ಪ್ರವಾಹ ಭೀತಿ; ಹಂಪಿಗೆ ಬರ್ತಿಲ್ಲ ಪ್ರವಾಸಿಗರು!

•ನೆರೆ ಇಳಿದು ಸಹಜ ಸ್ಥಿತಿಯತ್ತ ಹಂಪಿ •ಆತಂಕದಿಂದ ಪ್ರಯಾಣ ರದ್ದುಗೊಳಿಸಿದ ಪ್ರವಾಸಿಗರು

Team Udayavani, Aug 15, 2019, 11:58 AM IST

15-Agust-13

ಹೊಸಪೇಟೆ: ನದಿ ಪ್ರವಾಹ ಕಡಿಮೆಯಾದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಹಂಪಿ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯುತ್ತಿರುವದು.

•ಪಿ.ಸತ್ಯನಾರಾಯಣ
ಹೊಸಪೇಟೆ:
ತುಂಗಭದ್ರಾ ನದಿಯ ಪ್ರವಾಹದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಒಮ್ಮೆಲೆ ಕುಸಿದಿದೆ. ಪ್ರವಾಹ ತಗ್ಗಿದ್ದರೂ ಸಹ ಪ್ರವಾಸಿಗರು ಹಂಪಿಗೆ ಬರಲು ಹಿಂದೇಟು ಹಾಕುತ್ತಿದ್ದು, ಶೇ. 65 ರಷ್ಟು ಮಂದಿ ಪ್ರವಾಸ ರದ್ದುಗೊಳಿಸಿದ್ದಾರೆ.

ಮಲೆನಾಡಿನಲ್ಲಿ ಆದ ಅತಿವೃಷ್ಟಿಯಿಂದ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಹರಿಸಲಾಗಿತ್ತು. ಇದರಿಂದ ನದಿಯಲ್ಲಿ ಪ್ರವಾಹ ಉಂಟಾಗಿ ಐತಿಹಾಸಿಕ ಹಂಪಿಯ 60 ಕ್ಕೂ ಹೆಚ್ಚು ಸ್ಮಾರಕಗಳು ನೀರಿನಲ್ಲಿ ಮುಳುಗಿದ್ದವು. ಅಲ್ಲದೆ ಕೆಲವೆಡೆ ತೆಪ್ಪ ಬಳಸಿ ಪ್ರವಾಸಿಗರನ್ನು ರಕ್ಷಿಸಲಾಗಿತ್ತು. ಹಂಪಿ ಪಕ್ಕದ ವಿರೂಪಾಪುರಗಡ್ಡೆಯ ಹೋಟೆಲ್ ಹಾಗೂ ಲಾಡ್ಜ್ನಲ್ಲಿ ವ್ಯಾಸ್ತವ್ಯ ಹೂಡಿದ್ದ 300ಕ್ಕೂ ಹೆಚ್ಚು ಜನ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಎಲ್ಲರನ್ನು ರಕ್ಷಿಸಲಾಗಿದ್ದರೂ ಪ್ರವಾಸಿಗರಲ್ಲಿ ಆತಂಕ ದೂರವಾಗಿಲ್ಲ. ಅಲ್ಲದೆ ಪ್ರವಾಸಿಗರು ತಾತ್ಕಾಲಿಕ ವಾಗಿ ಹಂಪಿಗೆ ಬರದಂತೆ ಸೂಚನೆ ನೀಡಲಾಗಿತ್ತು. ಸದ್ಯ ಹಂಪಿಯಲ್ಲಿ ಪ್ರವಾಹ ಇಳಿದಿದ್ದರೂ ಪ್ರವಾಸಿಗರೇ ಕಾಣುತ್ತಿಲ್ಲ.

ಪ್ರವಾಹ ಭೀತಿಯಿಂದ ಮುಂಗಡವಾಗಿ ಆನ್‌ಲೈನ್‌ ಮೂಲಕ ಸ್ಥಳೀಯ ಹೋಟೆಲ್ ಹಾಗೂ ಲಾಡ್ಜ್ಗಳಲ್ಲಿ ರೂಮ್‌ ಬುಕ್‌ ಮಾಡಿದ್ದ ಶೇ. 65ರಷ್ಟು ಜನ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರವಾಸೋದ್ಯಮ ನಿಗಮದ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್, ಹಂಪಿ ಹಾಗೂ ಹೊಸಪೇಟೆ ಹಲವಾರು ಹೋಟೆಲ್ಗಳಲ್ಲಿ ಈಗಾಗಲೇ ಮುಂಗಡವಾಗಿ ಆನ್‌ಲೈನ್‌ ಮೂಲಕ ಬುಕಿಂಗ್‌ ಮಾಡಿದ್ದ ರೂಮ್‌ಗಳನ್ನು ಪ್ರವಾಸಿಗರು ರದ್ದು ಮಾಡಿದ್ದಾರೆ.

ಜಾಲತಾಣದಲ್ಲಿ ಪೋಸ್ಟ್‌: ಹಂಪಿ-ಹೊಸಪೇಟೆ ಹಾಗೂ ಕಮಲಾಪುರ ಭಾಗದ ಹೋಟೆಲ್ನವರು ಹಂಪಿಯಲ್ಲಿ ಪ್ರಸ್ತುತ ಯಾವುದೇ ಸಮಸ್ಯೆಯಿಲ್ಲ. ಪ್ರವಾಸಿಗರು ನಿರಾಳವಾಗಿ ಹಂಪಿಗೆ ಬರಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ.

ರಾಮಲಕ್ಷ್ಮಣ ದೇಗುಲ ಮಾರ್ಗ ಮುಕ್ತ: ನದಿ ಪ್ರವಾಹದಿಂದ ಸ್ಥಗಿತಗೊಂಡಿದ್ದ ಶ್ರೀ ಚಕ್ರತೀರ್ಥ ಕೋದಂಡರಾಮಸ್ವಾಮಿ ದೇವಸ್ಥಾನಕ್ಕೆ ತೆರಳುವ ಹಾಗೂ ತಳವಾರಘಟ್ಟ ಮಾರ್ಗದಿಂದ ವಿಜಯವಿಠಲ ದೇವಸ್ಥಾನಕ್ಕೆ ತೆರಳುವ ಮಾರ್ಗ ಮುಕ್ತವಾಗಿದೆ. ಪ್ರವಾಸಿಗರು ಎಂದಿನಂತೆ ಭೇಟಿ ನೀಡಬಹುದಾಗಿದೆ.

ಶ್ರಾವಣ ಮಾಸ: ರಾಜ್ಯದ ದೂರದ ಜಿಲ್ಲೆ ಹಾಗೂ ಹೊರರಾಜ್ಯದ ಪ್ರವಾಸಿಗರು ಹಂಪಿ ಪ್ರವಾಸವನ್ನು ಮೊಟಕುಗೊಳಿಸಿದ್ದರೆ, ಮತ್ತೂಂದಡೆ ಶ್ರಾವಣ ಮಾಸದ ಅಂಗವಾಗಿ ವಿರೂಪಾಕ್ಷೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕಳೆದ ಶನಿವಾರದಿಂದ ಸೋಮವಾರದ ಮೂರು ದಿನಗಳ ಸಾಲು ರಜೆ ಒಂದೆಡೆ, ಶ್ರಾವಣಮಾಸದ ವಿಶೇಷ ಪೂಜೆ- ದರ್ಶನಕ್ಕಾಗಿ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆ ಸೇರಿದಂತೆ ನೆರೆ ಆಂಧ್ರದಿಂದ ಹಂಪಿಗೆ ಭಕ್ತರು ಆಗಮಿಸಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.