429 ಕೋಟಿ ರೂ. ಗ್ರಂಥಾಲಯ ಕರ ಬಾಕಿ

•ಬೆಂಗಳೂರು ಪಾಲಿಕೆಯಿಂದಲೇ 350 ಕೋಟಿ ಬಾಕಿ •ಕರ್ನಾಟಕದಲ್ಲಿವೆ ಏಳು ಸಾವಿರ ಗ್ರಂಥಾಲಯ

Team Udayavani, Jul 22, 2019, 3:16 PM IST

22-July-34

ಕಲಬುರಗಿ: ಕನ್ನಡ ಭವನದ ಆವರಣದ ಸುವರ್ಣ ಭವನದಲ್ಲಿ ರವಿವಾರ ಡಾ| ವಿಜಯಕುಮಾರ ಪರುತೆ ಅವರ 'ಹುಡುಕಾಟ' ಕವನ ಸಂಕಲನವನ್ನು ಡಾ| ಸತೀಶ ಕುಮಾರ ಎಚ್. ಹೊಸಮನಿ ಬಿಡುಗಡೆಗೊಳಿಸಿದರು.

ಕಲಬುರಗಿ: ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳು ಗ್ರಂಥಾಲಯಗಳ 429 ಕೋಟಿ ರೂ. ಕರ ಬಾಕಿ ಉಳಿಸಿಕೊಂಡಿವೆ. ಇದರಿಂದ ಗ್ರಂಥಾಲಯಗಳನ್ನು ಮೇಲ್ದರ್ಜೆಗೆ ಏರಿಸಲು ಮತ್ತು ಆಧುನಿಕ ಸೌಲಭ್ಯ ಕಲ್ಪಿಸಲು ಹಿನ್ನಡೆಯಾಗುತ್ತಿದೆ ಎಂದು ರಾಜ್ಯ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ| ಸತೀಶ ಕುಮಾರ ಎಚ್. ಹೊಸಮನಿ ಹೇಳಿದರು.

ನಗರದ ಕನ್ನಡ ಭನವ ಆವರಣದ ಸುವರ್ಣ ಭವನದಲ್ಲಿ ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ಪರಿಷತ್‌ನ ಗೌರವ ಕಾರ್ಯದರ್ಶಿ ಡಾ| ವಿಜಯಕುಮಾರ ಪರುತೆ ಅವರ ‘ಹುಡುಕಾಟ’ ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಅತಿ ಹೆಚ್ಚು ಗ್ರಂಥಾಲಯ ಹೊಂದಿದ ರಾಜ್ಯ ನಮ್ಮದು. ಎಲ್ಲ ಗ್ರಂಥಾಲಯಗಳಿಗೆ ಡಿಜಿಟಲ್ ಸ್ಪರ್ಷ ನೀಡುವ ನಿಟ್ಟಿನಲ್ಲಿ ಇಲಾಖೆ ಕಾರ್ಯೋನ್ಮುಖವಾಗಿದೆ. ಆದರೆ, ನಗರಸಭೆ, ಪುರಸಭೆಗಳು ಗ್ರಂಥಾಲಯಗಳ ಕೋಟ್ಯಂತರ ರೂ. ಕರವನ್ನು ತುಂಬಿಲ್ಲ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸುಮಾರು 350 ಕೋಟಿ ರೂ. ಕರ ಬಾಕಿ ಉಳಿಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಾರ್ಖಂಡ್‌ನ‌ಲ್ಲಿ ಕೇವಲ 30 ಗ್ರಂಥಾಲಯಗಳು, ರಾಜಸ್ಥಾನದಲ್ಲಿ 60 ಗ್ರಂಥಾಲಯಗಳು ಮಾತ್ರವೇ ಇವೆ. 25 ಕೋಟಿ ಜನ ಸಂಖ್ಯೆ ಹೊಂದಿರುವ ಉತ್ತಪ್ರದೇಶದಲ್ಲಿ ಬರೀ 68 ಗ್ರಂಥಾಲಯಗಳು ಇವೆ. 6.5 ಕೋಟಿ ಜನಸಂಖ್ಯೆ ಹೊಂದಿರುವ ಕರ್ನಾಟಕ ಏಳು ಸಾವಿರ ಗ್ರಂಥಾಲಯಗಳನ್ನು ಹೊಂದಿದೆ. ರಾಷ್ಟ್ರದಲ್ಲಿ ಮಾದರಿ ಗ್ರಂಥಾಲಯ ಪ್ರಶಸ್ತಿ ನಮ್ಮ ರಾಜ್ಯಕ್ಕೆ ಸಿಕ್ಕಿದೆ ಎಂದರು.

