ನೇಗಿಲಯೋಗಿಗೆ ಸುವರ್ಣ ಸಂಭ್ರಮ

ಗುರುಪಾದ ಪುಸ್ತಕ ಲೋಕಾರ್ಪಣೆ •ಪ್ರಗತಿಪರ ರೈತರು-ವೀರ ಯೋಧರಿಗೆ ಸನ್ಮಾನ

Team Udayavani, Jun 8, 2019, 11:40 AM IST

08-Juen-11

ಕಲಬುರಗಿ: ಶ್ರೀ ಗುರುಪಾದಲಿಂಗ ಶಿವಯೋಗಿಗಳ ಜನ್ಮದಿನದ ಸುವರ್ಣ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಕೃಷಿ ಹಬ್ಬಕ್ಕೆ ಶ್ರೀ ಡಾ| ಚನ್ನವೀರ ಶಿವಾಚಾರ್ಯರು ಚಾಲನೆ ನೀಡಿದರು.

ಕಲಬುರಗಿ: ಸಮಾಜಮುಖೀ ಕಾಯಕ ಹಾಗೂ ಉತ್ತಮ ನಡೆ, ನುಡಿಗಳಿಂದ ಗಟ್ಟಿಯಾಗಿ ಮುನ್ನಡೆದರೆ ಮಾತ್ರ ಸರ್ವರ ಮನ ಗೆಲ್ಲಲು ಸಾಧ್ಯ ಎಂದು ಹಾರಕೂಡ ಸಂಸ್ಥಾನ ಹಿರೇಮಠದ ಡಾ| ಚನ್ನವೀರ ಶಿವಾಚಾರ್ಯರು ನುಡಿದರು.

ಕೃಷಿ ಪಂಡಿತ, ರೈತ ವಿಜ್ಞಾನಿ, ಮುತ್ಯಾನ ಬಬಲಾದ ಗುರು ಚೆನ್ನವೀರ ವಿರಕ್ತ ಮಠದ ಪೀಠಾಧಿಪತಿ ಗುರುಪಾದಲಿಂಗ ಮಹಾ ಶಿವಯೋಗಿಗಳ ಜನ್ಮದಿನದ ಸುವರ್ಣ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಕೃಷಿ ಹಬ್ಬ ಉದ್ಘಾಟಿಸಿ ಹಾಗೂ ಗುರುಪಾದ ಪುಸ್ತಕ ಲೋಕಾರ್ಪಣೆಗೊಳಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಸಮಾಜಕ್ಕಿಂದು ಸೂಕ್ತ ಮಾರ್ಗದರ್ಶನ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಬಬಲಾದ ಗುರುಪಾದಲಿಂಗ ಮಹಾಶಿವಯೋಗಿಗಳು ಮಾದರಿ ಕೃಷಿ ಕಾಯಕ ಹಾಗೂ ಉತ್ತಮ ನಡೆ, ನುಡಿ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ ಎಂದರು.

ದೇಶದ ಬೆನ್ನೆಲುಬಾಗಿರುವ ಕೃಷಿ ಕಾಯಕದಿಂದ ಜನತೆ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಕೃಷಿಗೆ ಒತ್ತು ನೀಡಿ, ಸಂದೇಶ ಬೀರುವಲ್ಲಿ ಪೂಜ್ಯರು ಯಶಸ್ವಿಯಾಗಿದ್ದಾರೆ. ನಿರಾಡಂಬರ ಜೀವಿಗಳಾಗಿ, ಸಕಲ ಬಾಂಧವರನ್ನು ತನ್ನವರೆಂದು ತಿಳಿದು, ಎಲ್ಲ ಧರ್ಮಿಯರನ್ನು ಸಹೋದರರಂತೆ, ಸೌಹಾರ್ದತೆಯಿಂದ ಕಾಣುವ, ಪ್ರಚಾರ ಬಯಸದೆ 50 ವರ್ಷಗಳ ಸಾರ್ಥಕ ಬದುಕು ನಡೆಸಿರುವ ಶ್ರೀಗಳ ಬದುಕು ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ ಸಾರಂಗ ಮಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಬಹುತೇಕರು ಬಾಯಿ ಮಾತಲ್ಲಿ ಕೃಷಿ ಕಾಯಕಕ್ಕೆ ಒತ್ತು ಕೊಡಬೇಕೆಂದು ಹೇಳುತ್ತಾರೆ. ಆದರೆ ಗುರುಪಾದಲಿಂಗ ಮಹಾಶಿವಯೋಗಿಗಳು ಧಾರ್ಮಿಕ, ಸಾಮಾಜಿಕ ಕಾರ್ಯದ ಒತ್ತಡವಿದ್ದರೂ ಕೃಷಿ ಕಾಯಕ ಕೈಗೊಳ್ಳುವ ಮೂಲಕ ಗತ ಕಾಲದಂತೆ ‘ಕೃಷಿ ವೈಭವತೆ’ ಮೆರೆಯಲು ನೀಡಿರುವ ಜೀವನ ಸಂದೇಶವನ್ನು ಎಲ್ಲರೂ ಪಾಲಿಸಬೇಕಾಗಿದೆ ಎಂದರು.

