ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ನಾಟಿ ಜೋರು


Team Udayavani, Dec 16, 2019, 12:33 PM IST

16-December-8

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ:
ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಎರಡನೇ ಬೆಳೆಗೂ ಬಸವಸಾಗರ ಜಲಾಶಯದಿಂದ ನೀರು ದೊರಕಿದ್ದರಿಂದ ಇದೀಗ ಭತ್ತ ನಾಟಿ ಚಟುವಟಿಕೆ ಜೋರಾಗಿದೆ. ಎಡದಂಡೆ ಮುಖ್ಯ ಕಾಲುವೆಗೆ ವಾರಬಂದಿ ಪದ್ಧತಿ ಮೂಲಕ ನೀರು ಹರಿಸುವ ಕುರಿತುನೀರಾವರಿ ಸಲಹಾ ಸಮಿತಿ ನಿರ್ಣಯಿಸಿದ್ದರಿಂದ ಹಿಂಗಾರು ಭತ್ತದ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗಿದೆ. ಹೀಗಾಗಿ ಎರಡನೇ ಬೆಳೆಯೂ ರೈತರಿಗೆ ಈ ಭಾರಿ ಕೈಹಿಡಿಯಲಿದೆ ಎಂದು ಪ್ರದೇಶದ ರೈತ ನಂದಣ್ಣ ವಾರಿ ಹೇಳುತ್ತಾರೆ.

ಸುರಪುರ ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 54,758 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಆದರೆ ಹಿಂಗಾರು ಹಂಗಾಮಿನಲ್ಲಿ ಭತ್ತ ನಾಟಿ ಕ್ಷೀಣಿಸಲಿದೆ. ಕೊನೆ ಭಾಗಕ್ಕೆ ಸಮರ್ಪಕ ನೀರು ಸಿಗುವುದು ಎಂಬ ಕಾರಣದಿಂದ ಕೆಲ ರೈತರು ಭತ್ತ ನಾಟಿಗೆ ಆಸಕ್ತಿ ತೋರಿಲ್ಲ ಎನ್ನಲಾಗಿದೆ.

ರೈತರು ಮುಂಗಾರು ಹಂಗಾಮಿನಲ್ಲಿ ಎಕರೆಗೆ 40-45 ಚೀಲ ಭತ್ತ ಇಳುವರಿ ಪಡೆದಿದ್ದಾರೆ. ಸರಕಾರ ಪ್ರತಿ ಕ್ವಿಂಟಲ್‌ ಭತ್ತಕ್ಕೆ ಬೆಂಬಲ ಬೆಲೆ ಸೇರಿ 1815, 1830 ರೂ. ದರದಲ್ಲಿ ಖರೀದಿಸುವಂತೆ ಆದೇಶಿಸಿದೆ. ಹೀಗಾಗಿ ಎಲ್ಲವೂ ದುಬಾರಿಯಾಗಿದೆ. ಸರಕಾರ ಘೋಷಿಸಿರುವ ಬೆಂಬಲ ಬೆಲೆ ತೀರಾ ಕಡಿಮೆಯಾಗುತ್ತದೆ. ಇದರಿಂದ ರೈತರು ಖರ್ಚು ಮಾಡಿದಕ್ಕೆ ಸಾಲುವುದಿಲ್ಲ. ಹೀಗಾಗಿ ಬೆಂಬಲ ಬೆಲೆ ಸೇರಿ ಪ್ರತಿ ಕ್ವಿಂಟಲ್‌ ಭತ್ತಕ್ಕೆ 3000ರಿಂದ 5000 ರೂ. ವರೆಗೂ ದರ ನೀಡಿದರೆ ಮಾತ್ರ ರೈತರಿಗೆ ಒಂದಿಷ್ಟು ಜೀವನ ಸುಧಾರಿಸಬಹುದು ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.