ಉತ್ತರ ಕರ್ನಾಟಕ- ಹೈದ್ರಾಬಾದ ಕರ್ನಾಟಕ ಪುಸ್ತಕಗಳೇ ಹೆಚ್ಚು: ಪ್ರತಿ ವರ್ಷದ ಪುಸ್ತಕಗಳ ಆಯ್ಕೆ ಸಮಿತಿಗೆ 10 ಸಾವಿರ ಪುಸ್ತಕಗಳು ಬರುತ್ತಿವೆ. ನಾಲ್ಕರಿಂದ ಐದು ಸಾವಿರ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಖರೀದಿಸುತ್ತೇವೆ. ಆಯ್ಕೆ ಸಮಿತಿಗೆ ಬರುವ ಪುಸ್ತಕಗಳಲ್ಲಿ ಹಳೆ ಮೈಸೂರು, ಕರಾವಳಿ ಭಾಗದ ಜಿಲ್ಲೆಗಳಿಗಿಂತಹ ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕ ಭಾಗದ ಪುಸ್ತಕಗಳೇ ಅಧಿಕ ಇರುತ್ತವೆ. ಇದೊಂದು ಸಂತೋಷಕರ ವಿಷಯ ಎಂದು ಹೇಳಿದರು.

ಓದುಗರೀಗ ಅಧಿಕಾರಿಗಳು: ಗ್ರಂಥಾಲಯಗಳನ್ನು ಉಪಯೋಗಿಸಿಕೊಂಡು ಸಾಹಿತಿ, ಸಾಹಿತ್ಯ ರೂಪಗೊಳುವ ನಿಟ್ಟಿನಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಯುವ ಜನಾಂಗಕ್ಕೆ ಗ್ರಂಥಾಲಯಗಳು ವೇದಿಕೆಯಾಗಿವೆ. ಸಾರ್ವಜನಿಕ ಗ್ರಂಥಾಲಯಗಳಲ್ಲೇ ಓದಿದ ಅನೇಕರು ಐಎಎಸ್‌, ಐಪಿಎಸ್‌, ಕೆಎಎಸ್‌ ಉತ್ತೀರ್ಣರಾಗಿದ್ದಾರೆ ಎಂದರು.

ಬೆಂಗಳೂರಿನ ಗ್ರಂಥಾಲಯವೊಂದರಲ್ಲೇ ಓದಿದ 174 ಜನ ವಿವಿಧ ಉನ್ನತ ನೌಕರಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇದು ದೇವಾಲಯಕ್ಕಿಂತ ಗ್ರಂಥಾಲಯ ಶ್ರೇಷ್ಠ ಎಂಬುವುದನ್ನು ನಿರೂಪಿಸುತ್ತದೆ. ನಿರಂತರವಾಗಿ ಓದಿ ಜ್ಞಾನ ಸಂಪಾದಿಸಿದಾಗ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಡಾ| ಸ್ವಾಮಿರಾವ ಕುಲಕರ್ಣಿ ಮಾತನಾಡಿ, ಲೇಖಕರು, ಚಿಂತಕರು, ವಿದ್ಯಾವಂತರಲ್ಲಿ ಹುಡುಕಾಟ ಮನೋಭಾವ ಬೆಳೆದಾಗ ಹೊಸತನ ಕೊಡಲು ಸಾಧ್ಯವಾಗುತ್ತದೆ. ಕವಿ ಡಾ| ವಿಜಯಕುಮಾರ ಪರುತೆ ಹಿಂದಿಯ ಉಪನ್ಯಾಸಕರಾದರೂ ಕನ್ನಡದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದಿ ಹಾಗೂ ಕನ್ನಡ ಭಾಷಾ ಪಂಡಿತ್ಯವನ್ನು ಅವರು ಹೊಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಿ ಪದವಿ ಮಹಿಳಾ ಮಹಾ ವಿದ್ಯಾಲಯದ ಡಾ| ಈಶ್ವರಯ್ಯ ಮಠ ‘ಹುಡುಕಾಟ’ ಕವನ ಸಂಕಲನದ ಬಗ್ಗೆ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕೋಶಾಧ್ಯಕ್ಷ ದೌಲತರಾಯ ಪಾಟೀಲ, ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಸಿ.ಎಸ್‌. ಮಾಲಿಪಾಟೀಲ, ಸವಿತಾ ನಾಶಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.