ಜಲಮೂಲ ರಕ್ಷಣೆಗೆ ಪಣ ತೊಡಿ

ಜೀವಜಲಕ್ಕೆ ಪರಿತಪಿಸಬಾರದೆಂದು ರಾಜರಿಂದ ಪುಷ್ಕರಣಿ ನಿರ್ಮಾಣ: ಶಿಮುಶ

Team Udayavani, Apr 15, 2019, 4:02 PM IST

15-April-23

ಹೊಳಲ್ಕೆರೆ: ಒಂಟಿಕಂಬದ ಮುರುಘಾ ಮಠದ ಪುರಾತನ ಪುಷ್ಕರಣಿಯ ಹೂಳು ತೆಗೆಯುವ ಕಾರ್ಯಕ್ಕೆ ಡಾ| ಶಿವಮೂರ್ತಿ ಮುರುಘಾ ಶರಣರು ಚಾಲನೆ ನೀಡಿದರು.

ಹೊಳಲ್ಕೆರೆ: ನಾಡಿನ ಐತಿಹಾಸಿಕ ಜಲಮೂಲಗಳಾದ ಪುಷ್ಕರಣಿ ಹಾಗೂ ಕಲ್ಯಾಣಿಗಳನ್ನು ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.

ಪಟ್ಟಣದ ಒಂಟಿಕಂಬದ ಮುರುಘಾ ಮಠದಲ್ಲಿ ಎಸ್‌. ಜೆ.ಎಂ ವಿದ್ಯಾಪೀಠ ಹಾಗೂ ಬೆಂಗಳೂರಿನ ಎಂ.ಸಿ.ಕೆ.ಸಿ ಸಂಘದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಕಲ್ಯಾಣಿ ಕಾಯಕಲ್ಪ’ ಕಾರ್ಯಕ್ರಮದಲ್ಲಿ ಮುರುಘಾ ಮಠದಲ್ಲಿರುವ ಪುರಾತನ ಪುಷ್ಕರಣಿಯ ಹೂಳು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಿ ಶರಣರು ಮಾತನಾಡಿದರು.

ರಾಜ ಮಹಾರಾಜರ ಕಾಲಗಳಲ್ಲಿ ನಿರ್ಮಾಣವಾಗುತ್ತಿದ್ದ ಕಲ್ಯಾಣಿಗಳಿಗೂ, ಪರಿಸರಕ್ಕೂ ಅವಿನಾಭಾವ ಸಂಬಂಧವಿದೆ. ಕಲ್ಯಾಣಿಗಳು ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದವು. ಜೀವಜಲಕ್ಕಾಗಿ ಜನರು ಪರಿತಪಿಸುವುದನ್ನು ತಡೆಗಟ್ಟಲು ಬೇಕಾದ ಸುಂದರ ಪರಿಕಲ್ಪನೆಯೊಂದಿಗೆ ಕಲ್ಯಾಣಿಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ಕಲ್ಯಾಣಿಗಳೂ ಜನರಿಗಲ್ಲದೆ ಪರಿಸರದ ಒಡನಾಡಿಯಾಗಿರುವ ಹಕ್ಕಿ ಪಕ್ಷಿಗಳಿಗೂ ನೀರಿನ ಅಸರೆಯನ್ನು ನೀಡುತ್ತಿದ್ದವು. ಆದರೆ ಅವುಗಳಲ್ಲಿ ಇಂದು ಕೊಳೆ, ಹೂಳು ತುಂಬಿಕೊಂಡಿವೆ.

ಅದನ್ನು ಶುದ್ಧಗೊಳಿಸಿ ಕಲ್ಯಾಣಿಗೆ ಶುದ್ಧ ನೀರು ಹರಿಯುವಂತೆ ಮಾಡಬೇಕು ಎಂದರು. ಮೊದಲು ಕಲ್ಯಾಣಿಗಳು, ಬಾವಿಗಳು, ಕೆರೆಗಳು ಜನರಿಗೆ ಭೂಮಿಯ ಅಳದ ಐದತ್ತು ಅಡಿಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುತ್ತಿದ್ದವು. ಇತ್ತಿಚೆಗೆ ಕೊಳವೆಬಾವಿಗಳ ಹೊಡೆತಕ್ಕೆ ಸಿಕ್ಕಿರುವ ಕಲ್ಯಾಣಿಗಳು ನೀರಿಲ್ಲದೆ ಒಣಗುತ್ತಿವೆ. ಜತೆಗೆ ಸಾವಿರಾರು ಅಡಿ ಕೊಳವೆಬಾವಿ ಕೊರೆಸಿದರೂ ನೀರು ಸಿಗದಂತಾಗಿದೆ. ಆದ್ದರಿಂದ ಜನರು ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಮುರುಘಾ ಮಠದಲ್ಲಿರುವ ಕೊಳವೆಬಾವಿಗಳಿಗೆ ನೀರು ಇಂಗಿಸುವ ಮಳೆಕೊಯ್ಲು ಮಾಡಲು ಒತ್ತು ನೀಡಲಾಗಿದೆ. ಹಾಗಾಗಿ ಕೊಳವೆಬಾವಿಗಳು ಇಂದಿಗೂ ಬತ್ತಿಲ್ಲ ಎಂದು ತಿಳಿಸಿದರು.

ಮುರುಘಾ ಮಠದ ಶ್ರೀ ಬಸವಾನಂದ ಸ್ವಾಮೀಜಿ, ಪರಮಶಿವಯ್ಯ, ಪಪಂ ಮಾಜಿ ಸದಸ್ಯ ಪಿ.ಎಚ್‌. ಮುರುಗೇಶ್‌, ರೋಟರಿ ಅಧ್ಯಕ್ಷ ಎ.ಸಿ. ಗಂಗಾಧರಪ್ಪ, ಹರೀಶ್‌, ಮಾರುತೇಶ್‌, ರುದ್ರಪ್ಪ, ನಟರಾಜ್‌ ಆಚಾರ್‌, ಪತ್ರಕರ್ತ ಎಸ್‌.ಬಿ. ಶಿವರುದ್ರಪ್ಪ, ನ್ಯಾಯವಾದಿ ಎಸ್‌. ವೇದಮೂರ್ತಿ, ಶಿಕ್ಷಕ ಕಾಂತರಾಜ್‌, ಕೆ.ಎಸ್‌. ರಘು, ರಮೇಶ ಯಾದವ್‌ ಭಾಗವಹಿಸಿದ್ದರು.

ಮಳೆಗಾಲದಲ್ಲಿ ಹರಿದು ಹಳ್ಳ ಸೇರುವ ನೀರನ್ನು ತಡೆದು ನಿಲ್ಲಿಸಿ ಕೊಳವೆಬಾವಿ ಸುತ್ತ ಕೃಷಿ ಹೊಂಡ, ಇಂಗುಗುಂಡಿ ಮಾಡಿಸಿ ಇಂಗಿಸುವ ಕೆಲಸ ಮಾಡಿದಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ಇದರಿಂದ ನೀರಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ಇಲ್ಲವಾದಲ್ಲಿ ರೈತರು ಆಕಾಶದ ಕಡೆಗೆ ನೋಡುತ್ತ ಕೂರುವ ಸ್ಥಿತಿ ನಿರ್ಮಾಣವಾಗುತ್ತದೆ.
. ಡಾ| ಶಿವಮೂರ್ತಿ ಮುರುಘಾ ಶರಣರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.