4.50 ಲಕ್ಷ ಹೆಕ್ಟೇರ್‌ಕ್ಕೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಬಸವಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಪ್ರಾಣಿ ಸಂಕುಲಕ್ಕೆ ಜೀವನಾಡಿಯಾಗಿದೆ. ಹಿಂಗಾರು ನಾಟಿಗಾಗಿ ರೈತರು ತಿಂಗಳ ಹಿಂದೆಯೇ ಭತ್ತದ ಮಡಿ ಹಾಕಿದ್ದರು. ರೈತರು ಈಗ ಕೂಲಿಕಾರ್ಮಿಕರನ್ನು ಬಳಸಿಕೊಂಡು ಭತ್ತ ನಾಟಿಯಲ್ಲಿ ತೊಡಗಿದ್ದಾರೆ. ಜತೆಗೆ ಕೂಲಿಕಾರ್ಮಿಕ ಬೇಡಿಕೆಯೂ ಹೆಚ್ಚಾಗಿದೆ. ಆಂಧ್ರದ ಗುಂತಕಲ್‌ ಹಾಗೂ ಅಚ್ಚುಕಟ್ಟು ಪ್ರದೇಶ ಕಾರ್ಮಿಕರನ್ನು ಕೃಷಿಗಾಗಿ ಬಳಸಿಕೊಳ್ಳಲಾಗುತ್ತದೆ.

ಭತ್ತ ನಾಟಿ ಮಾಡಲು ಕೂಲಿ ಕಾರ್ಮಿಕರಿಗೆ ಎಕರೆಗೆ 2000ದಿಂದ 2500 ರೂ. ಕೂಲಿ ಸಿಗುತ್ತದೆ. ಅಲ್ಲದೆ ಭತ್ತ ನಾಟಿ ಮಾಡಿದ ನಂತರ ದೀರ್ಘ‌ ಕಾಲ ಕೂಲಿ ದೊರೆಯಲಿದೆ. ಮಹಿಳೆಯರಿಗೆ ಪ್ರತಿ ದಿನಕ್ಕೆ 150 ರೂ. ಹಾಗೂ ಪುರುಷರಿಗೆ 300 ರೂ. ಕೂಲಿ ಸಿಗಲಿದೆ. ಹೀಗಾಗಿ ಈ ಪ್ರದೇಶದ ರೈತರಿಗೆ ಮತ್ತು ಕಾರ್ಮಿಕರಿಗೆ ಭತ್ತ ವ್ಯವಸಾಯ ಬದುಕಿಗೆ ಆಸರೆಯಾಗಿದೆ ಎನ್ನಬಹುದು.

ವಾರ ಬಂದಿ ಪ್ರಕಾರವೇ ರವಿವಾರ 15ರಂದು ಕಾಲುವೆಗೆ ನೀರು ಸ್ಥಗಿತಗೊಳಿಸಲಾಗಿದೆ. ಎಂಟು ದಿನ ಬಂದ್‌ ಮಾಡಿ ನಂತರ ಡಿ. 23ರಂದು ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತದೆ.
.ಎಸ್‌. ರಂಗರಾಮ,
ಅಧೀಕ್ಷಕ ಇಂಜಿನಿಯರ್‌,
ಬಸವಸಾಗರ ಅಣೆಕಟ್ಟು ವಿಭಾಗ ನಾರಾಯಣಪುರ

ಸರಕಾರ ಬೆಂಬಲ ಬೆಲೆ ಘೋಷಿಸುವುದರಿಂದ ರೈತರು ಸುಧಾರಿಸುವುದಿಲ್ಲ. ಒಕ್ಕಲುತನ ಉಳಿಯಲ್ಲ. ರೈತನ ಜೀವನ ಸುಧಾರಣೆಯಾಗಬೇಕಾದರೆ ಸರ್ಕಾರ ಡಾ| ಸ್ವಾಮಿನಾಥನ್‌ ಆಯೋಗದ ವರದಿ ಜಾರಿ ಮಾಡಬೇಕು.
.ಮಲ್ಲಿಕಾರ್ಜುನ ಸತ್ಯಂಪೇಟ ಕ.ರಾ. ರೈತ
ಸಂಘ(ಹಸಿರು ಸೇನೆ) ರಾಜ್ಯ ಕಾರ್ಯದರ್ಶಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.