ವರ್ಗಾವಣೆ ಕೌನ್ಸೆಲಿಂಗ್‌ ಗೊಂದಲ

•ಹಿಂದಿನ ದಿನವೇ ತಿಳಿಸಿದರೆ ಬರುವುದು ಹೇಗೆ?•ತಂತ್ರಾಂಶದಲ್ಲಾಗುವ ತಪ್ಪು ತಿದ್ದುವಲ್ಲಿ ಅಲಕ್ಷ್ಯ

Team Udayavani, Jun 29, 2019, 11:49 AM IST

29-June-12

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಎದುರು ಪ್ರೌಢಶಾಲೆ ಹೆಚ್ಚುವರಿ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲಾದ ಗೂಡಾಗಿ ಪರಿಣಮಿಸಿದ್ದು, ಹೆಚ್ಚುವರಿ ಶಿಕ್ಷಕರು ತಮಗೆ ಜಿಲ್ಲಾ ಹಂತದಲ್ಲೇ ಸ್ಥಳ ನಿಯುಕ್ತಿಗೊಳಬೇಕೆಂದು ಪಟ್ಟು ಹಿಡಿದಿದ್ದಾರೆ.

ಪ್ರೌಢಶಾಲೆಗಳಲ್ಲಿ ವಿಷಯವಾರು ಶಿಕ್ಷಕರನ್ನು ನಿಯೋಜಿಸಿ ಹೆಚ್ಚುವರಿಯಾಗಿರುವವರನ್ನು ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ನಿಯುಕ್ತಿಗೊಳಿಸಲು ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ವಿಷಯವಾರು ಶಿಕ್ಷಕರು ಭರ್ತಿಯಾದ ಹಿನ್ನೆಲೆಯಲ್ಲಿ ವಿಭಾಗ ಮಟ್ಟದಲ್ಲಿ ಕೌನ್ಸೆಲಿಂಗ್‌ ಮಾಡಲಾಗುತ್ತಿದೆ. ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ವರ್ಗಗೊಂಡರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಶಿಕ್ಷಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಕಲಬುರಗಿ ವಿಭಾಗದ ಆರು ಜಿಲ್ಲೆಗಳ 79 ಪ್ರೌಢಶಾಲೆ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಲಾಗಿದೆ. ಶುಕ್ರವಾರ ನಗರದ ಸಾರ್ವಜನಿಕ ಶಿಕ್ಷಕ ಇಲಾಖೆಯ ಆಯುಕ್ತಾಲಯದಲ್ಲಿ ವಿಭಾಗ ಮಟ್ಟದ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿತ್ತು. ಆದರೆ, 79 ಶಿಕ್ಷಕರಲ್ಲಿ ಬಹುತೇಕ ಶಿಕ್ಷಕರು ಕೌನ್ಸೆಲಿಂಗ್‌ ವಿರೋಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ವಿಭಾಗ ಮಟ್ಟದಲ್ಲಿ ಜೂ.25ರಂದು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಬೇಕಿತ್ತು. ಸಿಎಂ ಗ್ರಾಮ ವಾಸ್ತವ್ಯ ಕಾರಣದಿಂದಾಗಿ ಮುಂದೂಡಲಾಗಿತ್ತು. ಆದರೆ, ಶುಕ್ರವಾರ ಕೌನ್ಸೆಲಿಂಗ್‌ ನಡೆಯುವ ಬಗ್ಗೆ ಮುಂಚೆಯೇ ಮಾಹಿತಿ ನೀಡಿಲ್ಲ. ಒಂದು ದಿನ ಮುಂಚೆ ಕೆಲವರಿಗೆ ಎಸ್‌ಎಂಎಸ್‌, ಮೇಲ್ ಮೂಲಕ ಮಾಹಿತಿ ನೀಡಲಾಗಿದೆ. ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಂದ ಬರುವುದು ಹೇಗೆ ಎಂದು ಶಿಕ್ಷಕರು ಪ್ರಶ್ನಿಸಿದರು.

ಟಿಡಿಎಸ್‌ನಿಂದ ಸಮಸ್ಯೆ: ಶಿಕ್ಷಕರ ಮಾಹಿತಿ ತಂತ್ರಾಂಶ (ಟಿಡಿಎಸ್‌)ದ ಆಧಾರ ಮೇಲೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಶಿಕ್ಷಕರಿಗೆ ಮಾಹಿತಿ ಆಳವಡಿಸುವ ಅವಕಾಶ ನೀಡಲಾಗಿದೆ, ಆದರೆ, ಏನೇ ತಿದ್ದುಪಡಿ ಮಾಡಬೇಕಿದ್ದರೆ ಹಂತ-ಹಂತವಾಗಿ ಮುಖ್ಯ ಶಿಕ್ಷಕರು, ಬಿಇಒ ಮತ್ತು ಡಿಡಿಪಿಐ ಅವರ ಕೈಯಲ್ಲಿದೆ.

