ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಕಮಲಕ್ಕೆ ಮತ ನೀಡಿ: ಕಲ್ಲೂರ


Team Udayavani, May 27, 2019, 4:20 PM IST

27-May-33

ಹುಮನಾಬಾದ: ಬಿಜೆಪಿ ಅಭ್ಯರ್ಥಿಗಳ ಪರ ಮಾಜಿ ಶಾಸಕ ಸುಭಾಷ ಕಲ್ಲೂರ ಅವರು ವಿವಿಧ ವಾರ್ಡ್‌ಗಳಿಗೆ ತೆರಳಿ ಮತ ಯಾಚಿಸಿದರು.

ಹುಮನಾಬಾದ: ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮತದಾರ ಪ್ರಭುಗಳು ಕಮಲಕ್ಕೆ ಮತ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದ ವೇಳೆ ಮಾತನಾಡಿದ ಅವರು, ಹುಮನಾಬಾದ ಪುರಸಭೆ ಅಧಿಕಾರ ಗದ್ದುಗೆ ಹಿಡಿದ ಕಾಂಗ್ರೆಸ್‌ ಪಕ್ಷ ಸರ್ಕಾರದಿಂದ ಅನುದಾನ ತಂದರೂ ಕೈಗೊಂಡಿರುವ ಎಲ್ಲ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿವೆ. 2013ರಲ್ಲಿ ಆರಂಭಗೊಂಡ ಒಳಚರಂಡಿ ಕಾಮಗಾರಿಯನ್ನು 7 ವರ್ಷ ಗತಿಸಿದರೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜೊತೆಗೆ ಕಾಮಗಾರಿ ಸಂಪೂರ್ಣ ನಿರೂಪಯುಕ್ತವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ಹೇಳಿದರು. ಅತ್ಯಾಕರ್ಷಕ ಹೂ-ಹುಲ್ಲಿನಿಂದ ಅಲಂಕೃತಗೊಂಡು ಪಟ್ಟಣದ ಸೌಂದರ್ಯ ಹೆಚ್ಚಿಸಬೇಕಿದ್ದ ಡಾ| ಅಂಬೇಡ್ಕರ್‌ ವೃತ್ತದಿಂದ ವಾಂಜ್ರಿವರೆಗೆ ಕೈಗೊಂಡ ರಸ್ತೆ ವಿಭಜಕ ತಿಪ್ಪೆಗುಂಡಿಯಾಗಿ ಪರಿವರ್ತನೆಯಾಗಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ. ಹುಮನಾಬಾದ ಪಟ್ಟಣದಲ್ಲಿ ಇರುವ ಪುರಸಭೆ ಏಕೈಕ ಉದ್ಯಾನ ಕಳೆದ ದಶಕದಿಂದ ಹಸಿರಿಲ್ಲದೇ ಭಣಗೊಡುತ್ತಿದೆ. ಹಸಿರು ಸಿರಿಯಲ್ಲಿ ಸಾರ್ವಜನಿಕರು ಪರಿವಾರ ಸಮೇತ ಬಂದು ನೆಮ್ಮದಿಯಿಂದ ಕುಳಿತುಕೊಳ್ಳಬೇಕಾದ ಉದ್ಯಾನ ಸ್ಥಳದಲ್ಲಿ ನಿಯಮ ಬಾಹಿರ ವಿವಿಧ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಇದು ಅಭಿವೃದ್ಧಿಯೆ? ಇಂಥ ಪಕ್ಷಕ್ಕೆ ಜನರು ಮತ್ತೂಮ್ಮೆ ಮತ ನೀಡಿ, ಗದ್ದುಗೆ ಗೈಯಲ್ಲಿ ಕೊಡಬೇಕೆ ಎಂದು ಪ್ರಶ್ನಿಸಿದರು.

ಡಾ| ಅಂಬೇಡ್ಕರ್‌ ವೃತ್ತದಿಂದ ಫುಟ್ಪಾತ್‌ ಪಕ್ಕದಲ್ಲಿ ಹರಿಯುವ ಸಾರ್ವಜನಿಕ ತ್ಯಾಜ್ಯ ನೋಡಿದರೆ ವಾಕರಿಕೆ ಬರುತ್ತದೆ. ಇಷ್ಟು ಅವಧಿ ಅಧಿಕಾರದಲ್ಲಿದ್ದರೂ ಆ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಪಕ್ಷಕ್ಕೆ ಮತ್ತೂಮ್ಮೆ ಮತ ನೀಡಬೇಕೆ? ಅಂಥವರನ್ನು ಅಧಿಕಾರದಿಂದ ದೂರ ಇಡಲು ಮತದಾರರು ಈ ಬಾರಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಾನಂದ ಮಂಠಾಳ್ಕರ್‌, ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್‌, ನರಸಿಂಗ್‌(ರಾಜು)ಭಂಡಾರಿ, ಬ್ಯಾಂಕ್‌ರೆಡ್ಡಿ, ಗಿರೀಶ ಎಂ.ಪಾಟೀಲ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.