ವರ್ಷ ಕಳೆದರೂ ದುರಸ್ತಿಯಾಗದ ಜಳಕದ ಕೆರೆ ರಸ್ತೆ

ಐಎಸ್‌ಪಿಎಲ್ ಪೈಪ್‌ಲೈನ್‌ಗಾಗಿ ನಡೆದ ಕಾಮಗಾರಿ

Team Udayavani, Apr 29, 2019, 11:03 AM IST

29-April-6

ಕೆರೆಕಾಡು ಜಳಕದ ಕೆರೆ ರಸ್ತೆಯಲ್ಲಿ ಪಾದೂರು ಪೈಪ್‌ಲೈನ್‌ಗಾಗಿ ರಸ್ತೆಯನ್ನು ಅಗೆದಿರುವುದು.

ತೋಕೂರು: ಇಲ್ಲಿನ ಪಡುಪಣಂಬೂರು ಗ್ರಾ.ಪಂ. ನ ಬೆಳ್ಳಾಯರು ಗ್ರಾಮದಲ್ಲಿ ನಡೆಸಿರುವ ಐಎಸ್‌ಪಿಎಲ್ನ (ಪಾದೂರು) ಪೈಪ್‌ಲೈನ್‌ ಕಾಮಗಾರಿಗಾಗಿ ಸುಸಜ್ಜಿತ ಕಾಂಕ್ರೀಟ್ ರಸ್ತೆಯೊಂದನ್ನು ಕಡಿದು ವರ್ಷ ಕಳೆದರೂ ಸೂಕ್ತವಾಗಿ ದುರಸ್ತಿ ನಡೆಸದೇ ನಿರ್ಲಕ್ಷಿಸಿರುವುದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವರು ಷಷ್ಠಿಯ ಸಂದರ್ಭದಲ್ಲಿ ಜಳಕದ ಧಾರ್ಮಿಕ ವಿಧಿ ವಿಧಾನಕ್ಕೆ ದೇವರ ಮೂರ್ತಿಯ ಸವಾರಿ ಇದೇ ರಸ್ತೆಯಾಗಿ ತೆರಳುತ್ತಿರುವುದರಿಂದ ಜಳಕದ ರಸ್ತೆ ಎಂದೇ ಪ್ರಸಿದ್ಧಿಯಾಗಿದೆ.

ಬೆಳ್ಳಾಯರು ಗ್ರಾಮಸ್ಥರು ತೋಕೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಇದನ್ನು ಕಳೆದ ಎರಡು ವರ್ಷದ ಹಿಂದೆ ಜಿ.ಪಂ.ನ ಮೂಲಕ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿಯ ಯೋಜನೆಯಲ್ಲಿ 50 ಲಕ್ಷ ರೂ. ವೆಚ್ಚದ ಅನುದಾನದಲ್ಲಿ ಸಂಪೂರ್ಣವಾಗಿ ಕಾಂಕ್ರೀಟ್ ಕಾಮಗಾರಿ ನಡೆಸಿ ಅಭಿವೃದ್ಧಿಪಡಿಸಲಾಗಿತ್ತು.

ರಸ್ತೆಯಲ್ಲಿ ಬಿರುಕು
ಈ ರಸ್ತೆಯ ನಿರ್ಮಾಣದ ಅನಂತರ ಐಎಸ್‌ಪಿಎಲ್ ಯೋಜನೆಗಾಗಿ ಪಾದೂರು ಪೈಪ್‌ಲೈನ್‌ ಹಾದುಹೋಗಲು ರಸ್ತೆಯನ್ನೇ ಅಗೆದು ಅನಂತರ ಕಾಟಾಚಾರಕ್ಕೆ ಕಾಂಕ್ರೀಟ್ ಮಿಶ್ರಿತ ರಸ್ತೆಯನ್ನು ದುರಸ್ತಿಗೊಳಿಸಿದ್ದರು. ಅದು ಅಲ್ಲಲ್ಲಿ ಬಿರುಕು ಬಿಟ್ಟಿದೆ. ರಸ್ತೆಯು ಪರಿಪೂರ್ಣವಾಗಿ ನಿರ್ಮಾಣವಾಗದಿರುವುದರಿಂದ ರಸ್ತೆಗೆ ಕಲ್ಲುಗಳಿಂದ ಬಂದ್‌ ಮಾಡಿ ಪಕ್ಕದಲ್ಲಿ ಮಣ್ಣಿನ ರಸ್ತೆಯನ್ನು ಸುತ್ತಿ ಬಳಸಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಈ ರೀತಿಯಾಗಿ ನಿರ್ಮಿಸಿ ವರ್ಷ ಕಳೆದರೂ ಸಹ ಈಗಲೂ ಮಣ್ಣಿನ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ನಿತ್ಯ ಸಂಚಾರಿಗಳಿಗೆ ಇದೆ.