ಮೇಲಾಧಿಕಾರಿಗಳು ತಮಗೆ ಬೇಕಾದ ಶಿಕ್ಷಕರನ್ನು ಶಾಲೆಗಳಲ್ಲಿ ಉಳಿಸಿಕೊಂಡು ಬೇರೆವರೆಗೆ ಹೆಚ್ಚುವರಿ ತೋರಿಸುತ್ತಿದ್ದಾರೆ. ಕೆಲವೊಮ್ಮೆ ತಂತ್ರಾಂಶದಲ್ಲಿ ಶಿಕ್ಷಕರಿಂದಾದ ತಪ್ಪುಗಳನ್ನು ತಿದ್ದುಪಡಿ ಮಾಡುವಲ್ಲೂ ಅಲಕ್ಷ್ಯತನ ತೋರುತ್ತಿದ್ದಾರೆ ಎಂದು ಕೆಲ ಶಿಕ್ಷಕರು ಆರೋಪಿಸಿದರು.

ವಿನಾಯ್ತಿ ಇಲ್ಲ: ಶಿಕ್ಷಕರ ವರ್ಗಾವಣೆ ನಿಯಂತ್ರಣ ನಿಯಮಗಳ ಪ್ರಕಾರ ಗಂಭೀರ ಸ್ವರೂಪದ ಕಾಯಿಲೆ (ಹೃದಯ, ಕಿಡ್ನಿ ಸಂಬಂಧಿ, ಕ್ಯಾನ್ಸರ್‌, ಎಚ್ಐವಿ) ಹೊಂದಿದ ಹೆಚ್ಚುವರಿ ಶಿಕ್ಷಕರು ಅಥವಾ ಶಿಕ್ಷಕರ ಪತ್ನಿಯಾಗಲಿ, ಮಕ್ಕಳಾಗಲಿ ಇದ್ದರೆ ಅವರನ್ನು ವರ್ಗಾವಣೆಗೆ ಪರಿಗಣಿಸಲು ಸಾಧ್ಯವಿಲ್ಲ. ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆಯುಳ್ಳ ಶಿಕ್ಷಕರೂ ಕೂಡ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವಂತಿಲ್ಲ. ಸರ್ಕಾರಿ ನೌಕರ ದಂಪತಿ (ಶಿಕ್ಷಕರ ಪತಿ ಅಥವಾ ಪತ್ನಿ)ಗೂ ವರ್ಗಾವಣೆಯಿಂದ ವಿನಾಯ್ತಿ ನೀಡಬೇಕು. ಆದರೆ, ಇದ್ಯಾವುದನ್ನು ಪರಿಗಣಿಸದೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ ಎಂದು ಇನ್ನು ಕೆಲ ಶಿಕ್ಷಕರು ದೂರಿದರು.

ನಮ್ಮ ಮಕ್ಕಳ ಭವಿಷ್ಯವೇನು?: ವರ್ಗಾವಣೆ ಕೌನ್ಸಿಲಿಂಗ್‌ ಪ್ರಕ್ರಿಯೆಗಾಗಿ ಕೆಲ ಶಿಕ್ಷಕರು ತಮ್ಮ ಪುಟ್ಟ ಮಕ್ಕಳೊಂದಿಗೆ ಬಂದಿದ್ದರು. ‘ಎಂಟು ವರ್ಷ ಕಾಲ ಬಳ್ಳಾರಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದೇವೆ. ಎರಡು ವರ್ಷಗಳ ಹಿಂದೆಯಷ್ಟೇ ಕಲಬುರಗಿಗೆ ಬಂದಿದ್ದೇನೆ. ಈಗ ಮತ್ತೆ ಹೆಚ್ಚುವರಿ ಶಿಕ್ಷಕರ ಹೆಸರಲ್ಲಿ ಮತ್ತೂಂದು ಜಿಲ್ಲೆಗೆ ವರ್ಗಾವಣೆಗೊಂಡರೆ ನನ್ನ ಮಕ್ಕಳ ಶಿಕ್ಷಣ, ಭವಿಷ್ಯದ ಗತಿಯೇನು’ ಎಂದು ಶಿಕ್ಷಕಿಯೊಬ್ಬರು ಪ್ರಶ್ನಿಸಿದರು.

ಮುಖ್ಯ ಶಿಕ್ಷಕರ ಬಡ್ತಿ ನೀಡಿ: ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಿಲ್ಲ. ಒಂದು ವೇಳೆ ಸಹ ಶಿಕ್ಷಕರಿಗೆ ಬಡ್ತಿ ನೀಡಿದಲ್ಲಿ ಹೆಚ್ಚುವರಿ ಶಿಕ್ಷಕರು ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆಯಾ ಶಾಲೆಗಳಲ್ಲೇ ಶಿಕ್ಷಕರು ಉಳಿಯುತ್ತಾರೆ. ಹೀಗಾಗಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಗೆ ಇಲಾಖೆ ಚಾಲನೆ ನೀಡಬೇಕೆಂಬ ವಾದವೂ ಕೇಳಿಬಂತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.