ಚಿಂಚನಸೂರ ಸಿದ್ಧಮಲ್ಲ ಶಿವಾಚಾರ್ಯರು, ಮುಗುಳನಾಗಾಂವ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ವಿಶ್ವಕರ್ಮ ಏಕದಂಡಗಿ ಮಠದ ಗುರುನಾಥೇಂದ್ರ ಸರಸ್ವತಿ ಮಹಾಸ್ವಾಮೀಜಿ, ಮಕ್ತಂಪುರ ವಿರಕ್ತ ಮಠದ ಶಿವಾನಂದ ಮಹಾಸ್ವಾಮೀಜಿ, ಚವದಾಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು, ರಟಕಲ್ ಹಿರೇಮಠದ ರೇವಣಸಿದ್ಧ ಶಿವಾಚಾರ್ಯರು, ವಿರಕ್ತಮಠದ ಸಿದ್ಧರಾಮ ಮಹಾಸ್ವಾಮೀಜಿ, ಅವರಾದ ಹಿರೇಮಠದ ಮರುಳಸಿದ್ಧ ಶಿವಾಚಾರ್ಯರು ಆಗಮಿಸಿದ್ದರು.

ಸಂಸದ ಡಾ| ಉಮೇಶ ಜಾಧವ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಮುಖಂಡರಾದ ಚಂದು ಪಾಟೀಲ, ಜಯಶ್ರೀ ಬಸವರಾಜ ಮತ್ತಿಮಡು ಹಾಜರಿದ್ದರು.

