![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-415x234.jpg)
ತಿಂಥಣಿಯಲ್ಲೊಂದು ಉತ್ತಮ ಗ್ರಂಥಾಲಯ
ಗೋಡೆ ಮೇಲೆಯೂ ಜ್ಞಾನ ಭಂಡಾರ ಮೇಲ್ವಿಚಾರಕ ನಾಯಕ್ಗೆ ಸಿಬ್ಬಂದಿ ಸೇವಾ ಪುರಸ್ಕಾರ ಪ್ರಶಸ್ತಿ
Team Udayavani, Nov 24, 2019, 3:32 PM IST
![24-November-15](https://www.udayavani.com/wp-content/uploads/2019/11/24-November-15-601x465.jpg)
ಕಕ್ಕೇರಾ: ತಿಂಥಣಿ ಗ್ರಾಪಂ ಗ್ರಂಥಾಲಯದಲ್ಲಿ ಉತ್ತಮ ವಾತಾವರಣ, ನಿಶ್ಯಬ್ದರಹಿತ ಪರಿಸರ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳೆಲ್ಲವೂ ಇದ್ದು, ಓದುಗರನ್ನು ಸೆಳೆಯುತ್ತಿದೆ. ಕೆಲ ಗ್ರಂಥಾಲಯಗಳು ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವಾಗ ತಿಂಥಣಿ ಗ್ರಾಪಂ ಸಾರ್ವಜನಿಕ ಗ್ರಂಥಾಲಯದಲ್ಲಿ ಎಲ್ಲ ಸೌಕರ್ಯವಿದೆ.
ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಇದೆ. ಒಂದು ವೇಳೆ ವಿದ್ಯುತ್ ವ್ಯತ್ಯಯ ಉಂಟಾದಾಗ ಪರ್ಯಾಯ ಬೆಳಕಿಗೆ ಇನವರ್ಟರ್ ಬ್ಯಾಟರಿ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ಅಧ್ಯಯನ ಮಾಡಲು ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಓದುಗರು.
5,500 ಪುಸ್ತಕಗಳು: ಗ್ರಂಥಾಲಯದಲ್ಲಿ ಒಟ್ಟು 5,500 ಪುಸ್ತಕಗಳು ಇವೆ. 275 ಸದಸ್ಯರ ಸಂಖ್ಯೆ ಹೊಂದಿದೆ. ಶಾಲಾ-ಕಾಲೇಜು ರಜೆ ಇದ್ದಾಗ ಹಾಗೂ ಬಿಡುವಿನ ವೇಳೆ ವಿದ್ಯಾರ್ಥಿಗಳು ಮತ್ತು ಪ್ರಜ್ಞಾವಂತ ಸಾರ್ವಜನಿಕರು ಪ್ರತಿ ನಿತ್ಯ ಗ್ರಂಥಾಲಯದ ಪ್ರಯೋಜನ ಪಡೆದುಕೊಳ್ಳುತ್ತಾರೆ. ಹೀಗೆ ಓದುಗರಿಗೆ ಜ್ಞಾನದ ಅರಿವು ಮೂಡಿಸುವಂತೆ ಜ್ಞಾನಪೀಠ ಪ್ರಶಸ್ತಿ ವಿಜೇತರ ಫೋಟೋ ಹಾಗೂ ರಾಷ್ಟ್ರೀಯ ನಾಯಕರ ಭಾವಚಿತ್ರ, ಐತಿಹಾಸಿಕ ಸ್ಥಳಗಳ ಮಾಹಿತಿ ಫಲಕಗಳನ್ನು ಗ್ರಂಥಾಲಯ ಗೋಡೆ ಮೇಲೆ ಹಾಕಿದ್ದು ಓದುಗರನ್ನು ಆಕರ್ಷಿಸುತ್ತಿದೆ. ಹೀಗಾಗಿ ಇಲ್ಲಿನ ಜನರಿಗೆ ಗ್ರಂಥಾಲಯ ಬಹುಪಯೋಗಿಯಾಗಿದೆ ಎಂದು ಓದುಗರು ಹೇಳುತ್ತಾರೆ.
ಸೇವಾ ಪುರಸ್ಕಾರ: ಪುಸ್ತಕಗಳ ಅಭ್ಯಾಸಕ್ಕೆ ಓದುಗರಿಗೆ ಪ್ರೇರೇಪಿಸುವುದು ಮತ್ತು ಸ್ವಚ್ಛತೆ ಕಾಪಾಡುವುದು, ಸದಸ್ಯತ್ವ ಹೆಚ್ಚಿಸಿ ಗ್ರಂಥಾಲಯ ಪ್ರಗತಿಗೆ ಶ್ರಮಿಸಿದವರನ್ನು ಪರಿಗಣಿಸಿ ಮೇಲ್ವಿಚಾರಕ ಗಂಗಾಧರ ನಾಯಕ್ ಅವರಿಗೆ ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ “ಸಿಬ್ಬಂದಿ ಸೇವಾ ಪುರಸ್ಕಾರ ಪ್ರಶಸ್ತಿ’ ನೀಡಿ ಗೌರವಿಸಿದೆ.
ಹೀಗೆ ಅಭಿವೃದ್ಧಿಯತ್ತ ಸಾಗಿದ ಗ್ರಂಥಾಲಯಕ್ಕೆ ಆದಾಯ ಕೂಡ ಬರುತ್ತದೆ. ಇಲ್ಲಿಯವರೆಗೂ ಸದಸ್ಯತ್ವ ಪಡೆದ ಹಣ-4730 ರೂ., ಹಳೆಯ ಪತ್ರಿಕೆ ಮಾರಾಟ-5694 ರೂ. ಹಾಗೂ ಆಕಸ್ಮಿಕವಾಗಿ ಪುಸ್ತಕ ಕಳೆದ ಸದಸ್ಯರಿಗೆ ದಂಡ ಸಹಿತ 500 ರೂ.ಸೇರಿ ಒಟ್ಟು 11,200 ರೂ. ಆದಾಯ ಠೇವಣಿ ಇದೆ ಎನ್ನುತ್ತಾರೆ ಮೇಲ್ವಿಚಾರಕರು.
ಟಾಪ್ ನ್ಯೂಸ್
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![Frud](https://www.udayavani.com/wp-content/uploads/2024/12/Frud-1-150x90.jpg)
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
![MCC-BankArrest](https://www.udayavani.com/wp-content/uploads/2024/12/MCC-BankArrest-150x90.jpg)
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
![KND-Amber-greece](https://www.udayavani.com/wp-content/uploads/2024/12/KND-Amber-greece-150x90.jpg)
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
![Surthkal-Spota](https://www.udayavani.com/wp-content/uploads/2024/12/Surthkal-Spota-150x90.jpg)
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-150x84.jpg)
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
![Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು](https://www.udayavani.com/wp-content/uploads/2024/12/road-roller-150x84.jpg)
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.