಟಾಸ್ಕ್ಫೋರ್ಸ್‌ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದ ತಕ್ಷಣಕ್ರಿಯಾ ಯೋಜನೆ ತಯಾರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಂದರ್ಭದಲ್ಲಿ ಸ್ಥಳೀಯ ಜಿಪಂ ಸದಸ್ಯರ ಗಮನಕ್ಕೆ ತರಬೇಕು. ರೈತ ಫಲಾನುಭವಿಗಳಿಗೆತಾಡಪಲ್‌ ವಿತರಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪುವಂತೆ ಕೃಷಿಜಂಟಿ ನಿರ್ದೇಶಕರು ಕೆಳಹಂತದ ಅಧಿಕಾರಿಗಳಿಗೆಸೂಕ್ತ ನಿರ್ದೇಶನ ನೀಡಬೇಕು. ಯಾವುದೇಯೋಜನೆಗಳು ಒಬ್ಬನೇ ಫಲಾನುಭವಿಗಳಿಗೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.

ಈ ವರ್ಷ ಇಲಾಖಾವಾರು ನಿಗದಿಯಾಗಿರುವ ಅನುದಾನ ಬಳಕೆಗೆ ಸಾಧ್ಯವಾಗದೇಹಿಂತಿರುಗಿಸಲಾಗಿದೆ ಎಂಬ ವಿಷಯ ಬರಬಾರದು. ಬಿಡುಗಡೆಯಾದ ಅನುದಾನ ಪೂರ್ಣಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ-ಕಾಲೇಜುಗಳು ಪುರ್ನಾರಂಭಗೊಂಡಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗ ತಮಾರ್ಗದಲ್ಲಿ ಬಸ್‌ಗಳನ್ನು ಪುನಃ ಆರಂಭಿಸಬೇಕು. ಕೋವಿಡ್ ಸಂದರ್ಭದಲ್ಲಿ ಬಸ್‌ ಓಡಾಟನಿಲ್ಲಿಸಲಾಗಿತ್ತು. ಈಗಲೂ ಕೆಲ ಮಾರ್ಗದಲ್ಲಿಬಸ್‌ ಆರಂಭಿಸಿಲ್ಲ ಎಂಬ ಸದಸ್ಯರ ಆಕ್ಷೇಪದಹಿನ್ನೆಲೆಯಲ್ಲಿ ತಕ್ಷಣ ಎಲ್ಲ ಮಾರ್ಗಗಳಲ್ಲೂ ಬಸ್‌ಸಂಚಾರ ಆರಂಭಿಸಲು ವಾಯವ್ಯ ರಸ್ತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಲೋಕೋಪಯೋಗಿ ಇಲಾಖೆಯಿಂದ ರಸ್ತೆಗಳನಿರ್ಮಾಣ ಹಾಗೂ ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗದ ಕುರಿತಂತೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಎಲ್ಲೆಲ್ಲಿ ಯಾವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಸಭೆ ತಿಳಿಸಿದಅಭಿಯಂತರರ ಬಗ್ಗೆ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಯಿತು. ಸಭೆಯಲ್ಲಿ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಟಾಕನಗೌಡ ಪಾಟೀಲ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಅಮರಾಪೂರ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕನ್ನಪ್ಪಳವರ, ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪರಿಹಾರ ವಿತರಣೆಯಲ್ಲಿ ತಾರತಮ್ಯ :

ಹಾವೇರಿ ತಾಲೂಕಿನ ಕೊರಡೂರು ಹಾಗೂ ಕಿತ್ತೂರು ಗ್ರಾಮದಲ್ಲಿ ಅತಿವೃಷ್ಟಿ, ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಎಸಗಲಾಗಿದೆ. ಅಲ್ಲದೇ, ಪಂಚಾಯಿತಿಯಲ್ಲಿನ ಠರಾವು ಪುಸ್ತಕ ಸಹ ಕಾಣೆಯಾಗಿದೆ. ಈ ಬಗ್ಗೆ ಕೇಳಿದರೆ ಯಾರೊಬ್ಬರು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಠರಾವು ಪುಸ್ತಕ ಕಾಣೆಯಾಗಿರುವುದಕ್ಕೆ ಯಾರು ಹೊಣೆ ಎಂದು ಜಿಪಂ ಸದಸ್ಯ ಸಿದ್ದರಾಜ ಕಲಕೋಟಿ ಪ್ರಶ್ನಿಸಿದರು. ಆಗ ತಾಪಂ ಇಒ ಬಸವರಾಜಪ್ಪ ಮಾತನಾಡಿ, ಠರಾವು ಪುಸ್ತಕಕಾಣೆಯಾಗಿರುವ ಕುರಿತು ಗುತ್ತಲ ಪೊಲೀಸ್‌ ಠಾಣೆಗೆ ದೂರು ನೀಡಲಾಗುವುದು ಎಂದರು. ಆಗಜಿಪಂ ಸಿಇಒ ಮಹಮದ್‌ ರೋಷನ್‌ ಮಧ್ಯ ಪ್ರವೇಶಿಸಿ, ಠರಾವು ಪುಸ್ತಕ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿ 24 ಗಂಟೆಯೊಳಗೆ ಸಮಗ್ರ ವರದಿ ನೀಡಬೇಕು. ವರದಿ ಆಧರಿಸಿ ಇಲಾಖೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.