ಜನಸಂಖ್ಯೆ ಅಂಕಿ-ಅಂಶ ನಿಖರವಲ್ಲ

ನಿರ್ದಿಷ್ಟ ಅಂಕಿ-ಅಂಶ ಇಲ್ಲದಿರುವುದರಿಂದ ಅನೇಕರಿಗೆ ಸೌಲಭ್ಯ ಮರೀಚಿಕೆ: ತೆಲಗಾವಿ

Team Udayavani, Oct 6, 2019, 6:02 PM IST

06-October-24

ಹೊಸದುರ್ಗ: ಜನಸಂಖ್ಯೆ ಕುರಿತ ಸರ್ಕಾರದ ಅಂಕಿ ಅಂಶಗಳು ನಿಖರವಾಗಿರುವುದಿಲ್ಲ. ಅವು ಮೋಸದಿಂದ ಕೂಡಿವೆ ಎಂದು ಹಿರಿಯ ಇತಿಹಾಸ ಸಂಶೋಧಕ ಪ್ರೊ| ಲಕ್ಷ್ಮಣ ತೆಲಗಾವಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಭಾಂಗಣದಲ್ಲಿ ಹೆಜ್ಜೆ ಸಾಲು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಕೃತಿ ಬಿಡುಗಡೆ ಸಮಾರಂಭದಲ್ಲಿ ಜಾನಪದ ಸಂಶೋಧಕ ಬಾಗೂರು ನಾಗರಾಜಪ್ಪ ರಚಿಸಿರುವ “ಹೊಸದುರ್ಗ ತಾಲೂಕು ಗೆಜೆಟಿಯರ್‌’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜನಸಂಖ್ಯೆ ಅಂಕಿ-ಅಂಶ ನಿರ್ದಿಷ್ಟವಾದುದಲ್ಲ. ಅದು ಬದಲಾಗುತ್ತಿರುತ್ತದೆ. ಆಯಾ ಸಮುದಾಯದವರು ಹೇಳುವ ಜನಸಂಖ್ಯಾ ಅಂಕಿ-ಅಂಶಗಳು ಸತ್ಯಾ ಸತ್ಯತೆಯಿಂದ ಕೂಡಿರುವುದಿಲ್ಲ. ಇಂಥವುಗಳನ್ನು ನ್ಯಾಯಾಲಯ ನಿರಾಕರಿಸುತ್ತದೆ. ಇನ್ನು ಸರ್ಕಾರದ ಅಂಕಿ-ಅಂಶಗಳಲ್ಲೂ ಸಾಕಷ್ಟು ಲೋಪಗಳಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ 18 ಲಕ್ಷ ಜನಸಂಖ್ಯೆಯ ಸಮುದಾಯವೊಂದಕ್ಕೆ 80 ಸಾವಿರ ಜನಸಂಖ್ಯೆ ತೋರಿಸಲಾಗಿದೆ. ನಿರ್ದಿಷ್ಟ ಅಂಕಿ-ಅಂಶ ತೋರಿಸಲಾಗದೇ ಇರುವುದರಿಂದ ಅನೇಕ ಸಮುದಾಯಗಳು ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ವಿಷಾದಿಸಿದರು.

ಬಾಗೂರು ನಾಗರಾಜಪ್ಪ ರಚನೆಯ ‘ಹೊಸದುರ್ಗ ತಾಲೂಕು ಗೆಜೆಟಿಯರ್‌’ ಹೊಸದುರ್ಗ ತಾಲೂಕಿನ ಸಾಂಸ್ಕೃತಿಕ ವೈಭವ ಹಾಗೂ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ. ಸ್ಥಳೀಯ ಸಂಸ್ಕೃತಿ, ಚರಿತ್ರೆ, ಪರಂಪರೆ ಎಲ್ಲವನ್ನೂ ಕೃತಿ ಒಳಗೊಂಡಿದೆ. ತಾಲೂಕಿಗೆಇದೊಂದು ಅತ್ಯುತ್ತಮ ಕೊಡುಗೆಯಾಗಿದ್ದು, ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನದ ಕೃತಿಯಾಗಿದೆ. ಗ್ಯಾಜೆಟಿಯರ್‌ ರಚಿಸುವುದು ಕ್ಲಿಷ್ಟಕರ ಕೆಲಸ. ಗೆಜೆಟ್‌ ಗಳಲ್ಲಿ ಲೋಪಗಳಾದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಅದನ್ನು ರಚಿಸಲು ಸಾಕಷ್ಟು ಸಮಯ ಬೇಕು ಎಂದರು.

ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ನೆರಳಿರುವ ತಾಲೂಕು ಕಚೇರಿ ಆವರಣದಲ್ಲಿ ವೀರಸೌಧ ಸ್ಥಾಪನೆ ಮಾಡಲಾಗುವುದು. ಜತೆಗ ೆಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಫಿರಂಗಿಗಳು ಈ ಹಿಂದೆ ಹೊಸದುರ್ಗದಲ್ಲಿದ್ದವು. ಅವುಗಳನ್ನು ಮರಳಿ ತಾಲೂಕಿಗೆತರುವ ಪ್ರಯತ್ನ ನಡೆಸಲಾಗುವುದು ಎಂದು ಸಂಶೋಧಕ ಬಾಗೂರು ನಾಗರಾಜಪ್ಪ ಮಾಡಿದ ಮನವಿಗೆ ಸ್ಪಂದಿಸಿದರು.

ಜಾನಪದ ಸಂಶೋಧಕ ಬಾಗೂರು ನಾಗರಾಜಪ್ಪ, ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಎಚ್‌. ಬಿಲ್ಲಪ್ಪ ಮಾತನಾಡಿದರು. ಹೆಜ್ಜೆ ಸಾಲು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಗೋ. ತಿಪ್ಪೇಶ್‌ ಇದ್ದರು. ಕಾಲೇಜಿನ ಪ್ರಾಚಾರ್ಯ ಮಂಜುನಾಥ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.