ಗ್ರಾಮ ಪಂಚಾಯತ್‌ ಸಹ ಗ್ರಾಮಸ್ಥರ ವಿರೋಧಕ್ಕೆ ಮಣಿದು ಅನೇಕ ಬಾರಿ ಗುತ್ತಿಗೆದಾರರಿಗೆ ಮೌಖೀಕವಾಗಿ ತಿಳಿಸಿದ್ದರೂ ಸಹ ರಸ್ತೆ ದುರಸ್ತಿ ಗೊಳಿಸಿಲ್ಲ. ಇನ್ನು ಮಳೆಗಾಲದಲ್ಲಿ ಮಣ್ಣಿನ ರಸ್ತೆಯು ಕೆಸರು ಮಿಶ್ರಿತ ರಸ್ತೆಯಾಗುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ತಪ್ಪಿದ್ದಲ್ಲ ಎಂಬುದು ಗ್ರಾಮಸ್ಥರ ಅಳಲು.

ಮೊದಲೇ ಎಚ್ಚರಿಸಿದ್ದೆವು
ರಸ್ತೆಯನ್ನು ಬೇಕಾಬಿಟ್ಟು ಅಗೆದು ದುರಸ್ತಿ ಕಾರ್ಯ ನಡೆಸುವ ಮೊದಲೇ ನಾವು ಪಂಚಾಯತ್‌ ಮೂಲಕ ವ್ಯವಸ್ಥಿತವಾಗಿ ನಡೆಸಬೇಕು ಎಂದು ಎಚ್ಚರಿಸಿದ್ದೇವು. ಅದರೆ ಯಾವುದಕ್ಕೂ ಕಿವಿಗೊಡದೇ, ಕಳಪೆ ಮಟ್ಟದಲ್ಲಿ ದುರಸ್ತಿ ನಡೆಸಿರುವುದರಿಂದ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಸಂಚರಿಸಲು ಯೋಗ್ಯವಾಗಿಲ್ಲ . – ಧರ್ಮಾನಂದ ಶೆಟ್ಟಿಗಾರ್‌,
– ಗ್ರಾಮಸ್ಥರು.

ಎನ್‌ಒಸಿ ನೀಡುವುದಿಲ್ಲ
ಗ್ರಾಮಸ್ಥರ ಬೇಡಿಕೆಯಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೆವು. ಆದರೆ ಸೂಕ್ತವಾಗಿ ಸ್ಪಂದಿಸದೇ ದುರಸ್ತಿ ನಡೆಸಿರುವುದು ಸಹ ಸಮಾಧಾನ ತಂದಿಲ್ಲ. ಯೋಜನೆಯ ಎಂಜಿನಿಯರ್‌ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಗ್ರಾಮ ಪಂಚಾಯತ್‌ನಿಂದ ಕಾಮಗಾರಿ ಪೂರ್ಣಗೊಳಿಸಿದ ಬಗ್ಗೆ ಎನ್‌ಒಸಿಯನ್ನು ನೀಡುವುದಿಲ್ಲ. ಇದರಿಂದ ಗುತ್ತಿಗೆದಾರರಿಗೆ ನಷ್ಟವಾದರೂ ಗ್ರಾಮದ ಹಿತಕ್ಕೆ ನಾವು ಬದ್ಧರಾಗಿದ್ದೇವೆ.
ಮೋಹನ್‌ದಾಸ್‌,
ಅಧ್ಯಕ್ಷರು, ಪಡುಪಣಂಬೂರು ಗ್ರಾಮ ಪಂಚಾಯತ್‌

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.