![V.kageri](https://www.udayavani.com/wp-content/uploads/2024/07/V.kageri-415x249.jpg)
ಸೊಸೈಟಿಗಳ ಸಮಸ್ಯೆ ಇತ್ಯರ್ಥಕ್ಕೆ ಮನವಿ
Team Udayavani, Jun 12, 2022, 11:26 AM IST
![5problem](https://www.udayavani.com/wp-content/uploads/2022/06/5problem-620x348.jpg)
ಆಳಂದ: ಸರ್ಕಾರಗಳು ಕೈಗೊಂಡ ಸಾಲಮನ್ನಾ ಫಲಾನುಭವಿಗಳಿಗೆ ಅನ್ವಯಿಸುವುಂತೆ ಕ್ರಮ ಸೇರಿದಂತೆ ಸೊಸೈಟಿಗಳ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಬೇಕು ಎಂದು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ನೂತನ ಎಂಡಿ ಶರಣಬಸಪ್ಪ ಬೆಣ್ಣೂರ ಅವರಿಗೆ ಮಾದನಹಿಪ್ಪರಗಾ ಸೊಸೈಟಿ ಸಂಘದ ಅಧ್ಯಕ್ಷ ಲಿಂಗರಾಜ ಪಾಟೀಲ ಝಳಕಿ ನೇತೃತ್ವದ ನಿಯೋಗವು ಭೇಟಿ ಮಾಡಿ ಮನವಿ ಮಾಡಿದೆ.
ಈ ಕುರಿತು ನೂತನ ಎಂಡಿ ಶರಣಬಸಪ್ಪ ಬೆಣ್ಣೂರ ಅವರಿಗೆ ಸನ್ಮಾನಿಸಿ ಗೌರವಿಸಿದ ನಿಯೋಗದ ಮುಖಂಡ ಲಿಂಗರಾಜ ಪಾಟೀಲ ಅವರು, ರೈತರಿಗೆ ಅನುಕೂಲವಾಗುವ ಹೊಸ ಯೋಜನೆಗಳನ್ನು ಕೈಗೊಳ್ಳಬೇಕು. ಮಾದನಹಿಪ್ಪರಗಾ ಸೊಸೈಟಿಗೆ ರಸಗೊಬ್ಬರ ವಿತರಣೆ ಅನುಮತಿ ನೀಡಬೇಕು. ಸರ್ಕಾರ ಕೈಗೊಂಡ ಸಾಲಮನ್ನಾ ಯೋಜನೆ ಅನೇಕ ಫಲಾನುಭವಿಗಳ ಸಾಲಮನ್ನಾವಾಗಿಲ್ಲ. ಇಂಥ ಫಲಾನುಭವಿಗಳಿಗೆ ಶೀಘ್ರವೇ ಸಾಲಮನ್ನಾ ಮಂಜೂರಾತಿ ನೀಡಲು ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ಈಡೇರಿಕೆಗೆ ಮನವಿ ಮಾಡಿದರು.
ನಿಯೋಗದ ಅಹವಾಲು ಆಲಿಸಿದ ಬೆಣ್ಣೂರ ಅವರು, ಸೊಸೈಟಿಗಳ ಬೇಡಿಕೆ ಕುರಿತು ವಾರದಲ್ಲಿ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಾದನಹಿಪ್ಪರಗಾ ಸೊಸೈಟಿ ಕಾರ್ಯದರ್ಶಿ ಶಿವಾನಂದ ಪಾಟೀಲ, ಮಲ್ಲಿನಾಥ ಘಂಟೆ, ಭೋಗೇಶ ಭೊರಳ್ಳಿ ಹಾಗೂ ಆಳಂದ ತಾಲೂಕಿನ ಅನೇಕ ಸೊಸೈಟಿಗಳ ಕಾರ್ಯದರ್ಶಿಗಳು ಹಾಜರಿದ್ದರು.
ಟಾಪ್ ನ್ಯೂಸ್
![V.kageri](https://www.udayavani.com/wp-content/uploads/2024/07/V.kageri-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/WADI-150x75.jpg)
Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
![KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ](https://www.udayavani.com/wp-content/uploads/2024/07/KKRDB-150x83.jpg)
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.