ಇದೇ ವೇಳೆ ಪ್ರಗತಿಪರ ರೈತರಾದ ಕವಿತಾ ಮಿಶ್ರಾ, ಜಾಫರ್‌ ಕರೀಮ್‌ ಸಾಬ್‌, ಸಿದ್ರಾಮಪ್ಪ ಕೋರೆ, ನಾಗರಾಜ ಶೇಗಜಿ, ಬಸವರಾಜ ಶೇರಿಕಾರ, ವೀರ ಯೋಧರಾದ ಗೌರಿಶಂಕರ ಹರಸೂರ, ಕಾಶೀನಾಥ ಅಣದೂರೆ, ಶಿವಾನಂದ ಬಾಳಿ, ಲಕ್ಷ್ಮೀಪುತ್ರ ಗೌರಾ, ನಾಗಣ್ಣ ಹೊಡಲ್, ಗುರುಪಾದ ಪುಸ್ತಕದ ಸಂಪಾದಕರಾದ ಗುಂಡೂರಾವ ಕಡಣಿ, ಹಣಮಂತರಾವ ಭೈರಾಮಡಗಿ, ವಿವಿಧ ದಾಸೋಹಿಗಳಾದ ಪಾಲಿಕೆ ಸದಸ್ಯ ರಾಜಕುಮಾರ ಎಚ್. ಕಪನೂರ, ಕೆ.ಎಸ್‌. ಮಾಲಿಪಾಟೀಲ, ಶಿವರಾಜ ಖಂಡ್ರೆ, ಶಿವರುದ್ರಯ್ಯ ಸ್ವಾಮಿ ಹಾಗೂ ಇತರರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮಠದ ಭಕ್ತಮಂಡಳಿಯವರಾದ ಬಸವರಾಜ ಬಿರಾದಾರ ಮುನ್ನಳ್ಳಿ, ರಾಜುರೆಡ್ಡಿ ಅನಂತರೆಡ್ಡಿ, ಸುಖದೇವ ಪೂಜಾರಿ, ಕಲ್ಯಾಣರಾವ್‌ ಹಸರಗುಂಡಗಿ, ಚೆನ್ನವೀರ ಹಿರೇಮಠ, ಮಲ್ಲಯ್ಯ ಸ್ವಾಮಿ ಇಟಗಿ, ಸಂಗನಗೌಡ ಪಾಟೀಲ ಡೋರಜಂಬಗಾ, ರವಿ ಮ್ಯಾಕ್ಸೆಟೇಲರ್‌, ಬಸಯ್ಯ ಶಾಸ್ತ್ರೀ ಹಾಗೂ ಮುಂತಾದವರಿದ್ದರು. ಪಾಲಿಕೆ ಸದಸ್ಯ ಶಿವಾನಂದ ಪಾಟೀಲ ಅಷ್ಟಗಿ ಪ್ರಾಸ್ತಾವಿಕ ಮಾತನಾಡಿದರು. ಶಾಂತಕುಮಾರ ದುಧನಿ ಸ್ವಾಗತಿಸಿದರು, ಜೇರಟಗಿ ಮಡಿವಾಳಯ್ಯ ಶಾಸ್ತ್ರೀಗಳು ನಿರೂಪಿಸಿದರು.

ಶ್ರೀಗಳಿಂದ ಕೃತಿ ಬಿಡುಗಡೆ
ಗುರುಪಾದಲಿಂಗ ಮಹಾಶಿವಯೋಗಿಗಳ ಜೀವನ ಚರಿತ್ರೆ ಹಾಗೂ ಯಶಸ್ವಿ ಕೃಷಿ ಕಾಯಕ ಕುರಿತಾಗಿ ಹಿರಿಯ ಪತ್ರಕರ್ತರಾದ ಗುಂಡೂರಾವ ಕಡಣಿ, ಹಣಮಂತರಾವ ಭೈರಾಮಡಗಿ ಅವರು ಬರೆದು ಸಂಪಾದಿಸಿರುವ ‘ಗುರುಪಾದ’ ಕೃತಿಯನ್ನು ಹಾರಕೂಡ ಸಂಸ್ಥಾನ ಹಿರೇಮಠದ ಡಾ| ಚನ್ನವೀರ ಶಿವಾಚಾರ್ಯರು ಬಿಡುಗಡೆಗೊಳಿಸಿದರು.

ಕೃಷಿ ಹಬ್ಬಕ್ಕೆ ಮಳೆ ಸಿಂಚನ
ಬೆಂಕಿಯಂತ ಬಿಸಿಲಿನಿಂದ ಕಂಗಾಲಾಗಿರುವ ಜನತೆ ಅದರಲ್ಲೂ ಮಳೆಯಿಲ್ಲದೇ ಪರದಾಡುತ್ತಿರುವ ರೈತ ವರುಣ ದೇವನಿಗೆ ಹಗಲಿರಳು ಪ್ರಾರ್ಥಿಸುತ್ತಿದ್ದು, ಮನವಿಗೆ ಸ್ಪಂದನೆ ಎನ್ನುವಂತೆ ಕೃಷಿ ಪಂಡಿತ, ಕಾಯಕಯೋಗಿ ಗುರುಪಾದಲಿಂಗ ಮಹಾ ಶಿವಯೋಗಿಗಳ ಸುವರ್ಣ ಮಹೋತ್ಸವದ ಮುಂಗಾರು ಕೃಷಿ ಹಬ್ಬದ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮಳೆ ಧರೆಗಿಳಿಯಿತು. ಮಳೆ ನಡುವೆಯೇ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.